AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Loss: ಕೂದಲು ಉದುರಲು ಕಾರಣವೇನು? ತಡೆಗಟ್ಟಲು ಏನು ಮಾಡಬೇಕು?

ಪುರುಷರಲ್ಲಿ ಕೂದಲು ಉದುರುವಿಕೆಯು ಸಾಮಾನ್ಯವಾಗಿ ನೆತ್ತಿಯಲ್ಲಿ ಪ್ರಾರಂಭವಾಗುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ, ಹೆಂಗಸರಲ್ಲಿ ಕೂದಲು ವಿಪರೀತ ತೆಳುವಾಗುವುದರಿಂದ ಸಮಸ್ಯೆ ಆರಂಭವಾಗುತ್ತದೆ. ಅಗತ್ಯ ಪೋಷಕಾಂಶಗಳು, ಹಾರ್ಮೋನುಗಳು ಮತ್ತು ಥೈರಾಯ್ಡ್ ಮಟ್ಟಗಳಲ್ಲಿನ ಅಸಮತೋಲನವು ಕೂದಲು ಉದುರಲು ಕಾರಣವಾಗಬಹುದು.

Hair Loss: ಕೂದಲು ಉದುರಲು ಕಾರಣವೇನು? ತಡೆಗಟ್ಟಲು ಏನು ಮಾಡಬೇಕು?
ಕೂದಲು ಉದುರುವಿಕೆ Image Credit source: iStock
ಸುಷ್ಮಾ ಚಕ್ರೆ
|

Updated on: Oct 21, 2023 | 1:28 PM

Share

ನಮ್ಮ ಕೂದಲು ನಮ್ಮ ಆತ್ಮವಿಶ್ವಾಸ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುತ್ತದೆ. ಕೂದಲು ಆರೋಗ್ಯವಾಗಿದ್ದರೆ ನಾವೂ ಆರೋಗ್ಯಯುತವಾಗಿರುತ್ತೇವೆ. ಕೂದಲು ಉದುರುವುದು ಎಲ್ಲರಿಗೂ ಬಹಳ ಬೇಸರದ ಸಂಗತಿ. ಅದು ನಮ್ಮ ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ. ಯುವಕರಿಂದ ವೃದ್ಧರವರೆಗೆ ಎಲ್ಲರಿಗೂ ಕೂದಲು ಉದುರುವಿಕೆ ದೊಡ್ಡ ಸಮಸ್ಯೆಯಾಗಿದೆ. ಪ್ರತಿದಿನ 50ರಿಂದ 100 ಕೂದಲು ಉದುರುವುದು ಸಾಮಾನ್ಯ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಹೊಸ ಕೂದಲು ಆ ಜಾಗದಲ್ಲಿ ಮತ್ತೆ ಬೆಳೆಯುತ್ತವೆ.

ಕೂದಲು ಉದುರುವುದು ಒಂದೇ ರೀತಿಯ ಸಮಸ್ಯೆಯಲ್ಲ. ಇದು ವಿವಿಧ ರೂಪಗಳಲ್ಲಿ ಪ್ರಕಟವಾಗುತ್ತದೆ. ಅತಿಯಾದ ಕೂದಲು ಉದುರುವಿಕೆ ಮತ್ತು ತೆಳುವಾಗುವುದು ಮೊದಲು ಕಾಣಿಸಿಕೊಳ್ಳುವ ತೊಂದರೆ. ಅನುವಂಶಿಕ ಅಂಶಗಳು ಹೆಚ್ಚಾಗಿ ಕೂದಲು ತೆಳುವಾಗುವುದಕ್ಕೆ ಒಂದು ಮುಖ್ಯ ಕಾರಣವಾಗಿದೆ. ಇದು ಗಂಡು ಮತ್ತು ಹೆಣ್ಣುಗಳಲ್ಲಿ ವಿಭಿನ್ನವಾಗಿ ಪ್ರಕಟವಾಗುತ್ತದೆ. ಪುರುಷರಲ್ಲಿ ಕೂದಲು ಉದುರುವಿಕೆಯು ಸಾಮಾನ್ಯವಾಗಿ ನೆತ್ತಿಯಲ್ಲಿ ಪ್ರಾರಂಭವಾಗುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ, ಹೆಂಗಸರಲ್ಲಿ ಕೂದಲು ವಿಪರೀತ ತೆಳುವಾಗುವುದರಿಂದ ಸಮಸ್ಯೆ ಆರಂಭವಾಗುತ್ತದೆ. ಅಗತ್ಯ ಪೋಷಕಾಂಶಗಳು, ಹಾರ್ಮೋನುಗಳು ಮತ್ತು ಥೈರಾಯ್ಡ್ ಮಟ್ಟಗಳಲ್ಲಿನ ಅಸಮತೋಲನವು ಕೂದಲು ಉದುರಲು ಕಾರಣವಾಗಬಹುದು. ಸಮತೋಲಿತ ಆಹಾರವನ್ನು ಸೇವಿಸುವುದು ಮತ್ತು ಪೌಷ್ಠಿಕಾಂಶದ ಕೊರತೆಯನ್ನು ಪರಿಹರಿಸುವುದು ಅತ್ಯಗತ್ಯ.

