AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Purple Cabbage: ನೀವು ಎಂದಾದರೂ ನೇರಳೆ ಬಣ್ಣದ ಎಲೆಕೋಸು ತಿಂದಿದ್ದೀರಾ? ಚರ್ಮದ ಆರೋಗ್ಯಕ್ಕೆ  ಇದು ಉತ್ತಮ   

ನಾವು ಸಾಮಾನ್ಯವಾಗಿ ಪಲ್ಯ, ಸಲಾಡ್ ಇತ್ಯಾದಿ ಅಡುಗೆಗಳಲ್ಲಿ  ಹೆಚ್ಚಾಗಿ ಹಸಿರು ಬಣ್ಣದ ಎಲೆಕೋಸನ್ನು ಬಳಸುತ್ತೇವೆ. ಈ ತರಕಾರಿ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು,  ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.  ಆದರೆ ಹಸಿರು ಬಣ್ಣದ ಎಲೆಕೋಸಿಗಿಂತ ನೇರಳೆ ಬಣ್ಣದ ಎಲೆಕೋಸು ನಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ನೇರಳೆ ಎಲೆಕೋಸಿನ ಸೇವನೆಯಿಂದ ದೇಹದ ಪ್ರತಿರಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದರಿಂದ ಹಿಡಿದು ಚರ್ಮದ ಆರೋಗ್ಯದವರೆಗೆ ನಮ್ಮ ದೇಹಕ್ಕೆ ಲೆಕ್ಕವಿಲ್ಲದಷ್ಟು ಪ್ರಯೋಜನಗಳು ಲಭಿಸುತ್ತದೆ.

Purple Cabbage: ನೀವು ಎಂದಾದರೂ ನೇರಳೆ ಬಣ್ಣದ ಎಲೆಕೋಸು ತಿಂದಿದ್ದೀರಾ? ಚರ್ಮದ ಆರೋಗ್ಯಕ್ಕೆ  ಇದು ಉತ್ತಮ   
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 02, 2023 | 6:22 PM

ದೇಹದಾರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ತರಕಾರಿ, ಹಣ್ಣುಗಳನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಈ ಕಾರಣಕ್ಕಾಗಿ   ಹೆಚ್ಚಿನವರು ಪ್ರತಿನಿತ್ಯ ತರಕಾರಿ ಸಲಾಡ್ ಗಳನ್ನು ಸೇವನೆ ಮಾಡುತ್ತಾರೆ. ಸಾಮಾನ್ಯವಾಗಿ ಸಲಾಡ್, ಪಲ್ಯ ಇತ್ಯಾದಿ ಅಡುಗೆಗಳಲ್ಲಿ ನಾವು ಹೆಚ್ಚಾಗಿ ಹಸಿರು ಬಣ್ಣದ ಕ್ಯಾಬೆಬ್ ಬಳಕೆ ಮಾಡುತ್ತೇವೆ. ಆದರೆ ಹಸಿರು ಎಲೆಕೋಸಿಗಿಂತ ನೇರಳೆ ಬಣ್ಣದ ಎಲೆಕೋಸು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹೌದು ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಉರಿಯೂತ ವಿರೋಧಿ ಗುಣಲಕ್ಷಣಗಳು, ವಿಟಮಿನ್ ಸಿ, ಕಬ್ಬಿಣಾಂಶ, ಪೊಟ್ಯಾಸಿಯಂ, ವಿಟಮಿನ್ ಎ ಇತ್ಯಾದಿ ಅನೇಕ ಪೋಷಕಾಂಶಗಳು ಮತ್ತು ಜೀವಸತ್ವಗಳಿದ್ದು, ಇವೆಲ್ಲವೂ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಾಗಾದರೆ ಈ ನೇರಳೆ ಬಣ್ಣದ ಎಲೆಕೋಸಿನ ಸೇವನೆಯಿಂದ ಲಭಿಸುವ  ಪ್ರಯೋಜನಗಳ ಬಗ್ಗೆ ತಿಳಿಯೋಣ.

