AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ಪುರುಷರಲ್ಲಿ ಬೋಳುತಲೆ ಹೆಚ್ಚಾಗಲು ಕಾರಣವೇನು?

ಕೂದಲು ಮಹಿಳೆಯರಿಗೆ ಮಾತ್ರವಲ್ಲ ಪುರುಷರ ಸೌಂದರ್ಯಕ್ಕೂ ಬಹಳ ಮುಖ್ಯ. ಮಹಿಳೆಯರಿಗಿಂತಲೂ ಪುರುಷರಲ್ಲಿ ಬಹಳ ಬೇಗ ಬೋಳುತಲೆಯ ಸಮಸ್ಯೆ ಉಂಟಾಗುತ್ತದೆ. ತಲೆಕೂದಲನ್ನು ಮಾನವನ ದೇಹದ ಅತ್ಯಂತ ನಿರ್ಣಾಯಕ ಅಂಶಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು, ವಿಶೇಷವಾಗಿ ಯುವಜನರು ಕೂದಲು ಉದುರುವಿಕೆ, ಕೂದಲು ತೆಳುವಾಗುವ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಕಾರಣವೇನು?

Hair Care: ಪುರುಷರಲ್ಲಿ ಬೋಳುತಲೆ ಹೆಚ್ಚಾಗಲು ಕಾರಣವೇನು?
ಸಾಂದರ್ಭಿಕ ಚಿತ್ರ Image Credit source: iStock
ಸುಷ್ಮಾ ಚಕ್ರೆ
|

Updated on: Feb 01, 2024 | 7:08 PM

Share

ಪುರುಷರಲ್ಲಿ ಬೋಳುತಲೆಯ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಅನುವಂಶೀಯತೆ, ಹಾರ್ಮೋನ್ ಸಮಸ್ಯೆ, ಆಹಾರ ಪದ್ಧತಿ, ಪರಿಸರ ಮಾಲಿನ್ಯ ಮತ್ತು ಜೀವನಶೈಲಿಯೂ ಕಾರಣವಾಗುತ್ತದೆ. ಪುರುಷರಲ್ಲಿ ಕಂಡುಬರುವ ಬೋಳುತಲೆಯನ್ನು ಆಂಡ್ರೊಜೆನೆಟಿಕ್ ಅಲೋಪೆಸಿಯಾ ಎಂದು ಕರೆಯಲಾಗುತ್ತದೆ. ಸುಮಾರು ಶೇ. 50ರಷ್ಟು ಜನಸಂಖ್ಯೆಯಲ್ಲಿ ಕೂದಲು ಉದುರುವಿಕೆಗೆ ಇದು ಸಾಮಾನ್ಯ ಕಾರಣವಾಗಿದೆ.

ಕೂದಲು ಉದುರುವಿಕೆಗೆ ಕಾರಣಗಳೇನು?:

– ಸರಿಯಾದ ಸಮತೋಲಿತ ಆಹಾರವು ಕೂದಲ ಆರೋಗ್ಯವನ್ನು ಹೆಚ್ಚಿಸುತ್ತದೆ. ಅದು ಕೂದಲನ್ನು ಆರೋಗ್ಯಕರವಾಗಿ ಮಾಡುತ್ತದೆ.

ಇದನ್ನೂ ಓದಿ: Hair Care: ಕೂದಲು ದಟ್ಟವಾಗಿ ಬೆಳೆಯಬೇಕಾ?; ಶುಂಠಿ ರಸವನ್ನು ಈ ರೀತಿ ಬಳಸಿ

– ಅನಿಯಮಿತ ನಿದ್ರೆ, ಆಹಾರ ಮತ್ತು ಧೂಮಪಾನದಂತಹ ಅಭ್ಯಾಸಗಳು ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತವೆ.

– ಕೂದಲ ರಕ್ಷಣೆಯ ಉತ್ಪನ್ನಗಳ ಅತಿಯಾದ ಬಳಕೆ ಅಥವಾ ತಪ್ಪಾದ ಬಳಕೆ ಕೂಡ ಕೂದಲು ಉದುರಲು ಕಾರಣವಾಗಬಹುದು. ಸ್ಟೈಲಿಂಗ್ ಉಪಕರಣಗಳು ಮತ್ತು ಸಾಧನಗಳು ಕೂದಲಿಗೆ ಅಷ್ಟು ಒಳ್ಳೆಯದಲ್ಲ.

– ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುವುದಲ್ಲದೆ ಕೂದಲು ಉದುರುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒತ್ತಡವು ನಿಮ್ಮ ಕೂದಲಿನ ವಿನ್ಯಾಸವನ್ನು ಸಹ ಹಾಳುಮಾಡುತ್ತದೆ.

ಇದನ್ನೂ ಓದಿ: Hair Care: ನಟಿ ಸಾಯಿ ಪಲ್ಲವಿಯ ಉದ್ದ ಕೂದಲಿನ ರಹಸ್ಯವೇನು?

ಕೂದಲು ಉದುರು ತಲೆ ಬೋಳಾಗುವುದನ್ನು ತಡೆಯಲು ನಮ್ಮ ದೇಹಕ್ಕೆ ಅಗತ್ಯವಿದ್ದಷ್ಟು ನೀರು ಕುಡಿಯುವುದು ಕೂಡ ಬಹಳ ಮುಖ್ಯ. ನಿರ್ಜಲೀಕರಣ ನಿಮ್ಮ ದೇಹ ಮತ್ತು ಕೂದಲಿನ ಮೇಲೆ ಪರಿಣಾಮ ಬೀರುತ್ತದೆ. ದಿನವಿಡೀ ಸಾಕಷ್ಟು ನೀರು ಕುಡಿಯುವುದರಿಂದ ಅದು ನಿಮ್ಮ ದೇಹವನ್ನು ತೇವಾಂಶದಿಂದಿರಿಸುತ್ತದೆ. ಇದು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಕೂದಲಿಗೆ ಬಿಸಿಯಾದ ಎಣ್ಣೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗಿ, ಕೂದಲು ಉದುರುವಿಕೆ ಕಡಿಮೆಯಾಗುತ್ತದೆ. ಜೊತೆಗೆ, ಪೌಷ್ಟಿಕಾಂಶಭರಿತ ಆಹಾರ ಸೇವಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