AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ಮನೆಯಲ್ಲಿ ನಾಯಿ ಸಾಕಿದರೆ, ಈ ರೋಗಗಳು ನಿಮ್ಮ ಹತ್ತಿರಕ್ಕೂ ಸುಳಿಯುವುದಿಲ್ಲ

ಮನೆಯಲ್ಲಿ ನಾಯಿ ಸಾಕುವುದರಿಂದ ಮನೆಯ ಕಾವಲಿನ ಹೊರತಾಗಿ ಹಲವು ಲಾಭಗಳಿವೆ. ಹೊಸ ಅಧ್ಯಯನವೊಂದರ ಪ್ರಕಾರ, ಮನೆಯಲ್ಲಿ ನಾಯಿಯನ್ನು ಸಾಕುವುದು ಮರೆವಿನಂತಹ ಗಂಭೀರ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಇದಲ್ಲದೇ ನಿಮ್ಮ ಆರೋಗ್ಯದ ದೃಷ್ಟಿಯಿಂದ ಸಾಕುಪ್ರಾಣಿಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ನಿಮ್ಮ ಮನೆಯಲ್ಲಿ ನಾಯಿ ಸಾಕಿದರೆ, ಈ ರೋಗಗಳು ನಿಮ್ಮ ಹತ್ತಿರಕ್ಕೂ ಸುಳಿಯುವುದಿಲ್ಲ
ಅಕ್ಷತಾ ವರ್ಕಾಡಿ
|

Updated on:Dec 08, 2023 | 3:01 PM

Share

ಒಬ್ಬ ವ್ಯಕ್ತಿಯು ನಿಮ್ಮ ಸ್ನೇಹವನ್ನು ಉಳಿಸಿಕೊಳ್ಳದಿರಬಹುದು. ಆದರೆ ಶ್ವಾನ ಯಾವುದೇ ಪರಿಸ್ಥಿತಿಯಲ್ಲಿ ನಿಮ್ಮೊಂದಿಗೆ ಸದಾ ನಿಲ್ಲುವ ಮುಗ್ಧ ಜೀವಿ. ಶ್ವಾನವನ್ನು ವಿಶ್ವಾಸರ್ಹ ಹಾಗೂ ಸ್ನೇಹ ಜೀವಿ ಎಂದು ಪರಿಗಣಿಸಲಾಗುತ್ತದೆ. ಬೆಕ್ಕು ಅಥವಾ ಇತರ ಪ್ರಾಣಿಗಳನ್ನು ಸಾಕುಪ್ರಾಣಿಗಳಾಗಿ ಸಾಕಿದ್ದರೂ, ನಾಯಿಯನ್ನು ಸಾಕುವುದು ವಿಭಿನ್ನ ಭಾವನೆಯನ್ನು ನೀಡುತ್ತದೆ. ನಾಯಿಯ ವಿಶೇಷತೆ ಎಂದರೆ ಅದು ಬೇಗನೆ ಸ್ನೇಹಪರವಾಗುತ್ತದೆ. ಜೊತೆಗೆ ಒಂದು ಉತ್ತಮ ಸ್ನೇಹ ಬಂಧವು ನಾಯಿ ಮತ್ತು ಅದರ ಮಾಲೀಕನ ನಡುವೆ ರೂಪುಗೊಳ್ಳುತ್ತದೆ. ಇತ್ತೀಚೆಗಷ್ಟೇ ನಡೆಸಿದ ಅಧ್ಯಯನವೊಂದರ ಪ್ರಕಾರ, ಮನೆಯಲ್ಲಿ ನಾಯಿಯನ್ನು ಸಾಕುವುದು ಮರೆವಿನಂತಹ ಗಂಭೀರ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ.

ವಿಶ್ವದಲ್ಲೇ ಸುಮಾರು 55 ಮಿಲಿಯನ್ ಜನರು ಮರೆವಿನಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಹಿರಂಗಪಡಿಸಿದೆ. ಈ ಗಂಭೀರ ಕಾಯಿಲೆಯ ಲಕ್ಷಣಗಳು 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಕಂಡುಬರುತ್ತಿತ್ತು. ಆದರೆ ಬದಲಾಗುತ್ತಿರುವ ಪರಿಸರ ಮತ್ತು ಸಮಸ್ಯೆಗಳಿಂದಾಗಿ, ಇದು 40 ವರ್ಷ ವಯಸ್ಸಿನ ನಂತರದ ಜನರನ್ನು ಬಾಧಿಸಲು ಪ್ರಾರಂಭಿಸಿದೆ.

ಅಧ್ಯಯನ ಏನು ಹೇಳುತ್ತದೆ?

