AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Long Pepper: ಅಡುಗೆಯ ಮನೆಯಲ್ಲಿರುವ ಹಿಪ್ಪಲಿಯಲ್ಲಿದೆ ನೂರೆಂಟು ಔಷಧೀಯ ಗುಣ, ಆರೋಗ್ಯಕ್ಕೆ ಬಹಳ ಉಪಯುಕ್ತ

ಮನೆಯ ಹಿತ್ತಲಿನಲ್ಲಿ ಸುಲಭವಾಗಿ ಬೆಳೆಯ ಬಹುದಾದ ಸಸ್ಯಗಳಲ್ಲಿ ಹಿಪ್ಪಲಿ ಅಥವಾ ಪಿಪ್ಪಲಿ ಗಿಡ ಕೂಡ ಒಂದು. ಮಸಾಲೆ ಪದಾರ್ಥಗಳ ಗುಂಪಿಗೆ ಸೇರಿದ ಈ ಹಿಪ್ಪಲಿಯನ್ನು ಉದ್ದ ಮೆಣಸು ಎಂದು ಕರೆಯುತ್ತಾರೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬಂದಾಗ ಈ ಹಿಪ್ಪಲಿಯಿಂದ ಮನೆ ಮದ್ದನ್ನು ತಯಾರಿಸಿ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು.

Long Pepper: ಅಡುಗೆಯ  ಮನೆಯಲ್ಲಿರುವ ಹಿಪ್ಪಲಿಯಲ್ಲಿದೆ ನೂರೆಂಟು ಔಷಧೀಯ ಗುಣ, ಆರೋಗ್ಯಕ್ಕೆ ಬಹಳ ಉಪಯುಕ್ತ
Long Pepper Image Credit source: Pinterest
ಸಾಯಿನಂದಾ
| Edited By: |

Updated on: Feb 24, 2024 | 1:08 PM

Share

ನಮ್ಮ ಮನೆಯ ಸುತ್ತ ಮುತ್ತಲಿನಲ್ಲಿರುವ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯಗಳ ಬಗ್ಗೆ ಅನೇಕರಿಗೆ ತಿಳಿದಿಲ್ಲ.  ಅಡುಗೆ ಮನೆಯಲ್ಲಿರುವ ಸಾಂಬಾರು ಪದಾರ್ಥಗಳ ಸಾಲಿಗೆ ಸೇರುವ ಈ ಹಿಪ್ಪಲಿಯನ್ನು ಪಿಪ್ಪಲಿಯೆಂದು ಕರೆಯುವುದಿದೆ. ಆಯುರ್ವೇದದಲ್ಲಿ ಹೇರಳವಾಗಿ ಬಳಸುವ ಈ ಹಿಪ್ಪಲಿಯೂ ಔಷಧೀಯ ಗುಣಗಳ ಅಗರವಾಗಿದೆ. ಕರಿಮೆಣಸಿನ ಕಾಳನ್ನು ಪೋಣಿಸಿದಂತೆ ಕಾಣುವ ಈ ಹಿಪ್ಪಲಿಯೂ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.

