AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair loss: ಕೂದಲು ಉದುರುವಿಕೆ ಸಮಸ್ಯೆಗೆ ಪೇರಳೆ ಎಲೆಯ ಹೇರ್​​ ಮಾಸ್ಕ್​​​ ತಯಾರಿಸಿ

ಪೇರಳೆ ಎಲೆಗಳಲ್ಲಿ ಹಲವಾರು ಪೋಷಕಾಂಶಗಳು ಮತ್ತು ಔಷಧೀಯ ಗುಣಗಳಿವೆ. ಈ ಎಲೆ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಪೇರಳೆ ಎಲೆಗಳಲ್ಲಿ ಕಂಡುಬರುವ ಲೈಕೋಪೀನ್ ಎಂಬ ರಾಸಾಯನಿಕ ಸಂಯುಕ್ತವು ಕೂದಲನ್ನು ಸೂರ್ಯನ ಕಿರಣಗಳಿಂದ ರಕ್ಷಿಸುತ್ತದೆ. ಪೇರಳೆ ಎಲೆಗಳಿಂದ ಕೂದಲು ಮಾತ್ರವಲ್ಲದೆ ನೆಗಡಿ, ಕೆಮ್ಮು, ಬಾಯಿ ಹುಣ್ಣು, ಗಂಟಲು ನೋವು ಮುಂತಾದ ಸಮಸ್ಯೆಗಳನ್ನೂ ನಿವಾರಿಸಬಹುದು.

Hair loss: ಕೂದಲು ಉದುರುವಿಕೆ ಸಮಸ್ಯೆಗೆ ಪೇರಳೆ ಎಲೆಯ ಹೇರ್​​ ಮಾಸ್ಕ್​​​ ತಯಾರಿಸಿ
Hair Care TipsImage Credit source: Pinterest
ಅಕ್ಷತಾ ವರ್ಕಾಡಿ
|

Updated on:Nov 16, 2023 | 12:32 PM

Share

ಕೂದಲು ಉದುರುವಿಕೆ (Hair loss) ಸಮಸ್ಯೆ ಪ್ರತಿಯೊಬ್ಬರನ್ನು ಕಾಡುವ ಸಮಸ್ಯೆಯಾಗಿದೆ. ಸರಿಯಾದ ಪೋಷಣೆಯಿಲ್ಲದೆ ಕೂದಲು ದುರ್ಬಲವಾಗುತ್ತದೆ. ವಯಸ್ಸಿನ ಹೊರತಾಗಿಯೂ, ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರ ಹಾಗೂ ಮಾಲಿನ್ಯದಿಂದಾಗಿ ಕೂದಲು ಉದುರಿವಿಕೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ನೆತ್ತಿಯೊಳಗೆ ಕಾಲಜನ್ ಹಾನಿಯಿಂದಾಗಿ ಕೂದಲಿನ ಕಿರುಚೀಲಗಳು ದುರ್ಬಲಗೊಳ್ಳುತ್ತವೆ. ಇದು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ಆದ್ದರಿಂದ ಕೆಲವೊಂದು ಮನೆಮದ್ದು(Home Remedies) ಗಳ ಮೂಲಕ ಕೂದಲು ಉದುರುವಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

ಪೇರಳೆ ಎಲೆಗಳ ಮಾಸ್ಕ್:

ಮೊದಲು ಪೇರಳೆ ಎಲೆಗಳನ್ನು ತೆಗೆದುಕೊಂಡು ತೊಳೆದುಕೊಳ್ಳಿ. ನಂತರ ಈ ಎಲೆಗಳನ್ನು ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ನೆತ್ತಿಯಿಂದ ಕೂದಲಿನ ತುದಿಯ ವರೆಗೆ ಚೆನ್ನಾಗಿ ಹಚ್ಚಿ. ಒಂದು ಗಂಟೆಯ ನಂತರ ಸ್ನಾನ ಮಾಡಿ. ವಾರದಲ್ಲಿ ಎರಡು ಬಾರಿ ಹೀಗೆ ಮಾಡಿ ಮತ್ತು ಒಂದು ತಿಂಗಳೊಳಗೆ ಉತ್ತಮ ಫಲಿತಾಂಶವನ್ನು ಕಾಣಬಹುದು.

ಪೇರಳೆ ಎಲೆಯ ನೀರು:

ಪೇರಳೆ ಎಲೆಗಳನ್ನು ತೆಗೆದುಕೊಂಡು ಸ್ವಚ್ಛವಾಗಿ ತೊಳೆದು ಬಿಸಿನೀರಿನಲ್ಲಿ ಹಾಕಿ ಕುದಿಸಿ. ತಣ್ಣಗಾದ ನಂತರ ಸೋಸಿಕೊಳ್ಳಿ. ಈಗ ಈ ಮದ್ದನ್ನು ಕೂದಲಿನ ಬೇರುಗಳಿಂದ ತುದಿಯವರೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು. ಒಂದು ಗಂಟೆಯ ನಂತರ, ತಲೆಗೆ ಸ್ನಾನ ಮಾಡಿ. ಹೀಗೆ ಮಾಡುವುದರಿಂದ ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಉದ್ದವಾಗಿ ಬೆಳೆಯುತ್ತದೆ. ಯಾವುದೇ ರಾಸಾಯನಿಕಗಳನ್ನು ಬಳಸುವ ಬದಲು ಪೇರಳೆ ಎಲೆಗಳನ್ನು ಬಳಸುವುದರಿಂದ ಈ ಕೂದಲಿನ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು.

ಇದನ್ನೂ ಓದಿ: ಒಂದು ವಾರದಲ್ಲೇ ಮೊಡವೆ ಸಮಸ್ಯೆ ಹೋಗಲಾಡಿಸಲು ಪುದೀನಾ ಫೇಸ್ ಪ್ಯಾಕ್

ಇತರ  ಪ್ರಯೋಜನಗಳು:

ಪೇರಳೆ ಎಲೆಗಳಲ್ಲಿ ಹಲವಾರು ಪೋಷಕಾಂಶಗಳು ಮತ್ತು ಔಷಧೀಯ ಗುಣಗಳಿವೆ. ಈ ಎಲೆ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಪೇರಳೆ ಎಲೆಗಳಲ್ಲಿ ಕಂಡುಬರುವ ಲೈಕೋಪೀನ್ ಎಂಬ ರಾಸಾಯನಿಕ ಸಂಯುಕ್ತವು ಕೂದಲನ್ನು ಸೂರ್ಯನ ಕಿರಣಗಳಿಂದ ರಕ್ಷಿಸುತ್ತದೆ. ಪೇರಲ ಎಲೆಗಳಿಂದ ಕೂದಲು ಮಾತ್ರವಲ್ಲದೆ ನೆಗಡಿ, ಕೆಮ್ಮು, ಬಾಯಿ ಹುಣ್ಣು, ಗಂಟಲು ನೋವು ಮುಂತಾದ ಸಮಸ್ಯೆಗಳನ್ನೂ ನಿವಾರಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:17 pm, Thu, 16 November 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​