Kokum Fruit: ಬೇಸಿಗೆಯ ಸೂಪರ್ ಫ್ರೂಟ್ ಪುನರ್ಪುಳಿ, ಇದರಲ್ಲಿದೆ ಆರೋಗ್ಯ ಪ್ರಯೋಜನ

ಬೇಸಿಗೆ ಹಣ್ಣು ಅಂತಲೇ ಹೆಸರುವಾಸಿಯಾದ ಪುನರ್ಪುಳಿಯ (ಮುರುಗಲ ಹಣ್ಣು) ಶರಬತ್ತು ಬೇಸಿಗೆಯಲ್ಲಿ ಸೇವನೆ ಮಾಡಲು ಯೋಗ್ಯವಾದ ಪಾನೀಯವಾಗಿದೆ. ಇದು ಉತ್ಕರ್ಷಣ ನಿರೊಧಕಗಳಿಂದ ಸಮೃದ್ಧವಾಗಿರುವ ಹಣ್ಣಾಗಿದ್ದು, ಹಲವಾರು ಆರೋಗ್ಯ ಪ್ರಯೋಜಗಳನ್ನು ಹೊಂದಿದೆ.

Kokum Fruit: ಬೇಸಿಗೆಯ ಸೂಪರ್ ಫ್ರೂಟ್ ಪುನರ್ಪುಳಿ, ಇದರಲ್ಲಿದೆ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 02, 2023 | 5:11 PM

ಬೇಸಿಗೆಯ ಶಾಖವನ್ನು ಸಹಿಸಿಕೊಳ್ಳಲು ನಮ್ಮ ದೇಹದಲ್ಲಿ ನೀರಿನಾಂಶ ಬಹಳ ಮುಖ್ಯ. ಬೇಸಿಗೆಯಲ್ಲಿ ಹೆಚ್ಚಿನ ತಾಪಮಾನ ಮತ್ತು ಶಾಖದಿಂದ ಪರಿಹಾರ ಪಡೆಯಲು ದೇಹವನ್ನು ತಂಪಾಗಿರಿಸುವ ಮತ್ತು ಉಲ್ಲಾಸದಾಯಕವಾಗಿರಿಸುವ ಪಾನೀಯಗಳನ್ನು ನಾವು ಸೇವಿಸುತ್ತಿರುತ್ತೇವೆ. ಆದರೆ ಈ ಕೆಲವೊಂದು ಶೂನ್ಯ ಕ್ಯಾಲೋರಿ ಪಾನೀಯಗಳ ಜೊತೆಗೆ ನಮಗೆ ಈ ಬೇಸಿಗೆಯಲ್ಲಿ ಸ್ವಲ್ಪ ಹೆಚ್ಚು ಪೌಷ್ಟಿಕಾಂಶದ ಅಗತ್ಯವಿರುತ್ತದೆ. ಈ ಕ್ರಮದಲ್ಲಿ ಬೇಸಿಗೆಯಲ್ಲಿ ಸಿಗುವ ಋತುಮಾನದ ಹಣ್ಣುಗಳು ಉತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಬೇಸಿಯಲ್ಲಿ ಸಿಗುವ ಹಣ್ಣುಗಳಲ್ಲಿ ಕೋಕಮ್ ಅಥವಾ ಪುನರ್ಪುಳಿ (ಮುರುಗಲ ಹಣ್ಣು) ಕೂಡಾ ಒಂದು. ಈ ಹಣ್ಣಿನ ಜ್ಯೂಸ್ ಬೇಸಿಗೆಯಲ್ಲಿ ಸೇವನೆ ಮಾಡಲು ಉತ್ತಮವಾದ ಪಾನೀಯವಾಗಿದೆ. ಇದನ್ನು ಗಾರ್ಸಿನಿಯಾ ಇಂಡಿಕಾ ಎಂದು ಕರೆಯುತ್ತಾರೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ಋತುಮಾನದ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ಇದಲ್ಲದೆ ಪುನರ್ಪುಳಿ ವಿಟಮಿನ್ ಎ, ಬಿ, ಸಿ ಮತ್ತು ಫೋಲಿಕ್ ಆಮ್ಲ, ಕ್ಯಾಲ್ಸಿಯಂ, ಕಬ್ಬಿಣಾಂಶ, ಮ್ಯಾಂಗನೀಸ್ ಸತುಗಳಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ದೇಹಕ್ಕೆ ಉಪಯುಕ್ತವಾಗಿದ್ದು, ಈ ಹಣ್ಣಿನ ಶರಬತ್ತನ್ನು ಸೇವಿಸುವ ಮೂಲಕ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಪುನರ್ಪುಳಿಯ ಆರೋಗ್ಯ ಪ್ರಯೋಜನಗಳು:

