AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Long Pepper: ಅಡುಗೆಯ ಮನೆಯಲ್ಲಿರುವ ಹಿಪ್ಪಲಿಯಲ್ಲಿದೆ ನೂರೆಂಟು ಔಷಧೀಯ ಗುಣ, ಆರೋಗ್ಯಕ್ಕೆ ಬಹಳ ಉಪಯುಕ್ತ

ಮನೆಯ ಹಿತ್ತಲಿನಲ್ಲಿ ಸುಲಭವಾಗಿ ಬೆಳೆಯ ಬಹುದಾದ ಸಸ್ಯಗಳಲ್ಲಿ ಹಿಪ್ಪಲಿ ಅಥವಾ ಪಿಪ್ಪಲಿ ಗಿಡ ಕೂಡ ಒಂದು. ಮಸಾಲೆ ಪದಾರ್ಥಗಳ ಗುಂಪಿಗೆ ಸೇರಿದ ಈ ಹಿಪ್ಪಲಿಯನ್ನು ಉದ್ದ ಮೆಣಸು ಎಂದು ಕರೆಯುತ್ತಾರೆ. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬಂದಾಗ ಈ ಹಿಪ್ಪಲಿಯಿಂದ ಮನೆ ಮದ್ದನ್ನು ತಯಾರಿಸಿ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು.

Long Pepper: ಅಡುಗೆಯ  ಮನೆಯಲ್ಲಿರುವ ಹಿಪ್ಪಲಿಯಲ್ಲಿದೆ ನೂರೆಂಟು ಔಷಧೀಯ ಗುಣ, ಆರೋಗ್ಯಕ್ಕೆ ಬಹಳ ಉಪಯುಕ್ತ
Long Pepper Image Credit source: Pinterest
ಸಾಯಿನಂದಾ
| Edited By: |

Updated on: Feb 24, 2024 | 1:08 PM

Share

ನಮ್ಮ ಮನೆಯ ಸುತ್ತ ಮುತ್ತಲಿನಲ್ಲಿರುವ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯಗಳ ಬಗ್ಗೆ ಅನೇಕರಿಗೆ ತಿಳಿದಿಲ್ಲ.  ಅಡುಗೆ ಮನೆಯಲ್ಲಿರುವ ಸಾಂಬಾರು ಪದಾರ್ಥಗಳ ಸಾಲಿಗೆ ಸೇರುವ ಈ ಹಿಪ್ಪಲಿಯನ್ನು ಪಿಪ್ಪಲಿಯೆಂದು ಕರೆಯುವುದಿದೆ. ಆಯುರ್ವೇದದಲ್ಲಿ ಹೇರಳವಾಗಿ ಬಳಸುವ ಈ ಹಿಪ್ಪಲಿಯೂ ಔಷಧೀಯ ಗುಣಗಳ ಅಗರವಾಗಿದೆ. ಕರಿಮೆಣಸಿನ ಕಾಳನ್ನು ಪೋಣಿಸಿದಂತೆ ಕಾಣುವ ಈ ಹಿಪ್ಪಲಿಯೂ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.

