AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸೌಂದರ್ಯ ದುಪ್ಪಟ್ಟಾಗಬೇಕಾದರೆ ಗುಲಾಬಿ ದಳಗಳನ್ನು ಈ ರೀತಿ ಬಳಸಿರಿ

ಗುಲಾಬಿ ದಳಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿದರೆ ನಿಮ್ಮ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ. ಒತ್ತಡ ಕಡಿಮೆಯಾಗುತ್ತದೆ. ಕೂದಲು ದಪ್ಪವಾಗಿ ಬೆಳೆಯುತ್ತದೆ. ಈ ರೀತಿ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳುವಲ್ಲಿ ಗುಲಾಬಿ ದಳಗಳು ಅದ್ಭುತ ಪ್ರಯೋಜನಗಳನ್ನು ಒಳಗೊಂಡಿದೆ. ವಿಶೇಷವಾಗಿ ದೇಸಿ ಗುಲಾಬಿಗಳನ್ನು ಹೆಚ್ಚಾಗಿ ಸೌಂದರ್ಯವರ್ಧಕಗಳಲ್ಲಿ ಬಳಸಲಾಗುತ್ತದೆ. ಹಾಗಾದರೆ ಇವುಗಳಿಂದ ಯಾವ ರೀತಿಯ ಉಪಯೋಗಗಳಿವೆ? ಬಳಕೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ನಿಮ್ಮ ಸೌಂದರ್ಯ ದುಪ್ಪಟ್ಟಾಗಬೇಕಾದರೆ ಗುಲಾಬಿ ದಳಗಳನ್ನು ಈ ರೀತಿ ಬಳಸಿರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 17, 2025 | 10:16 AM

Share

ಚರ್ಮದ ಕಾಂತಿ ಹೆಚ್ಚಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಏಕೆಂದರೆ ಸೌಂದರ್ಯ ಕಾಪಾಡಿಕೊಳ್ಳಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದ್ದೆ ಇರುತ್ತದೆ. ಅದೇ ರೀತಿ ಸದಾ ಹೊಳೆಯುವ ಚರ್ಮಕ್ಕಾಗಿ ಹೆಚ್ಚಿನ ಜನರು ಗುಲಾಬಿ ದಳಗಳನ್ನು ಬಳಸುವುದನ್ನು ನೀವು ನೋಡಿರಬಹುದು. ಆದರೆ ಇದನ್ನು ಕೂದಲಿಗೂ ಬಳಸಬಹುದು ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಈ ಗುಲಾಬಿ ದಳಗಳನ್ನು ಆರೋಗ್ಯ ಮತ್ತು ಸುಂದರವಾಗಿರುವ ಬಲವಾದ ಕೂದಲಿಗಳಿಗಾಗಿಯೂ ಬಳಸಬಹುದು. ಅದಲ್ಲದೆ ಗುಲಾಬಿ ದಳಗಳು ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಬಳಕೆಯಾಗುವುದಲ್ಲ ಬದಲಾಗಿ ಇವುಗಳಲ್ಲಿ ಹೇರಳವಾದ ಆರೋಗ್ಯ ಪ್ರಯೋಜನಗಳಿದ್ದು, ಆರೋಗ್ಯದ ನಿಧಿ ಎಂದೇ ಹೇಳಲಾಗುತ್ತದೆ. ಹಾಗಾದರೆ ಇವುಗಳಿಂದ ಯಾವ ರೀತಿಯ ಉಪಯೋಗಗಳಿವೆ? ಬಳಕೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

