AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ಪುರುಷರಲ್ಲಿ ಬೋಳುತಲೆ ಹೆಚ್ಚಾಗಲು ಕಾರಣವೇನು?

ಕೂದಲು ಮಹಿಳೆಯರಿಗೆ ಮಾತ್ರವಲ್ಲ ಪುರುಷರ ಸೌಂದರ್ಯಕ್ಕೂ ಬಹಳ ಮುಖ್ಯ. ಮಹಿಳೆಯರಿಗಿಂತಲೂ ಪುರುಷರಲ್ಲಿ ಬಹಳ ಬೇಗ ಬೋಳುತಲೆಯ ಸಮಸ್ಯೆ ಉಂಟಾಗುತ್ತದೆ. ತಲೆಕೂದಲನ್ನು ಮಾನವನ ದೇಹದ ಅತ್ಯಂತ ನಿರ್ಣಾಯಕ ಅಂಶಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು, ವಿಶೇಷವಾಗಿ ಯುವಜನರು ಕೂದಲು ಉದುರುವಿಕೆ, ಕೂದಲು ತೆಳುವಾಗುವ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಕಾರಣವೇನು?

Hair Care: ಪುರುಷರಲ್ಲಿ ಬೋಳುತಲೆ ಹೆಚ್ಚಾಗಲು ಕಾರಣವೇನು?
ಸಾಂದರ್ಭಿಕ ಚಿತ್ರ Image Credit source: iStock
ಸುಷ್ಮಾ ಚಕ್ರೆ
|

Updated on: Feb 01, 2024 | 7:08 PM

Share

ಪುರುಷರಲ್ಲಿ ಬೋಳುತಲೆಯ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಅನುವಂಶೀಯತೆ, ಹಾರ್ಮೋನ್ ಸಮಸ್ಯೆ, ಆಹಾರ ಪದ್ಧತಿ, ಪರಿಸರ ಮಾಲಿನ್ಯ ಮತ್ತು ಜೀವನಶೈಲಿಯೂ ಕಾರಣವಾಗುತ್ತದೆ. ಪುರುಷರಲ್ಲಿ ಕಂಡುಬರುವ ಬೋಳುತಲೆಯನ್ನು ಆಂಡ್ರೊಜೆನೆಟಿಕ್ ಅಲೋಪೆಸಿಯಾ ಎಂದು ಕರೆಯಲಾಗುತ್ತದೆ. ಸುಮಾರು ಶೇ. 50ರಷ್ಟು ಜನಸಂಖ್ಯೆಯಲ್ಲಿ ಕೂದಲು ಉದುರುವಿಕೆಗೆ ಇದು ಸಾಮಾನ್ಯ ಕಾರಣವಾಗಿದೆ.

ಕೂದಲು ಉದುರುವಿಕೆಗೆ ಕಾರಣಗಳೇನು?:

– ಸರಿಯಾದ ಸಮತೋಲಿತ ಆಹಾರವು ಕೂದಲ ಆರೋಗ್ಯವನ್ನು ಹೆಚ್ಚಿಸುತ್ತದೆ. ಅದು ಕೂದಲನ್ನು ಆರೋಗ್ಯಕರವಾಗಿ ಮಾಡುತ್ತದೆ.

ಇದನ್ನೂ ಓದಿ: Hair Care: ಕೂದಲು ದಟ್ಟವಾಗಿ ಬೆಳೆಯಬೇಕಾ?; ಶುಂಠಿ ರಸವನ್ನು ಈ ರೀತಿ ಬಳಸಿ

– ಅನಿಯಮಿತ ನಿದ್ರೆ, ಆಹಾರ ಮತ್ತು ಧೂಮಪಾನದಂತಹ ಅಭ್ಯಾಸಗಳು ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತವೆ.

– ಕೂದಲ ರಕ್ಷಣೆಯ ಉತ್ಪನ್ನಗಳ ಅತಿಯಾದ ಬಳಕೆ ಅಥವಾ ತಪ್ಪಾದ ಬಳಕೆ ಕೂಡ ಕೂದಲು ಉದುರಲು ಕಾರಣವಾಗಬಹುದು. ಸ್ಟೈಲಿಂಗ್ ಉಪಕರಣಗಳು ಮತ್ತು ಸಾಧನಗಳು ಕೂದಲಿಗೆ ಅಷ್ಟು ಒಳ್ಳೆಯದಲ್ಲ.

– ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುವುದಲ್ಲದೆ ಕೂದಲು ಉದುರುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒತ್ತಡವು ನಿಮ್ಮ ಕೂದಲಿನ ವಿನ್ಯಾಸವನ್ನು ಸಹ ಹಾಳುಮಾಡುತ್ತದೆ.

ಇದನ್ನೂ ಓದಿ: Hair Care: ನಟಿ ಸಾಯಿ ಪಲ್ಲವಿಯ ಉದ್ದ ಕೂದಲಿನ ರಹಸ್ಯವೇನು?

ಕೂದಲು ಉದುರು ತಲೆ ಬೋಳಾಗುವುದನ್ನು ತಡೆಯಲು ನಮ್ಮ ದೇಹಕ್ಕೆ ಅಗತ್ಯವಿದ್ದಷ್ಟು ನೀರು ಕುಡಿಯುವುದು ಕೂಡ ಬಹಳ ಮುಖ್ಯ. ನಿರ್ಜಲೀಕರಣ ನಿಮ್ಮ ದೇಹ ಮತ್ತು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ದಿನವಿಡೀ ಸಾಕಷ್ಟು ನೀರು ಕುಡಿಯುವುದರಿಂದ ಅದು ನಿಮ್ಮ ದೇಹವನ್ನು ತೇವಾಂಶದಿಂದಿರಿಸುತ್ತದೆ. ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಕೂದಲಿಗೆ ಬಿಸಿಯಾದ ಎಣ್ಣೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗಿ, ಕೂದಲು ಉದುರುವಿಕೆ ಕಡಿಮೆಯಾಗುತ್ತದೆ. ಜೊತೆಗೆ, ಪೌಷ್ಟಿಕಾಂಶಭರಿತ ಆಹಾರ ಸೇವಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್