  1. ಹಿಪ್ಪಲಿ ಮತ್ತು ಶುಂಠಿಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಪುಡಿ ಮಾಡಿ ಕಷಾಯ ತಯಾರಿಸಿ ಎರಡು ಚಮಚದಷ್ಟು ದಿನಕ್ಕೆ ಮೂರು ಬಾರಿ ಸೇವಿಸಿದರೆ ಜ್ವರವು ಗುಣಮುಖವಾಗುತ್ತದೆ.
  2. ಹಿಪ್ಪಲಿ ಪುಡಿ, ಕಾಳು ಮೆಣಸಿನ ಪುಡಿ, ಜೇಷ್ಠ ಮಧುವಿನ ಪುಡಿ ಸಮ ಪ್ರಮಾಣದಲ್ಲಿ ಬೆರೆಸಿ, ಅರ್ಧ ಚಮಚದಷ್ಟು ವೀಳ್ಯದೆಲೆರಸ ಹಾಗೂ ಜೇನುತುಪ್ಪ ಸೇರಿಸಿ ಕುಡಿದರೆ ಅಸ್ತಮಾವು ಕಡಿಮೆಯಾಗುತ್ತದೆ.
  3. ಒಂದು ಚಮಚ ಹಿಪ್ಪಲಿ ಪುಡಿಯನ್ನು ತುಪ್ಪ ಮತ್ತು ಜೇನುತುಪ್ಪದಲ್ಲಿ ಸೇರಿಸಿ ಖಾಲಿ ಹೊಟ್ಟೆಯಲ್ಲಿ ದಿನಕ್ಕೆರಡು ಬಾರಿ ಸೇವಿಸಿದರೆ ಬಾಯಿಯ ದುರ್ವಾಸನೆಯೂ ದೂರರಾಗುತ್ತದೆ.
  4. ಹಿಪ್ಪಲಿಯ ಪುಡಿಯನ್ನು ಜೇನುತುಪ್ಪದೊಂದಿಗೆ ಸೇವಿಸಿದರೆ ರಕ್ತಹೀನತೆ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
  5. ಹಿಪ್ಪಲಿಯ ಪುಡಿಯನ್ನು ಗೋಮೂತ್ರದಲ್ಲಿ ಬೆರೆಸಿ, ಪ್ರತಿನಿತ್ಯವು ಸೇವಿಸುವುದರಿಂದ ಸಂಧಿವಾತವು ಶಮನವಾಗುತ್ತದೆ.
  6. ಹಿಪ್ಪಲಿ ಪುಡಿ, ಹುರಿದ ಜೀರಿಗೆ ಪುಡಿ ಉಪ್ಪನ್ನು ಮಜ್ಜಿಗೆಯಲ್ಲಿ ಬೆರೆಸಿ ಸೇವಿಸಿದರೆ ಮೂಲವ್ಯಾಧಿಗೆ ಪರಿಣಾಮಕಾರಿ ಔಷಧವಾಗಿದೆ.
  7. ಎರಡು ಚಮಚ ಹಿಪ್ಪಲಿ ಚೂರ್ಣ ಹಾಗೂ ಒಂದು ಚಮಚ ತ್ರಿಫಲ ಚೂರ್ಣವನ್ನು ಬಿಸಿ ನೀರಿಗೆ ಹಾಕಿಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಮಲಬದ್ಧತೆ ಸಮಸ್ಯೆಯೂ ದೂರವಾಗುತ್ತದೆ.
  8. ಸಂಧಿವಾತ, ಸೊಂಟನೋವಿಗೂ ಸಮಸ್ಯೆಗೆ ಹಿಪ್ಪಲಿ ಪುಡಿ, ಹುರಿದ ಜೀರಿಗೆ ಪುಡಿ ಹಾಗೂ ಉಪ್ಪನ್ನು ಮಜ್ಜಿಗೆಯಲ್ಲಿ ಸೇರಿಸಿ ಸೇವನೆ ಮಾಡಿದರೆ ಪರಿಣಾಮಕಾರಿಯಾಗಿದೆ.
  9. ಎರಡು ಚಿಟಿಕೆ ಹಿಪ್ಪಲಿ ಪುಡಿ ಹಾಗೂ ಒಂದು ಚಮಚ ಹಸಿ ಶುಂಠಿಯವನ್ನು ಮಿಶ್ರಣ ಮಾಡಿ ಸೇವಿಸಿದರೆ ಕಡಿಮೆ ರಕ್ತದೊತ್ತಡ ಸಮಸ್ಯೆ ದೂರವಾಗುತ್ತದೆ.
  10. ಕೂದಲು ಉದುರು ಸಮಸ್ಯೆಯಿದ್ದಲ್ಲಿ ಹಿಪ್ಪಲಿಯ ಚೂರ್ಣವನ್ನು ಬೇವಿನ ಎಲೆ ಹಾಗೂ ಹಾಲಿನಲ್ಲಿ ಅರೆದು ಕೂದಲಿಗೆ ಲೇಪಿಸಿ ಒಣಗಿದ ಬಳಿಕ ಸ್ನಾನ ಮಾಡಿದರೆ ಉತ್ತಮ.
  11. ಲಿಂಬೆರಸ ಮತ್ತು ಗಂಧದೆಣ್ಣೆಯೊಂದಿಗೆ ಹಿಪ್ಪಲಿಯ ಪುಡಿಯನ್ನು ಬೆರೆಸಿ ಹಚ್ಚುವುದರಿಂದ ಸೋರಿಯಾಸಿಸ್, ಚರ್ಮದ ಉರಿಯೂತ ಸೇರಿದಂತೆ ಚರ್ಮದ ಸಮಸ್ಯೆಗಳು ದೂರವಾಗುತ್ತದೆ.

ಈ ಮನೆಮದ್ದು ಉಪಯೋಗಿಸುವ ಮುನ್ನ ತಜ್ಞರ ಬಳಿ ಚರ್ಚಿಸುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?