AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Halbai Recipe : ಬಾಯಲ್ಲಿಟ್ಟರೆ ಕರಗುವ ಸಾಂಪ್ರದಾಯಿಕ ಶೈಲಿಯ ಸಿಹಿ ತಿನಿಸು ಹಾಲುಬಾಯಿ, ಇಲ್ಲಿದೆ ಸಿಂಪಲ್ ರೆಸಿಪಿ

ಸಿಹಿ ತಿಂಡಿ ಎಂದರೆ ಎಲ್ಲರಿಗೂ ಕೂಡ ಅಷ್ಟೇ. ಫಟಾ ಫಟಾ ಎಂದು ಮಾಡಿ ಸವಿಯಬಹುದಾದ ಸಿಹಿ ತಿಂಡಿಗಳಲ್ಲಿ ಕರ್ನಾಟಕದ ವಿಶೇಷ ರೆಸಿಪಿ ಹಾಲುಬಾಯಿ ಕೂಡ ಒಂದು. ಬಾಯಲ್ಲಿಟ್ಟರೆ ಕರಗುವ ಈ ರೆಸಿಪಿಯನ್ನು ಅಕ್ಕಿ ಹಾಗೂ ಬೆಲ್ಲದಿಂದ ತಯಾರಿಸಲಾಗುತ್ತದೆ. ಈ ಹಾಲುಬಾಯಿಯನ್ನು ರಾಗಿ ಹಿಟ್ಟಿನಿಂದಲೂ ತಯಾರಿಸಬಹುದು. ಹಾಗಾದ್ರೆ ಕರ್ನಾಟಕದ ಸಾಂಪ್ರದಾಯಿಕ ಸಿಹಿ ತಿಂಡಿ ಹಾಲುಬಾಯಿ ಮಾಡೋದು ಹೇಗೆ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Halbai Recipe : ಬಾಯಲ್ಲಿಟ್ಟರೆ ಕರಗುವ ಸಾಂಪ್ರದಾಯಿಕ ಶೈಲಿಯ ಸಿಹಿ ತಿನಿಸು ಹಾಲುಬಾಯಿ, ಇಲ್ಲಿದೆ ಸಿಂಪಲ್ ರೆಸಿಪಿ
ಹಾಲುಬಾಯಿ
ಸಾಯಿನಂದಾ
| Edited By: |

Updated on: Dec 09, 2024 | 4:49 PM

Share

ಕರ್ನಾಟಕ ಸಾಂಪ್ರದಾಯಿಕ ತಿನಿಸುಗಳಲ್ಲಿ ಒಂದಾಗಿರುವ ಹಾಲುಬಾಯಿ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಸಿಹಿ ತಿನ್ನಬೇಕೇನಿಸಿದರೆ ಮನೆಯಲ್ಲಿ ಸುಲಭವಾಗಿ ಅಕ್ಕಿ ಹಾಲುಬಾಯಿ ಮಾಡಿ ಸವಿಯಬಹುದು. ಮಲೆನಾಡು ಮತ್ತು ಕರಾವಳಿಯ ಭಾಗಗಳಲ್ಲಿ ಇದನ್ನು ಅಕ್ಕಿ ಮಣ್ಣಿ ಎನ್ನುವ ಹೆಸರಿನಿಂದ ಕರೆಯುತ್ತಾರೆ. ಮನೆಯಲ್ಲಿ ಈ ಕೆಲವೇ ಕೆಲವು ಸಾಮಗ್ರಿಗಳಿದ್ದರೆ ಅಕ್ಕಿ ಹಾಲುಬಾಯಿ ಮಾಡಲು ಹೆಚ್ಚೇನು ಸಮಯ ಬೇಕಾಗಿಲ್ಲ, ಈ ಸಿಂಪಲ್ ರೆಸಿಪಿ ಮಾಡುವ ವಿಧಾನ ಇಲ್ಲಿದೆ.

ಅಕ್ಕಿ ಹಾಲುಬಾಯಿ ಮಾಡಲು ಬೇಕಾಗುವ ಸಾಮಗ್ರಿಗಳು

* ಅಕ್ಕಿ- 1 ಕಪ್

* ತುಪ್ಪ- 3 ಚಮಚ

* ಬೆಲ್ಲ- ಒಂದು ಕಪ್

* ತೆಂಗಿನ ಹಾಲು

* ಏಲಕ್ಕಿ ಪುಡಿ

* ರುಚಿಗೆ ತಕ್ಕಷ್ಟು ಉಪ್ಪು

View this post on Instagram

A post shared by FOOD ISTA (@foodistamysuru)

ಮಾಡುವ ವಿಧಾನ

* ಅಕ್ಕಿಯನ್ನು ಎರಡು ಗಂಟೆಗಳ ಕಾಲ ನೆನೆಸಿಡಿ. ಆ ಬಳಿಕ ಮಿಕ್ಸಿ ಜಾರಿಗೆ ಅಕ್ಕಿ, ಉಪ್ಪು ಹಾಗೂ ತೆಳುವಾದ ತೆಂಗಿನ ಹಾಲನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.

* ಒಂದು ಬಾಣಲೆಗೆ ತುಪ್ಪ ಸವರಿಕೊಂಡು ಒಲೆಯ ಮೇಲಿಟ್ಟು, ಅದಕ್ಕೆ ರುಬ್ಬಿದ ಹಿಟ್ಟು ಹಾಕಿಕೊಳ್ಳಿ.

* ತದನಂತರ ದಪ್ಪ ತೆಂಗಿನ ಹಾಲು ಹಾಗೂ ಅಗತ್ಯವಿರುವಷ್ಟು ಬೆಲ್ಲ, ಏಲಕ್ಕಿ ಪುಡಿಯನ್ನು ಸೇರಿಸಿ ಸಣ್ಣಗೆ ಉರಿಯಲ್ಲಿ ಬೇಯಿಸಿಕೊಳ್ಳಿ. ಈ ಮಿಶ್ರಣವು ಗಂಟು ಗಂಟಾಗದಂತೆ ಆಗಾಗ ಕೈಯಾಡಿಸುತ್ತ ಇರಿ.

* ಸ್ವಲ್ಪ ಸಮಯದ ನಂತರ ಹಿಟ್ಟು ದಪ್ಪಗಾಗುತ್ತದೆ, ಇದಕ್ಕೆ ಒಂದೆರಡು ಚಮಚ ತುಪ್ಪ ಹಾಕಿ ಮತ್ತೆ ಚೆನ್ನಾಗಿ ಕಲಸಿಕೊಳ್ಳಿ.

* ಈ ಹಿಟ್ಟು ಗಟ್ಟಿಯಾಗುತ್ತಿದ್ದಂತೆ ಒಂದು ದೊಡ್ಡದಾದ ಪ್ಲೇಟಿನ ಮೇಲೆ ಬಾಳೆಎಲೆ ಇಟ್ಟು ತುಪ್ಪ ಸವರಿಕೊಳ್ಳಿ. ಇದಕ್ಕೆ ಈ ಮಿಶ್ರಣವನ್ನು ಹಾಕಿ ಹರಡಿಕೊಳ್ಳಿ.

* ತಣ್ಣಗಾದ ಬಳಿಕ ಬೇಕಾದ ಆಕಾರದಲ್ಲಿ ಕತ್ತರಿಸಿದರೆ ಅಕ್ಕಿ ಹಾಲುಬಾಯಿ ಸವಿಯಲು ಸಿದ್ಧ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!