Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಕುಡಿದರೆ ಆರೋಗ್ಯ ಲಾಭಗಳು ಖಂಡಿತ

ಆರೋಗ್ಯವು ಉತ್ತಮವಾಗಿರಬೇಕಾದರೆ ಒಳ್ಳೆಯ ಅಭ್ಯಾಸವನ್ನು ರೂಢಿಸಿಕೊಳ್ಳುವುದು ಮುಖ್ಯ. ದಿನನಿತ್ಯದ ಜೀವನದಲ್ಲಿನ ನಮ್ಮ ಕೆಲ ಅಭ್ಯಾಸಗಳಿಂದ ನಮಗಾಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿದಿರುವುದಿಲ್ಲ. ಮುಂಜಾನೆಯ ವೇಳೆಯಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಕೆಲ ಆಹಾರ ಹಾಗೂ ಪಾನೀಯಗಳು ಆರೋಗ್ಯಕ್ಕೆ ನಾನಾ ರೀತಿಯ ಲಾಭಗಳಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಸೇವಿಸುತ್ತಿದ್ದರೆ ಆರೋಗ್ಯದಲ್ಲಿ ನಾನಾ ರೀತಿಯ ಬದಲಾವಣೆಗಳನ್ನು ಕಾಣಬಹುದು.

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಅರಶಿನ ನೀರು ಕುಡಿದರೆ ಆರೋಗ್ಯ ಲಾಭಗಳು ಖಂಡಿತ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 23, 2024 | 5:24 PM

ಭಾರತೀಯರ ಅಡುಗೆ ಮನೆಯಲ್ಲಿರುವ ಪ್ರಮುಖ ಪದಾರ್ಥಗಳಲ್ಲಿ ಒಂದು ಈ ಅರಶಿನ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಇ, ಕಬ್ಬಿಣ, ಸತು ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿದ್ದು, ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ಮತ್ತು ನಂಜುನಿರೋಧಕ ಗುಣವನ್ನು ಹೊಂದಿದೆ. ಹೀಗಾಗಿ ಅನಾದಿ ಕಾಲದಿಂದಲೂ ಔಷಧಿಗಳ ತಯಾರಿಕೆಯಲ್ಲಿ ಈ ಅರಶಿನವನ್ನು ಬಳಸುತ್ತಾ ಬರಲಾಗುತ್ತಿದೆ. ಅದಲ್ಲದೇ ಸೌಂದರ್ಯವರ್ಧಕಗಳಲ್ಲಿ ಅರಶಿನ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

* ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ : ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರ ಮಾಡುತ್ತದೆ. ಈ ಅರಶಿನದ ನೀರು ಜೀರ್ಣಕಾರಿ ಕಿಣ್ವಗಳಲ್ಲಿ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸಿ ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೊಟ್ಟೆ ಉಬ್ಬರ, ಮಲಬದ್ಧತೆ ಮತ್ತು ಇತರ ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ದೂರಾಗಿಸುತ್ತದೆ.

* ತೂಕ ನಷ್ಟಕ್ಕೆ ಸಹಕಾರಿ : ಅರಶಿನ ನೀರು ತೂಕ ಇಳಿಸಿಕೊಳ್ಳುವವರಿಗೆ ಸಹಕಾರಿಯಾಗಿದೆ. ಬೆಳಗ್ಗೆ ಅರಶಿನ ನೀರು ಸೇವನೆಯಿಂದ ದೇಹವು ಕೊಬ್ಬನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುತ್ತದೆ.

* ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ : ಅರಿಶಿನದಲ್ಲಿ ಉತ್ಕರ್ಷಣ ನಿರೋಧಕಗಳು, ಉರಿಯೂತ ಶಮನಕಾರಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಗಳು ಹೇರಳವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅನಾರೋಗ್ಯ ಸಮಸ್ಯೆ ಬಾರದಂತೆ ನೋಡಿಕೊಳ್ಳುತ್ತದೆ.

* ಹೃದಯದ ಆರೋಗ್ಯವನ್ನು ಕಾಪಾಡುತ್ತದೆ : ದಿನನಿತ್ಯ ಅರಿಶಿನ ನೀರನ್ನು ಕುಡಿಯುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಕೊಲೆಸ್ಟ್ರಾಲ್ ಮಟ್ಟ ಹಾಗೂ ರಕ್ತದೊತ್ತಡವನ್ನು ಕಡಿಮೆಗೊಳಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

* ಉರಿಯೂತವನ್ನು ಕಡಿಮೆ ಮಾಡುತ್ತದೆ : ಅರಶಿನದ ನೀರು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ವಯಸ್ಸಾದಂತೆ ಕೀಲುಗಳಲ್ಲಿನ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ದೋಸೆ, ಇಡ್ಲಿ ಜೊತೆಗೆ ಬೆಸ್ಟ್ ಕಾಂಬಿನೇಶನ್ ಈ ಬದನೆಕಾಯಿ ಚಟ್ನಿ, ಮಾಡುವ ವಿಧಾನವಂತೂ ತುಂಬಾನೇ ಸರಳ

* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ : ಅರಶಿನದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. ಇದು ವಯಸ್ಸಾಗಿರುವುದನ್ನು ತಡೆದು, ಚರ್ಮವನ್ನು ಕಾಂತಿಯುತ ಹಾಗೂ ಆರೋಗ್ಯಕರವಾಗಿರಿಸುತ್ತದೆ.

* ನಂಜು ನಿರೋಧಕ : ಅರಶಿನದಲ್ಲಿ ನಂಜು ನಿರೋಧಕ ಗುಣವನ್ನು ಹೊಂದಿದೆ. ಮೈಯಲ್ಲಿ ಗಾಯಗಳಿದ್ದರೆ ಅರಶಿನ ನೀರನ್ನು ಕುಡಿಯುವುದರಿಂದ ಗಾಯವು ಮಾಗುತ್ತದೆ.

* ಮೆದುಳಿನ ಕಾರ್ಯವು ಸುಧಾರಿಸುತ್ತದೆ : ನಿಯಮಿತವಾಗಿ ಅರಶಿನ ನೀರು ಕುಡಿಯುವುದರಿಂದ ಮೆದುಳಿನ ಕಾರ್ಯವು ಸುಧಾರಿಸುತ್ತದೆ. ಅದಲ್ಲದೇ ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಅಲ್ಜೈಮೆರ್ ಕಾಯಿಲೆಯ ಮಟ್ಟವನ್ನು ಕಡಿಮೆಗೊಳಿಸಿ, ಈ ಮರೆವಿನ ಕಾಯಿಲೆಯು ಬಾರದಂತೆ ತಡೆಯುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