AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2023: ಹನುಮನಿಗೆ ಈ ಸಿಹಿ ಪ್ರಸಾದ ಅರ್ಪಿಸಿ

ಕೇಸರಿಬಾತ್‌ನಿಂದ ಹಿಡಿದು ಮೋತಿಚೂರು ಲಡ್ಡೂವರೆಗೆ ನೀವು ಈ ಹನುಮಜಯಂತಿಯಂದು ಭಗವಾನ್ ಹನುಮನಿಗೆ ಅರ್ಪಿಸಬಹುದಾದ ಕೆಲವೊಂದು ಪ್ರಸಾದ ವಸ್ತುಗಳ ಮಾಹಿತಿ ಇಲ್ಲಿದೆ.

Hanuman Jayanti 2023: ಹನುಮನಿಗೆ ಈ ಸಿಹಿ ಪ್ರಸಾದ ಅರ್ಪಿಸಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Apr 06, 2023 | 3:08 PM

Share

ರಾಮಭಕ್ತ ಹನುಮಂತನನ್ನು ಪೂಜಿಸದವರೇ ಇಲ್ಲ. ಹೆಚ್ಚಿನ ಜನರು ಹನುಮನ ಭಕ್ತರು. ಈ ಹನುಮ ಜಯಂತಿಯನ್ನು ಭಕ್ತರು ಭಕ್ತಿಪೂರ್ವಕವಾಗಿ ಆಚರಣೆ ಮಾಡುತ್ತಾರೆ. ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲವಾದರೂ, ಮಂಗಳವಾರದಂದು ಚೈತ್ರ ಪೂರ್ಣಿಮೆಯಂದು ಸುರ್ಯೋದಯದಲ್ಲಿ ಭಗವಾನ್ ಹುನುಮಂತ ಜನಿಸಿದರೆಂದು ಹೇಳಲಾಗುತ್ತದೆ. ಈ ಚೈತ್ರ ಪೂರ್ಣಿಮೆಯಂದು ಹನುಮ ಜಯಂತಿಯನ್ನು ಪ್ರತಿವರ್ಷ ಆಚರಿಸಲಾಗುತ್ತದೆ. ಈ ವರ್ಷ ಹನುಮಂತ ದೇವರ ಜನ್ಮದಿನವನ್ನು ಏಪ್ರಿಲ್ 6 ರಂದು ಆಚರಿಸಲಾಗುತ್ತಿದೆ. ದೇವರಿಗೆ ಪ್ರಿಯವಾದ ವಸ್ತುಗಳನ್ನು ಅವರಿಗೆ ಅರ್ಪಿಸಿದಾಗ ಅವರು ನಮಗೆ ಒಲಿಯುತ್ತಾರೆ ಹಾಗೂ ನಮ್ಮ ಮೇಲೆ ಕೃಪೆ ತೋರುತ್ತಾರೆ ಎನ್ನುವ ನಂಬಿಕೆ ಇದೆ. ಅದೇ ನಂಬಿಕೆಯ ಕಾರಣದಿಂದ ದೇವರುಗಳಿಗೆ ಪ್ರಿಯವಾದ ವಸ್ತುಗಳನ್ನೇ ನಾವು ಅರ್ಪಿಸುತ್ತೇವೆ. ಈ ಬಾರಿಯ ಹನುಮ ಜಯಂತಿಯಂದು ಆಂಜನೇಯನಿಗೆ ಪ್ರಿಯವಾದ ಈ ವಸ್ತುಗಳನ್ನು ಅರ್ಪಿಸಿ.

ಮೋತಿಚೂರು ಲಡ್ಡೂ: ಅನೇಕ ಭಕ್ತರು ಪ್ರತಿ ಮಂಗಳವಾರ ಹನುಮಂತನಿಗೆ ಈ ಮೋತಿಚೂರು ಲಡ್ಡನ್ನು ಪ್ರಸಾದ ರೂಪದಲ್ಲಿ ಅರ್ಪಿಸುತ್ತಾರೆ. ಈ ಮೋತಿಚೂರು ಲಡ್ಡು ಹನುಮಂತನಿಗೆ ಪ್ರಿಯವಾದ ಖಾದ್ಯವಾಗಿದೆ. ಹನುಮ ಜಯಂತಿಯಂದು ಈ ಲಡ್ಡನ್ನು ಮನೆಯಲ್ಲಿಯೇ ತಯಾರಿಸಿ ದೇವರಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಬಹುದು.

ಜಾಂಗೀರ್ : ಈ ಜಾಂಗೀರ್ ಜಿಲೇಬಿಯಂತೆಯೇ ಇರುತ್ತದೆ. ತುಪ್ಪ ಅಥವಾ ಎಣ್ಣೆಯಿಂದ ಹುರಿಯಲಾಗುತ್ತದೆ. ಈ ಸಿಹಿಯಾದ ತಿನಿಸು ಕೂಡಾ ಹನುಮಂತನಿಗೆ ಬಲುಪ್ರಿಯವಾದದ್ದು. ಹನುಮ ಜಯಂತಿಯಂದು ಈ ಸಿಹಿಯನ್ನು ದೇವರಿಗೆ ನೈವೇದ್ಯ ರೂಪದಲ್ಲಿ ಸಲ್ಲಿಸಬಹುದು.

ಇದನ್ನೂ ಓದಿ:Hanuman Jayanti: ಕೊಪ್ಪಳ ಅಂಜನಾದ್ರಿ ಬೆಟ್ಟದಲ್ಲಿ ಭಕ್ತರ ದಂಡು, ರಾಮಭಕ್ತನ ಸನ್ನಿಧಿಯಲ್ಲಿ ಹನುಮ ಮಾಲೆ ವಿಸರ್ಜನೆ 

ಹಯಗ್ರೀವ: ಇದು ಹುರಿದ ಕಾಳು ಮತ್ತು ಬೆಲ್ಲದ ಸಿಹಿಯಾಗಿದೆ. ಇದು ಹನುಮಂತನ ನೆಚ್ಚಿನ ಸಿಹಿಯಾಗಿದೆ. ಇದನ್ನು ಕೂಡಾ ಭಗವಾನ್ ಹನುಮನಿಗೆ ಅರ್ಪಿಸಬಹುದು.

ಕೇಸರಿಬಾತ್: ಕೇಸರಿಬಾತ್ ಹನುಮಜಯಂತಿಯ ಜನಪ್ರಿಯ ಪ್ರಸಾದವಾಗಿದೆ. ಈ ಕೇಸರಿಬಾತ್‌ನ್ನು ಮನೆಯಲ್ಲಿಯೆ ತಯಾರಿಸುವ ಮೂಲಕ ಈ ಬಾರಿಯ ಹನುಮಜಯಂತಿಯ ದಿನದಂದು ಭಗವಂತ ಹನುಮಂತನಿಗೆ ಪ್ರಸಾದ ರೂಪದಲ್ಲಿ ಇದನ್ನು ಅರ್ಪಿಸಬಹುದು.

ತುಳಸಿ: ಈ ಬಾರಿಯ ಹನುಮಜಯಂತಿಯಂದು ಸಿಹಿ ನೈವೇದ್ಯ ಮಾತ್ರವಲ್ಲದೆ ಆಂಜನೇಯನಿಗೆ ಪವಿತ್ರ ತುಳಸಿಯ ಮಾಲೆಯನ್ನು ಅರ್ಪಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Thu, 6 April 23

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