Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಳು, ಮಾಲಿನ್ಯದಿಂದ ನಿಮ್ಮ ಕೂದಲು ಉದುರದಂತೆ ತಡೆಯುವುದು ಹೇಗೆ?

ವಿಷಕಾರಿ ಮಾಲಿನ್ಯಕಾರಕಗಳು ನಮ್ಮ ಕೂದಲನ್ನು ಹಾನಿಗೊಳಿಸುತ್ತವೆ. ಸಂಶೋಧನೆಯು ಕೂದಲಿನ ಬೆಳವಣಿಗೆ ಮತ್ತು ಆರೋಗ್ಯದ ಮೇಲೆ ವಾಯು ಮಾಲಿನ್ಯ ಹಲವಾರು ವಿಧಗಳಲ್ಲಿ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದೆ.

ಧೂಳು, ಮಾಲಿನ್ಯದಿಂದ ನಿಮ್ಮ ಕೂದಲು ಉದುರದಂತೆ ತಡೆಯುವುದು ಹೇಗೆ?
ತಲೆಕೂದಲು ಉದುರುವುದು
Follow us
ಸುಷ್ಮಾ ಚಕ್ರೆ
|

Updated on: Nov 09, 2023 | 2:56 PM

ಕೂದಲು ಉದುರುವಿಕೆ ನಮ್ಮಲ್ಲಿ ಹೆಚ್ಚಿನವರು ಎದುರಿಸುವ ದಿನನಿತ್ಯದ ಸಮಸ್ಯೆಯಾಗಿದೆ. ಇದು ಸಾಮಾನ್ಯವಾಗಿ ಆಯಾ ಪ್ರದೇಶಗಳ ನೀರು, ಆರೋಗ್ಯ ಸಮಸ್ಯೆ ಅಥವಾ ಕೆಲವೊಮ್ಮೆ ತೀವ್ರ ಒತ್ತಡದ ಕಾರಣದಿಂದಾಗಿ ಕೂದಲು ಉದುರುತ್ತದೆ. ದೆಹಲಿ ಮಾತ್ರವಲ್ಲದೆ ಬೆಂಗಳೂರು, ಮುಂಬೈನಲ್ಲೂ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಈ ಮಾಲಿನ್ಯದಿಂದ ಕೂದಲು ಉದುರುವಿಕೆ ಹೆಚ್ಚಾಗುತ್ತಿದೆ. ಇದು ಕೇವಲ ಪೌಷ್ಠಿಕಾಂಶದ ಕೊರತೆ ಅಥವಾ ಒತ್ತಡದ ಸಮಸ್ಯೆಯಲ್ಲ. ವಿಷಕಾರಿ ಮಾಲಿನ್ಯಕಾರಕಗಳು ನಮ್ಮ ಕೂದಲನ್ನು ಹಾನಿಗೊಳಿಸುತ್ತವೆ. ಸಂಶೋಧನೆಯು ಕೂದಲಿನ ಬೆಳವಣಿಗೆ ಮತ್ತು ಆರೋಗ್ಯದ ಮೇಲೆ ವಾಯು ಮಾಲಿನ್ಯ ಹಲವಾರು ವಿಧಗಳಲ್ಲಿ ಹಾನಿಕಾರಕ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಿದೆ.

ವಾಯು ಮಾಲಿನ್ಯಕಾರಕಗಳು ನೇರವಾಗಿ ನೆತ್ತಿಯ ಮೇಲೆ ದಾಳಿ ಮಾಡಬಹುದು. ಇದು ಕಿರಿಕಿರಿ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ. ಇದು ಕೂದಲ ಕಿರುಚೀಲಗಳ ಸೂಕ್ಷ್ಮ ರಚನೆಗಳನ್ನು ಹಾನಿಗೊಳಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ. ವಾಯು ಮಾಲಿನ್ಯವು ಸ್ವತಂತ್ರ ರಾಡಿಕಲ್​ಗಳನ್ನು ಸಹ ಉತ್ಪಾದಿಸುತ್ತದೆ. ಈ ಸ್ವತಂತ್ರ ರಾಡಿಕಲ್​ಗಳು ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದು ಸೆಲ್ಯುಲಾರ್ ಹಾನಿಗೆ ಕಾರಣವಾಗುತ್ತದೆ ಮತ್ತು ಕೂದಲ ಕಿರುಚೀಲಗಳ ಕಾರ್ಯವನ್ನು ದುರ್ಬಲಗೊಳಿಸುತ್ತದೆ.