ಹೃದಯದ ಆರೋಗ್ಯ: ಪುನರ್ಪುಳಿ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಫೈಬರ್​​​ನಿಂದ ಸಮೃದ್ಧವಾಗಿದೆ. ಅಲ್ಲದೆ ಇದು ಶೂನ್ಯ ಕೊಲೆಸ್ಟ್ರಾಲ್​​​​ನ್ನು ಹೊಂದಿರುತ್ತದೆ. ಆದ್ದರಿಂದ ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದೆ. ಇದರಲ್ಲಿರುವ ಮೆಗ್ನೇಷಿಯಂ, ಪೊಟ್ಯಾಷಿಯಂ, ಮತ್ತು ಮ್ಯಾಂಗನೀಸ್ ನಂತಹ ಖನಿಜಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಪರಿಣಾಮವಾಗಿ ಇದು ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.

ಜೀರ್ಣಕ್ರಿಯೆಗೆ ಸಹಕಾರಿ: ಸಿಹಿಯಾದ, ಕಟುವಾದ ಮತ್ತು ಹೆಚ್ಚು ಉಲ್ಲಾಸಕರವಾದ ಪುನರ್ಪುಳಿ ಶರಬತ್ತು ಕರುಳಿನ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆಮ್ಲೀಯತೆ ಮತ್ತು ಅಜೀರ್ಣದಿಂದ ಬಳಲುತ್ತಿರುವ ರೋಗಿಗಳು ಈ ಪಾನೀಯವನ್ನು ಕುಡಿಯುವುದರಿಂದ ಅಪಾರ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಇದರ ಹೆಲ್ಮಿಂಟಿಕ್ ವಿರೋಧಿ ಗುಣಲಕ್ಷಣಗಳು ಹೊಟ್ಟೆಯಿಮದ ಆಸ್ಕರಿಸ್​​​ನಂತಹ ಹುಳಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Healthy Summer Drinks: ತೂಕ ಇಳಿಕೆಗೆ ಸಹಾಯಕ ಈ ರಿಫ್ರೆಶ್ ಬೇಸಿಗೆ ಪಾನೀಯ

ಇಮ್ಯುನಿಟಿ ಬೂಸ್ಟರ್: ಈ ಹಣ್ಣು ಆಂಟಿ-ಬ್ಯಾಕ್ಟೀರಿಯಲ್ ಮತ್ತು ಆಂಟಿ-ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಈ ಹಣ್ಣು ಅನೇಕ ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳನ್ನು ನಿಭಾಯಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮತ್ತು ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.

ಚರ್ಮಕ್ಕೆ ಒಳ್ಳೆಯದು: ಪುನರ್ಪುಳಿ ಹಣ್ಣು ಒಂದು ಪರಿಣಾಮಕಾರಿ ಉತ್ಕರ್ಷಣ ನಿರೋಧಕವಾಗಿದ್ದು, ಅದು ವಯಸ್ಸಾಗುವಿಕೆಯ ಲಕ್ಷಣವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ. ಇದು ಸತ್ತ ಚರ್ಮ ಮತ್ತು ತ್ವಚೆಯ ಮೊಡವೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಉತ್ತಮ ಕೂಲಿಂಗ್ ಮತ್ತು ನೀರಿನಾಂಶಗಳ ಏಜೆಂಟ್: ಇದು ಬೇಸಿಗೆಯ ಹಣ್ಣು ಮತ್ತು ಇದರ ಶರಬತ್ತು ನಿರ್ಜಲೀಕರಣ ಮತ್ತು ಶಾಖದ ಹೊಡೆತದ ಸಂಭವನೀಯತೆಯನ್ನು ತಪ್ಪಿಸಲು ನಮಗೆ ಸಹಾಯ ಮಾಡುತ್ತದೆ. ಅಲ್ಲದೆ ಈ ಪಾನೀಯ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಮತ್ತು ರಿಫ್ರೆಶ್ ಆಗಿರಿಸುತ್ತದೆ.

ಮಧುಮೇಹದ ನಿರ್ವಹಣೆಗೆ ಸಹಾಯಕ: ಪುನರ್ಪುಳಿ ಅತ್ಯುತ್ತಮವಾದ ಮಧುಮೇಹ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ. ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕವೂ ಆಗಿದೆ. ಇದು ನಮ್ಮ ದೇಹದಲ್ಲಿ ಇನ್ಸುಲಿನ್ ಸ್ರವಿಕೆಯನ್ನು ಹೆಚ್ಚಿಸುತ್ತದೆ, ಹೀಗಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಹೆಚ್ಚಳವನ್ನು ತಡೆಗಟ್ಟಬಹುದು.

ಜೀವನಶೈಲಿಯ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್