  • ಗುಲಾಬಿ ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಗುಲಾಬಿ ದಳಗಳಲ್ಲಿ ಫೈಬರ್ ಅಂಶವು ಹೆಚ್ಚಾಗಿರುತ್ತದೆ, ಇದು ತ್ವರಿತವಾಗಿ ತೂಕ ಇಳಿಸಿಕೊಳ್ಳಲು ಬಯಸುತ್ತಿರುವವರಿಗೂ ವರದಾನವಾಗಿದೆ.
  • ಹಗಲಿನಲ್ಲಿ ಕೆಲವು ತಾಜಾ ಗುಲಾಬಿ ದಳಗಳನ್ನು ತಿನ್ನುವುದು ಇಂದ್ರಿಯಗಳಿಗೆ ಒಳ್ಳೆಯದು. ಜೊತೆಗೆ ಇದು ನೈಸರ್ಗಿಕ ರೀತಿಯಲ್ಲಿ ಚರ್ಮದ ಅಂದವನ್ನು ಕೂಡ ಹೆಚ್ಚಿಸುತ್ತದೆ.
  • ಗುಲಾಬಿ ದಳಗಳು ಅನೇಕ ಅದ್ಭುತ ಔಷಧೀಯ ಗುಣಗಳನ್ನು ಹೊಂದಿದ್ದು ಇವುಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳಿವೆ. ಇದರಲ್ಲಿ ಕಬ್ಬಿಣ, ವಿಟಮಿನ್ ಸಿ, ಎ, ಸೋಡಿಯಂ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಫೈಬರ್ ನಂತಹ ಅಂಶಗಳಿವೆ. ಅವು ನೆತ್ತಿಯಲ್ಲಿ ಕಂಡು ಬರುವ ತುರಿಕೆ, ಉರಿಯೂತ ಮತ್ತು ದದ್ದುಗಳಿಂದ ರಕ್ಷಿಸುತ್ತವೆ.
  • ನಿಯಮಿತವಾಗಿ ಕೂದಲಿಗೆ ಗುಲಾಬಿ ದಳಗಳನ್ನು ಹಚ್ಚುವುದರಿಂದ ನೆತ್ತಿ ದೀರ್ಘಕಾಲದ ವರೆಗೆ ಹೈಡ್ರೇಟ್ ಆಗಿರುತ್ತದೆ. ಇದು ಉರಿಯೂತ ನಿವಾರಕ ಮತ್ತು ಆಂಟಿ- ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಜೊತೆಗೆ ಗುಲಾಬಿ ದಳಗಳನ್ನು ಕೂದಲಿನ ಬೆಳವಣಿಗೆಗೆ ಬಳಸಬಹುದು. ಇದಕ್ಕಾಗಿ, ಕೆಲವು ಗುಲಾಬಿ ದಳಗಳನ್ನು ಕಡಿಮೆ ಉರಿಯಲ್ಲಿ ಬೇಯಿಸಬೇಕು. ಇದು ತಣ್ಣಗಾದ ನಂತರ, ಅದರಿಂದ ತಲೆಯನ್ನು ಚೆನ್ನಾಗಿ ಮಸಾಜ್ ಮಾಡಿ.
  • ತೆಂಗಿನ ಎಣ್ಣೆಯನ್ನು ಗುಲಾಬಿ ದಳಗಳೊಂದಿಗೆ ಬಿಸಿ ಮಾಡಿ ತಣ್ಣಗಾದ ನಂತರ ತಲೆಗೆ ಹಚ್ಚಿದರೆ, ಒತ್ತಡ ಹೆಚ್ಚಾಗಿರುವ ಮೆದುಳು ತಣ್ಣಗಾಗುತ್ತದೆ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚುತ್ತದೆ. ಒತ್ತಡ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಕೂದಲು ದಪ್ಪವಾಗಿ ಬೆಳೆಯುತ್ತದೆ.

ಇದನ್ನೂ ಓದಿ: ಬಾಳೆಹಣ್ಣುಗಳು ರಕ್ತದ ಸಕ್ಕರೆಯನ್ನು ಹೆಚ್ಚಿಸುತ್ತವೆಯೇ? ತೂಕ ನಷ್ಟಕ್ಕೆ ಇದು ಒಳ್ಳೆಯದೇ?

ಗುಲಾಬಿ ದಳದಿಂದ ಹೇರ್ ಮಾಸ್ಕ್ ತಯಾರಿಸುವುದು ಹೇಗೆ?

ಈ ಹೂವಿನ ತಾಜಾ ದಳಗಳನ್ನು ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಈ ಪೇಸ್ಟ್ ಗೆ ಅಲೋವೆರಾ ಜೆಲ್ ಮತ್ತು ಮೊಸರು ಸೇರಿಸಿ. ಇದನ್ನು ವಾರಕ್ಕೆ ಒಂದು ಅಥವಾ ಎರಡು ಬಾರಿ ಕೂದಲಿಗೆ ಹಚ್ಚಿಕೊಳ್ಳಿ. ಅದಲ್ಲದಿದ್ದರೆ ರೋಸ್ ಮೇರಿ ಹೇರ್ ಆಯಿಲ್ ಗೆ ಗುಲಾಬಿ ದಳಗಳನ್ನು ಮೃದುವಾಗಿ ಪೇಸ್ಟ್ ಮಾಡಿಕೊಂಡು ಅದನ್ನು ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿ. ಅಥವಾ ಗುಲಾಬಿ ದಳಗಳಿಂದ ಹೇರ್ ಸ್ಪ್ರೇ ತಯಾರಿಸಬಹುದು. ಈ ರೀತಿ ಮಾಡಲು, ಕೆಲವು ಗುಲಾಬಿ ದಳಗಳನ್ನು ಎರಡು ಲೋಟ ನೀರಿನಲ್ಲಿ ಚೆನ್ನಾಗಿ ಕುದಿಸಿ, ತಣ್ಣಗಾಗಿಸಿ ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಿ ಬಳಸಬಹುದು. ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳುವಲ್ಲಿ ಗುಲಾಬಿ ದಳಗಳು ಅದ್ಭುತ ಪ್ರಯೋಜನಗಳ ಆಗರವಾಗಿದೆ. ವಿಶೇಷವಾಗಿ ದೇಸಿ ಗುಲಾಬಿಗಳನ್ನು ಹೆಚ್ಚಾಗಿ ಸೌಂದರ್ಯವರ್ಧಕಗಳಲ್ಲಿ ಬಳಸಲಾಗುತ್ತದೆ. ನೀವು ಕೂಡ ಇದನ್ನು ಪ್ರಯತ್ನಿಸಿ ನೋಡಿ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಿ.)

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!