  1. ಹಿಪ್ಪಲಿ ಮತ್ತು ಶುಂಠಿಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಪುಡಿ ಮಾಡಿ ಕಷಾಯ ತಯಾರಿಸಿ ಎರಡು ಚಮಚದಷ್ಟು ದಿನಕ್ಕೆ ಮೂರು ಬಾರಿ ಸೇವಿಸಿದರೆ ಜ್ವರವು ಗುಣಮುಖವಾಗುತ್ತದೆ.
  2. ಹಿಪ್ಪಲಿ ಪುಡಿ, ಕಾಳು ಮೆಣಸಿನ ಪುಡಿ, ಜೇಷ್ಠ ಮಧುವಿನ ಪುಡಿ ಸಮ ಪ್ರಮಾಣದಲ್ಲಿ ಬೆರೆಸಿ, ಅರ್ಧ ಚಮಚದಷ್ಟು ವೀಳ್ಯದೆಲೆರಸ ಹಾಗೂ ಜೇನುತುಪ್ಪ ಸೇರಿಸಿ ಕುಡಿದರೆ ಅಸ್ತಮಾವು ಕಡಿಮೆಯಾಗುತ್ತದೆ.
  3. ಒಂದು ಚಮಚ ಹಿಪ್ಪಲಿ ಪುಡಿಯನ್ನು ತುಪ್ಪ ಮತ್ತು ಜೇನುತುಪ್ಪದಲ್ಲಿ ಸೇರಿಸಿ ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ಸೇವಿಸಿದರೆ ಬಾಯಿಯ ದುರ್ವಾಸನೆಯೂ ದೂರರಾಗುತ್ತದೆ.
  4. ಹಿಪ್ಪಲಿಯ ಪುಡಿಯನ್ನು ಜೇನುತುಪ್ಪದೊಂದಿಗೆ ಸೇವಿಸಿದರೆ ರಕ್ತಹೀನತೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
  5. ಹಿಪ್ಪಲಿಯ ಪುಡಿಯನ್ನು ಗೋಮೂತ್ರದಲ್ಲಿ ಬೆರೆಸಿ, ಪ್ರತಿನಿತ್ಯವು ಸೇವಿಸುವುದರಿಂದ ಸಂಧಿವಾತವು ಶಮನವಾಗುತ್ತದೆ.
  6. ಹಿಪ್ಪಲಿ ಪುಡಿ, ಹುರಿದ ಜೀರಿಗೆ ಪುಡಿ ಉಪ್ಪನ್ನು ಮಜ್ಜಿಗೆಯಲ್ಲಿ ಬೆರೆಸಿ ಸೇವಿಸಿದರೆ ಮೂಲವ್ಯಾಧಿಗೆ ಪರಿಣಾಮಕಾರಿ ಔಷಧವಾಗಿದೆ.
  7. ಎರಡು ಚಮಚ ಹಿಪ್ಪಲಿ ಚೂರ್ಣ ಹಾಗೂ ಒಂದು ಚಮಚ ತ್ರಿಫಲ ಚೂರ್ಣವನ್ನು ಬಿಸಿ ನೀರಿಗೆ ಹಾಕಿಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮಲಬದ್ಧತೆ ಸಮಸ್ಯೆಯೂ ದೂರವಾಗುತ್ತದೆ.
  8. ಸಂಧಿವಾತ, ಸೊಂಟನೋವಿಗೂ ಸಮಸ್ಯೆಗೆ ಹಿಪ್ಪಲಿ ಪುಡಿ, ಹುರಿದ ಜೀರಿಗೆ ಪುಡಿ ಹಾಗೂ ಉಪ್ಪನ್ನು ಮಜ್ಜಿಗೆಯಲ್ಲಿ ಸೇರಿಸಿ ಸೇವನೆ ಮಾಡಿದರೆ ಪರಿಣಾಮಕಾರಿಯಾಗಿದೆ.
  9. ಎರಡು ಚಿಟಿಕೆ ಹಿಪ್ಪಲಿ ಪುಡಿ ಹಾಗೂ ಒಂದು ಚಮಚ ಹಸಿ ಶುಂಠಿಯವನ್ನು ಮಿಶ್ರಣ ಮಾಡಿ ಸೇವಿಸಿದರೆ ಕಡಿಮೆ ರಕ್ತದೊತ್ತಡ ಸಮಸ್ಯೆ ದೂರವಾಗುತ್ತದೆ.
  10. ಕೂದಲು ಉದುರು ಸಮಸ್ಯೆಯಿದ್ದಲ್ಲಿ ಹಿಪ್ಪಲಿಯ ಚೂರ್ಣವನ್ನು ಬೇವಿನ ಎಲೆ ಹಾಗೂ ಹಾಲಿನಲ್ಲಿ ಅರೆದು ಕೂದಲಿಗೆ ಲೇಪಿಸಿ ಒಣಗಿದ ಬಳಿಕ ಸ್ನಾನ ಮಾಡಿದರೆ ಉತ್ತಮ.
  11. ಲಿಂಬೆರಸ ಮತ್ತು ಗಂಧದೆಣ್ಣೆಯೊಂದಿಗೆ ಹಿಪ್ಪಲಿಯ ಪುಡಿಯನ್ನು ಬೆರೆಸಿ ಹಚ್ಚುವುದರಿಂದ ಸೋರಿಯಾಸಿಸ್, ಚರ್ಮದ ಉರಿಯೂತ ಸೇರಿದಂತೆ ಚರ್ಮದ ಸಮಸ್ಯೆಗಳು ದೂರವಾಗುತ್ತದೆ.

ಈ ಮನೆಮದ್ದು ಉಪಯೋಗಿಸುವ ಮುನ್ನ ತಜ್ಞರ ಬಳಿ ಚರ್ಚಿಸುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್