ಜಪಾನ್‌ನ ಟೋಕಿಯೊ ಮೆಟ್ರೋಪಾಲಿಟನ್ ಇನ್‌ಸ್ಟಿಟ್ಯೂಟ್ ಆಫ್ ಜೆರೊಂಟಾಲಜಿ, ಜಪಾನ್ ನಗರದಲ್ಲಿ ವಾಸಿಸುವ ಸುಮಾರು 12000 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಈ ಎಲ್ಲಾ ಜನರು ವಿವಿಧ ತಳಿಗಳ ನಾಯಿಗಳನ್ನು ಹೊಂದಿದ್ದರು. ಅಧ್ಯಯನದ ಪ್ರಕಾರ, ಮನೆಯಲ್ಲಿ ನಾಯಿ ಸಾಕಿರುವ ಜನರು ಬಯಸದೆಯೂ ಅನೇಕ ಚಟುವಟಿಕೆಗಳನ್ನು ಮಾಡುತ್ತಾರೆ. ಅಂದರೆ ವಾಕಿಂಗ್​​ ಅಭ್ಯಾಸವಿಲ್ಲದಿದ್ದರೂ, ತನ್ನ ಶ್ವಾನದೊಂದಿಗೆ ಹೊರಗೆ ವಾಕ್​ ಹೋಗುವುದು,ಜನರೊಂದಿಗೆ ಮಾತನಾಡುವುದು ಮತ್ತು ಇತರ ಚಟುವಟಿಕೆಗಳನ್ನು ಮಾಡುತ್ತಿರುವುದು ಸಂಶೋಧಕರಿಗೆ ತಿಳಿದುಬಂದಿದೆ. ದೈನಂದಿನ ಜೀವನಕ್ರಮದಲ್ಲಿ ಇಂತಹ ಅಭ್ಯಾಸಗಳು ಮೆದುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಅಧ್ಯಯನ ಬಹಿರಂಗಪಡಿಸಿದೆ.

ಇದನ್ನೂ ಓದಿ: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ

ನಾಯಿಗಳು ರೋಗದ ಅಪಾಯವನ್ನು ಹೇಗೆ ಕಡಿಮೆ ಮಾಡುತ್ತವೆ?

ನಾಯಿಯನ್ನು ಜೊತೆಯಲ್ಲಿ ಸಾಕಿಕೊಂಡರೆ ನೀವು ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತೀರಿ ಎನ್ನುತ್ತಾರೆ ತಜ್ಞರು. ಹೊರಾಂಗಣ ಚಟುವಟಿಕೆಗಳ ಹೊರತಾಗಿ, ಮನೆಯ ವಾತಾವರಣವೂ ಸಕಾರಾತ್ಮಕವಾಗಿರುತ್ತದೆ. ಇದರಿಂದಾಗಿ ಮೆದುಳಿಗೆ ವ್ಯಾಯಾಮ ಸಿಗುತ್ತದೆ. ಈ ಕಾರಣದಿಂದ ಮರೆವಿನಂತಹ ಅಪಾಯಕಾರಿ ರೋಗಗಳು ನಿಮ್ಮಿಂದ ದೂರ ಉಳಿಯುತ್ತವೆ.

 ಸಾಕು ಪ್ರಾಣಿಯಿಂದ ಸಿಗುವ ಆರೋಗ್ಯ  ಪ್ರಯೋಜನಗಳು:

  • ಮನೆಯಲ್ಲಿ ನಾಯಿ ಅಥವಾ ಸಾಕುಪ್ರಾಣಿಗಳ ಉಪಸ್ಥಿತಿಯಿಂದಾಗಿ, ಜನರು ಭಾವನಾತ್ಮಕವಾಗುತ್ತಾರೆ ಮತ್ತು ವಿಷಯಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ.
  • ಮನೆಯಲ್ಲಿ ಸಾಕುಪ್ರಾಣಿ ಇದ್ದರೆ ಅದರೊಂದಿಗೆ ಮಾತನಾಡುವ ಮೂಲಕ ನಿಮ್ಮ ಮನಸ್ಸನ್ನು ಹಗುರಗೊಳಿಸಬಹುದು. ಏಕೆಂದರೆ ಈ ಬಿಡುವಿಲ್ಲದ ಜೀವನದಲ್ಲಿ ಜನರು ನಿಮ್ಮ ಮಾತನ್ನು ಕೇಳಲು ಸಾಧ್ಯವಾಗುವುದಿಲ್ಲ. ಮನಸ್ಸಿನಲ್ಲಿರುವ ವಿಷಯಗಳನ್ನು ನಿಗ್ರಹಿಸುವುದು ಮಾನಸಿಕ ಸ್ಥಿತಿಯನ್ನು ಹದಗೆಡಿಸುತ್ತದೆ. ನಾಯಿ ಅಥವಾ ಸಾಕುಪ್ರಾಣಿಗಳ ಮುಂದೆ ನೀವು ಏನನ್ನಾದರೂ ಹಂಚಿಕೊಳ್ಳಬಹುದು.
  • ನಾಯಿಯೊಂದಿಗೆ ಮಾತನಾಡುವುದು ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ಹಾರ್ಮೋನ್ ಆಕ್ಸಿಟೋಸಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 2:57 pm, Fri, 8 December 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