ನೇರಳೆ ಬಣ್ಣದ ಎಲೆಕೋಸನ್ನು ಸೇವಿಸುವುದರಿಂದ ಲಭಿಸುವ ಪ್ರಯೋಜನಗಳು:

ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ:

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯ ಕಾರಣದಿಂದಾಗಿ ಜನರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚುತ್ತಿದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಆಹಾರ ಕ್ರಮದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಹಾಗಿರುವಾಗ ನೀವು ನಿಮ್ಮ ಆಹಾರದಲ್ಲಿ ನೇರಳೆ ಎಲೆಕೋಸನ್ನು ಸೇರಿಸಬಹುದು. ಇದರಲ್ಲಿರುವ ಪೊಟ್ಯಾಸಿಯಂ ಅಂಶವು   ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿ:

ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ವಿಟಮಿನ್ ಸಿ ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಲು ಸೂಚಿಸಲಾಗುತ್ತದೆ. ಕಿತ್ತಳೆಯಂತೆ ನೇರಳೆ ಎಲೆಕೋಸಿನಲ್ಲೂ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಜೀವಸತ್ವವಿದ್ದು, ಇದರ ಸೇವನೆಯಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು.

ಮೂಳೆಗಳ ಆರೋಗ್ಯಕ್ಕೆ ಪ್ರಯೋಜನಕಾರಿ:

ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ನೇರಳೆ ಎಲೆಕೋಸು ಮೂಳೆಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದನ್ನು ಸೇವನೆ ಮಾಡುವುದರಿಂದ  ಮೂಳೆಗಳಲ್ಲಿ ಕಾಣಿಸಿಕೊಳ್ಳುವ ನೋವು ಮತ್ತು  ಊತದ ಸಮಸ್ಯೆಯನ್ನು ಹೋಗಲಡಿಸಬಹುದು. ಅಲ್ಲದೆ  ಇದರಲ್ಲಿ ಮಿಟಮಿನ್ ಕೆ, ಪೊಟ್ಯಾಸಿಯಂ ಮತ್ತು ಅನೇಕ ಪೋಷಕಾಂಶಗಳಿದ್ದು, ಇದು ಸ್ನಾಯುಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ:

ನೇರಳೆ ಎಲೆಕೋಸಿನಲ್ಲಿ ಫೈಬರ್ ಅಂಶವು ದೊಡ್ಡ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಮಲಬದ್ಧತೆಯ ಸಮಸ್ಯೆಯಿಂದ ನೀವು ತೊಂದರೆಗೊಳಗಾಗಿದ್ದರೆ, ನೇರಳೆ ಬಣ್ಣದ ಎಲೆಕೋಸು ತಿನ್ನುವ ಮೂಲಕ ಈ ಸಮಸ್ಯೆಯಿಂದ ಪರಿಹಾರವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ:  ಎಲೆಕೋಸಿನ ನೀರನ್ನು ಕುಡಿದರೆ ಏನೆಲ್ಲಾ ಅರೋಗ್ಯ ಪ್ರಯೋಜನಗಳಿವೆ ಗೊತ್ತಾ? ವಿವರವಾಗಿ ತಿಳ್ಕೊಳ್ಳಿ

ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿ:

ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ನೇರಳೆ ಎಲೆಕೋಸು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾದ ತರಕಾರಿಗಳಲ್ಲಿ ಒಂದು. ಈ ತರಕಾರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಚರ್ಮ ಸಂಬಂಧಿ ಸಮಸ್ಯೆಗಳು ಬಾರದಂತೆ ತಡೆಯಬಹುದು. ಇದರಲ್ಲಿ ವಿಟಮಿನ್ ಸಿ ಸಮಸೃದ್ಧವಾಗಿದ್ದು, ಇದು ತ್ವಚೆಯ ಮೇಲೆ ಕಾಣಿಸಿಕೊಳ್ಳುವ ಸುಕ್ಕುಗಳ ಸಮಸ್ಯೆಯನ್ನು ತೊಡೆದುಹಾಕಲು ಸಹಕಾರಿಯಾಗಿದೆ.

ಮಧುಮೇಹ ಮತ್ತು ಕ್ಯಾನ್ಸರ್ ನಿಂದ ರಕ್ಷಿಸುತ್ತದೆ:

ನೇರಳೆ ಎಲೆಕೋಸಿನ ಬಗ್ಗೆ ಸಂಶೋಧನೆಯೂ ನಡೆದಿದ್ದು, ಇದರಲ್ಲಿರುವ ಅಂಥೋಸಯಾನಿನ ಪಾಲಿಫಿನಾಲ್ ಎಂಬ ಅಂಶವು ಕ್ಯಾನ್ಸರ್, ಹೃದ್ರೋಗ ಮತ್ತು ಮಧುಮೇಹದಂತಹ ಅನೇಕ ಕಾಯಿಲೆಗಳು ಬಾರದಂತೆ ತಡೆಯುವ ಅದ್ಭುತ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧ್ಯಯನದಲ್ಲಿ ಕಂಡುಹಿಡಿಯಲಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್