AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Fall: ಮಳೆಗಾಲದಲ್ಲಿ ಮಹಿಳೆಯರು ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಮಳೆಗಾಲದಲ್ಲಿ ತಲೆಸ್ನಾನ ಮಾಡಿದ ಬಳಿಕ ಕೂದಲು ಸಂಜೆಯವರೆಗೂ ಒಣಗುವುದೇ ಇಲ್ಲ ಇದರಿಂದಾಗಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚಾಗುತ್ತದೆ. ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿ, ಉದುರುವ ಕೂದಲಿಗೆ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸುಂದರ ಕೇಶರಾಶಿಯನ್ನು ಪಡೆಯಬಹುದು.

Hair Fall: ಮಳೆಗಾಲದಲ್ಲಿ ಮಹಿಳೆಯರು ಕೂದಲು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್
Hairfall
TV9 Web
| Updated By: ನಯನಾ ರಾಜೀವ್|

Updated on: Jun 26, 2022 | 9:30 PM

Share

ಮಳೆಗಾಲದಲ್ಲಿ ತಲೆಸ್ನಾನ ಮಾಡಿದ ಬಳಿಕ ಕೂದಲು ಸಂಜೆಯವರೆಗೂ ಒಣಗುವುದೇ ಇಲ್ಲ ಇದರಿಂದಾಗಿ ಕೂದಲು ಉದುರುವ ಸಮಸ್ಯೆಯೂ ಹೆಚ್ಚಾಗುತ್ತದೆ. ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿ, ಉದುರುವ ಕೂದಲಿಗೆ ಪರಿಹಾರ ಕಂಡುಕೊಳ್ಳಬಹುದು ಹಾಗೂ ಸುಂದರ ಕೇಶರಾಶಿಯನ್ನು ಪಡೆಯಬಹುದು.

ಒತ್ತಡ ಹೆಚ್ಚಾದರೂ ಕೂದಲು ಉದುರುತ್ತೆ ಒತ್ತಡ ಹಾಗೂ ಖಿನ್ನತೆಯಿಂದ ನೀವು ಬಳಲುತ್ತಿದ್ದರೆ ಕೂಡಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅದನ್ನು ಹೊರತುಪಡಿಸಿ ಹೊಟ್ಟು, ಡ್ರೈನೆಸ್​ನಿಂದಾಗಿ ಕೂದಲು ಉದುರುತ್ತದೆ.

ಕೂದಲನ್ನು ಕವರ್ ಮಾಡಿ ಮುಂಗಾರಿನಲ್ಲಿ ಹೊರಗೆ ಹೋಗುವಾಗ ಸ್ಕಾರ್ಫ್, ಬಟ್ಟೆ, ಕ್ಯಾಪ್, ಛತ್ರಿ ಯಾವುದಾದರೊಂದನ್ನು ಬಳಸಿ ಕೂದಲಿಗೆ ನೀರು ತಾಕದಂತೆ ನೊಡಿಕೊಳ್ಳಿ. ಮಳೆಯ ನೀರಿನಲ್ಲಿ ಮಾಲಿನ್ಯಕಾರಕ ಅಂಶಗಳಿರುತ್ತವೆ.

ಬೆಚ್ಚನೆಯ ಎಣ್ಣೆಯ ಮಸಾಜ್ ಮಾಡಿ ಬೆಚ್ಚನೆಯ ಎಣ್ಣೆಯ ಮಸಾಜ್ ಮಾಡಿ, ಇದರಿಂದಾಗಿ ತಲೆಯಲ್ಲಿ ರಕ್ತಪರಿಚಲನೆ ಉತ್ತಮವಾಗಿ, ಕೂದಲು ಉದುರುವ ಸಮಸ್ಯೆಯೂ ಕಡಿಮೆಯಾಗಲಿದೆ.

ಉತ್ತಮ ಆಹಾರ ಸೇವನೆ ಮಾಡಿ ಮಳೆಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಹೀಗಾಗಿ ನಿಮ್ಮ ಆರೋಗ್ಯ, ಚರ್ಮ ಹಾಗೂ ಕೂದಲಿನ ರಕ್ಷಣೆ ಮಾಡಲು ಉತ್ತಮ ಆಹಾರವನ್ನು ತಿನ್ನಿ. ಹೆಚ್ಚು ನೀರು ಕುಡಿಯಿರಿ, ವಿಟಮಿನ್ ಇ ಹೆಚ್ಚಿರುವ ಆಹಾರವನ್ನು ಸೇವಿಸಿ.

ಕೂದಲು ಉದುರುವುದನ್ನು ತಡೆಯಲು ಮನೆಮದ್ದು ದಾಸವಾಳದ ಎಲೆಯನ್ನು ತೆಗೆದುಕೊಂಡು, ಬಿಸಿನೀರಿನಲ್ಲಿ ಅರ್ಧ ಗಂಟೆ ನೆನೆಸಿಡಿ. ನಂತರ ಅವನ್ನು ಕೈಯಿಂದಲೇ ಹಿಸುಕಿ ಆ ಲೋಳೆ ರಸವನ್ನು ತಲೆ ಸ್ನಾನವಾದ ನಂತರ ಕೂದಲಿಗೆ ಕಂಡಿಷರ್ ಲೇಪಿಸುವಂತೆ ಹಚ್ಚಿಕೊಂಡು ಕೆಲವು ನಿಮಿಷ ಮಸಾಜು ಮಾಡಿ. ಕೂದಲನ್ನು ತೊಳೆಯಿರಿ. ಇದರಿಂದ ಕೂದಲು ನುಣುಪಾಗಿ ಹೊಳೆಯುತ್ತದೆ.

ತೆಂಗಿನ ಎಣ್ಣೆ ತೆಂಗಿನ ಎಣ್ಣೆಗೆ ಭಂಗರಾಜ ಗಿಡದ ಎಲೆಗಳು, ಒಂದೆಲಗ ಗಿಡದ ಎಲೆಗಳು ಮತ್ತು ಮೆಂತೆಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಸೋಸಿ ಗಾಜಿನ ಬಾಟಲಿನಲ್ಲಿ ತುಂಬಿಡಿ .ಇದನ್ನು ನಿರಂತರವಾಗಿ ತಲೆಗೆ ಹಾಕಿ ಮಾಸಾಜು ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್