ಇದನ್ನೂ ಓದಿ: Hair Care Tips: ಮರದ ಬಾಚಣಿಗೆ ಬಳಸಿದರೆ ಕೂದಲು ಉದ್ದವಾಗಿ ಬೆಳೆಯುತ್ತಾ?

ಬೆಂಗಳೂರಿನಂತಹ ಮಹಾನಗರಗಳಲ್ಲಿ, ರಿಬಾಂಡಿಂಗ್, ಸ್ಟ್ರೈಟ್ನಿಂಗ್ ಮತ್ತು ಕಲರಿಂಗ್‌ನಂತಹ ಸೌಂದರ್ಯ ಚಿಕಿತ್ಸೆಗಳು ಸಾಮಾನ್ಯವಾಗಿದೆ. ಈ ಚಿಕಿತ್ಸೆಗಳು ಸಾಮಾನ್ಯವಾಗಿ ರಾಸಾಯನಿಕಗಳ ಬಳಕೆಯನ್ನು ಒಳಗೊಂಡಿರುತ್ತದೆ. ಇದು ಕೂದಲನ್ನು ಹಾನಿಗೊಳಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ಉಲ್ಬಣಗೊಳಿಸುತ್ತದೆ.

ಕೂದಲು ಉದುರುವಿಕೆ ಅಲೋಪೆಸಿಯಾ ಅರೆಟಾ ಮತ್ತು ಗಾಯದ ಬೊಕ್ಕತಲೆಯಂತಹ ಪರಿಸ್ಥಿತಿಗಳಿಂದ ಕೂಡ ಉಂಟಾಗುತ್ತದೆ. ಈ ಸಮಸ್ಯೆಗಳಿಗೆ ವಿಶೇಷ ಚಿಕಿತ್ಸೆಗಳು ಬೇಕಾಗುತ್ತವೆ. ಅರ್ಹ ಚರ್ಮರೋಗತಜ್ಞರಿಂದ ಇದಕ್ಕೆ ಚಿಕಿತ್ಸೆ ಪಡೆಯಬೇಕು. ಅಲೋಪೆಸಿಯಾ ಮತ್ತು ಬೊಕ್ಕತಲೆ ಎಲ್ಲಾ ವಯೋಮಾನದವರಿಗೂ ಬರಲು ಹಲವು ಕಾರಣಗಳಿವೆ. ಬಾಲ್ಯದಿಂದ ವೃದ್ಧಾಪ್ಯದವರೆಗೆ ಈ ಸಮಸ್ಯೆ ಕಂಡುಬರುತ್ತದೆ. ಕಬ್ಬಿಣದ ಅಂಶದ ಕೊರತೆಯ ರಕ್ತಹೀನತೆ ಕೂದಲು ಉದುರುವಿಕೆಗೆ ಕಾರಣವಾಗಬಹುದು.

ಇದನ್ನೂ ಓದಿ: Beauty Tips: ಚರ್ಮ ಮತ್ತು ಕೂದಲಿನ ಸೌಂದರ್ಯಕ್ಕೆ ರಾಗಿಯ ಚಮತ್ಕಾರ

ಪುರುಷರ ತಲೆ ಅಲ್ಲಲ್ಲಿ ಬೋಳಾಗುವುದಕ್ಕೆ ಆಂಡ್ರೊಜೆನಿಕ್ ಅಲೋಪೆಸಿಯಾ ಎಂಬ ಸಮಸ್ಯೆ ಕಾರಣವಾಗಿದೆ. 25% ಪುರುಷರ ತಲೆ ಬೋಳಾಗುವ ಪ್ರಕರಣಗಳಲ್ಲಿ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಹೆಚ್ಚಾಗಿದ್ದಾರೆ. ಇದಕ್ಕೆ ಅನುವಂಶಿಕ ಅಥವಾ ಕೆಲವು ಔಷಧಿಗಳೂ ಕಾರಣವಿರಬಹುದು. ಆದರೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡಿದರೆ ಪುರುಷರ ತಲೆ ಬೋಳಾಗುವುದನ್ನು ನಿಯಂತ್ರಿಸಬಹುದು. ಮಹಿಳೆಯರಲ್ಲಿ ಅತಿಯಾಗಿ ಕೂದಲು ಉದುರಲು ಅವರ ಹಾರ್ಮೋನುಗಳಲ್ಲಿ ಆಗುವ ಬದಲಾವಣೆಗಳೂ ಕಾರಣ. ಇದು ನೆತ್ತಿಯ ಮೇಲೆ ಸಣ್ಣ ಬೋಳು ತೇಪೆಗಳೊಂದಿಗೆ ಪ್ರಾರಂಭವಾಗುತ್ತದೆ. ಇದು ಕ್ರಮೇಣ ಹೆಚ್ಚಾಗುತ್ತದೆ. ಕೂದಲು ಉದುರುವಿಕೆ ಹೆಚ್ಚಾದರೆ ಕೂದಲು ಕಸಿ, ಔಷಧಿಗಳು ಮತ್ತು ಇಂಜೆಕ್ಷನ್​ಗಳು, ಮೆಸೊಥೆರಪಿ ಮತ್ತು ಪ್ಲೇಟ್ಲೆಟ್-ರಿಚ್ ಪ್ಲಾಸ್ಮಾ ಹೀಗೆ ಕೆಲವು ಚಿಕಿತ್ಸೆಗಳನ್ನು ಮಾಡಿಸಿಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