ಇದನ್ನೂ ಓದಿ: ಉಗುರುಗಳನ್ನು ಉಜ್ಜಿದರೆ ಕೂದಲು ಉದ್ದವಾಗುತ್ತಾ?

ಕೆಲವು ವಾಯು ಮಾಲಿನ್ಯಕಾರಕಗಳಿಗೆ ಒಡ್ಡಿಕೊಳ್ಳುವುದರಿಂದ ಕೂದಲಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಹಾರ್ಮೋನ್ ಬದಲಾವಣೆಗಳಿಗೆ ಸಂಬಂಧವಿದೆ. ವಾಯು ಮಾಲಿನ್ಯವು ತಲೆಹೊಟ್ಟು ಮತ್ತು ಸೆಬೊರ್ಹೆಕ್ ಡರ್ಮಟೈಟಿಸ್‌ನಂತಹ ನೆತ್ತಿಯ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುತ್ತದೆ. ಇದು ಕೂದಲು ಉದುರುವಿಕೆಗೆ ಕಾರಣವಾಗಬಹುದು. ಮಾಲಿನ್ಯಕಾರಕಗಳಿಂದ ಉಂಟಾಗುವ ಕಿರಿಕಿರಿಯು ಈ ಪರಿಸ್ಥಿತಿಗಳನ್ನು ಉಲ್ಬಣಗೊಳಿಸಬಹುದು, ಇದು ಉರಿಯೂತ ಮತ್ತು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ.

ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆ ಕೂದಲು ಉದುರುವುದನ್ನು ತಡೆಯಲು 5 ಸಲಹೆಗಳು ಇಲ್ಲಿವೆ:

ನಿಯಮಿತವಾಗಿ ಕೂದಲು ತೊಳೆಯಿರಿ:

ಕೂದಲನ್ನು ದಿನ ಬಿಟ್ಟು ದಿನ ತೊಳೆಯುವುದರಿಂದ ನೆತ್ತಿ ಮತ್ತು ಕೂದಲಿನಲ್ಲಿರುವ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ಸಹಾಯವಾಗುತ್ತದೆ.

ಉತ್ತಮ ಶ್ಯಾಂಪೂಗಳನ್ನು ಬಳಸಿ:

ಉತ್ತಮ ಗುಣಮಟ್ಟದ ಶ್ಯಾಂಪೂಗಳನ್ನು ಬಳಸುವುದರಿಂದ ಕೂದಲಿನಿಂದ ಕೊಳಕು ಮತ್ತು ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ಸಹಾಯವಾಗುತ್ತದೆ.

ಇದನ್ನೂ ಓದಿ: Air Pollution: ಗರ್ಭದಲ್ಲಿರುವ ಭ್ರೂಣದ ಮೇಲೂ ವಾಯು ಮಾಲಿನ್ಯ ಅಪಾಯಕಾರಿ ಪರಿಣಾಮವನ್ನು ಬೀರುತ್ತದೆ!

ಸೂರ್ಯನಿಂದ ರಕ್ಷಣೆ ಪಡೆಯಿರಿ:

ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ಕೂದಲನ್ನು ರಕ್ಷಿಸುವುದು ಬಹಳ ಮುಖ್ಯ. ಏಕೆಂದರೆ ಯುವಿ ಕಿರಣಗಳು ಕೂದಲ ಕಿರುಚೀಲಗಳನ್ನು ಇನ್ನಷ್ಟು ಹಾನಿಗೊಳಿಸುತ್ತದೆ.

ಆರೋಗ್ಯಕರ ಆಹಾರ ಸೇವಿಸಿ:

ಸಮತೋಲಿತ ಮತ್ತು ಪೌಷ್ಟಿಕ ಆಹಾರವು ಕೂದಲಿನ ಬೆಳವಣಿಗೆ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.

ಒತ್ತಡ ನಿರ್ವಹಣೆ:

ಅತಿಯಾದ ಒತ್ತಡವು ಕೂದಲ ಉದುರುವಿಕೆಗೆ ಕಾರಣವಾಗಬಹುದು. ವ್ಯಾಯಾಮ, ಯೋಗ, ಅಥವಾ ಧ್ಯಾನದಂತಹ ಒತ್ತಡ ನಿರ್ವಹಣೆಯ ತಂತ್ರಗಳನ್ನು ಅಭ್ಯಾಸ ಮಾಡುವುದರಿಂದ ಕೂದಲಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