AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸೌಂದರ್ಯ ದುಪ್ಪಟ್ಟಾಗಬೇಕಾದರೆ ಗುಲಾಬಿ ದಳಗಳನ್ನು ಈ ರೀತಿ ಬಳಸಿರಿ

ಗುಲಾಬಿ ದಳಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿದರೆ ನಿಮ್ಮ ಜ್ಞಾಪಕಶಕ್ತಿ ಹೆಚ್ಚಾಗುತ್ತದೆ. ಒತ್ತಡ ಕಡಿಮೆಯಾಗುತ್ತದೆ. ಕೂದಲು ದಪ್ಪವಾಗಿ ಬೆಳೆಯುತ್ತದೆ. ಈ ರೀತಿ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳುವಲ್ಲಿ ಗುಲಾಬಿ ದಳಗಳು ಅದ್ಭುತ ಪ್ರಯೋಜನಗಳನ್ನು ಒಳಗೊಂಡಿದೆ. ವಿಶೇಷವಾಗಿ ದೇಸಿ ಗುಲಾಬಿಗಳನ್ನು ಹೆಚ್ಚಾಗಿ ಸೌಂದರ್ಯವರ್ಧಕಗಳಲ್ಲಿ ಬಳಸಲಾಗುತ್ತದೆ. ಹಾಗಾದರೆ ಇವುಗಳಿಂದ ಯಾವ ರೀತಿಯ ಉಪಯೋಗಗಳಿವೆ? ಬಳಕೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ನಿಮ್ಮ ಸೌಂದರ್ಯ ದುಪ್ಪಟ್ಟಾಗಬೇಕಾದರೆ ಗುಲಾಬಿ ದಳಗಳನ್ನು ಈ ರೀತಿ ಬಳಸಿರಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 17, 2025 | 10:16 AM

Share

ಚರ್ಮದ ಕಾಂತಿ ಹೆಚ್ಚಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಏಕೆಂದರೆ ಸೌಂದರ್ಯ ಕಾಪಾಡಿಕೊಳ್ಳಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದ್ದೆ ಇರುತ್ತದೆ. ಅದೇ ರೀತಿ ಸದಾ ಹೊಳೆಯುವ ಚರ್ಮಕ್ಕಾಗಿ ಹೆಚ್ಚಿನ ಜನರು ಗುಲಾಬಿ ದಳಗಳನ್ನು ಬಳಸುವುದನ್ನು ನೀವು ನೋಡಿರಬಹುದು. ಆದರೆ ಇದನ್ನು ಕೂದಲಿಗೂ ಬಳಸಬಹುದು ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ಈ ಗುಲಾಬಿ ದಳಗಳನ್ನು ಆರೋಗ್ಯ ಮತ್ತು ಸುಂದರವಾಗಿರುವ ಬಲವಾದ ಕೂದಲಿಗಳಿಗಾಗಿಯೂ ಬಳಸಬಹುದು. ಅದಲ್ಲದೆ ಗುಲಾಬಿ ದಳಗಳು ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಬಳಕೆಯಾಗುವುದಲ್ಲ ಬದಲಾಗಿ ಇವುಗಳಲ್ಲಿ ಹೇರಳವಾದ ಆರೋಗ್ಯ ಪ್ರಯೋಜನಗಳಿದ್ದು, ಆರೋಗ್ಯದ ನಿಧಿ ಎಂದೇ ಹೇಳಲಾಗುತ್ತದೆ. ಹಾಗಾದರೆ ಇವುಗಳಿಂದ ಯಾವ ರೀತಿಯ ಉಪಯೋಗಗಳಿವೆ? ಬಳಕೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

  • ಗುಲಾಬಿ ದೇಹದಿಂದ ಕಲ್ಮಶಗಳನ್ನು ಹೊರಹಾಕಲು ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಗುಲಾಬಿ ದಳಗಳಲ್ಲಿ ಫೈಬರ್ ಅಂಶವು ಹೆಚ್ಚಾಗಿರುತ್ತದೆ, ಇದು ತ್ವರಿತವಾಗಿ ತೂಕ ಇಳಿಸಿಕೊಳ್ಳಲು ಬಯಸುತ್ತಿರುವವರಿಗೂ ವರದಾನವಾಗಿದೆ.
  • ಹಗಲಿನಲ್ಲಿ ಕೆಲವು ತಾಜಾ ಗುಲಾಬಿ ದಳಗಳನ್ನು ತಿನ್ನುವುದು ಇಂದ್ರಿಯಗಳಿಗೆ ಒಳ್ಳೆಯದು. ಜೊತೆಗೆ ಇದು ನೈಸರ್ಗಿಕ ರೀತಿಯಲ್ಲಿ ಚರ್ಮದ ಅಂದವನ್ನು ಕೂಡ ಹೆಚ್ಚಿಸುತ್ತದೆ.
  • ಗುಲಾಬಿ ದಳಗಳು ಅನೇಕ ಅದ್ಭುತ ಔಷಧೀಯ ಗುಣಗಳನ್ನು ಹೊಂದಿದ್ದು ಇವುಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳಿವೆ. ಇದರಲ್ಲಿ ಕಬ್ಬಿಣ, ವಿಟಮಿನ್ ಸಿ, ಎ, ಸೋಡಿಯಂ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಫೈಬರ್ ನಂತಹ ಅಂಶಗಳಿವೆ. ಅವು ನೆತ್ತಿಯಲ್ಲಿ ಕಂಡು ಬರುವ ತುರಿಕೆ, ಉರಿಯೂತ ಮತ್ತು ದದ್ದುಗಳಿಂದ ರಕ್ಷಿಸುತ್ತವೆ.
  • ನಿಯಮಿತವಾಗಿ ಕೂದಲಿಗೆ ಗುಲಾಬಿ ದಳಗಳನ್ನು ಹಚ್ಚುವುದರಿಂದ ನೆತ್ತಿ ದೀರ್ಘಕಾಲದ ವರೆಗೆ ಹೈಡ್ರೇಟ್ ಆಗಿರುತ್ತದೆ. ಇದು ಉರಿಯೂತ ನಿವಾರಕ ಮತ್ತು ಆಂಟಿ- ಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಜೊತೆಗೆ ಗುಲಾಬಿ ದಳಗಳನ್ನು ಕೂದಲಿನ ಬೆಳವಣಿಗೆಗೆ ಬಳಸಬಹುದು. ಇದಕ್ಕಾಗಿ, ಕೆಲವು ಗುಲಾಬಿ ದಳಗಳನ್ನು ಕಡಿಮೆ ಉರಿಯಲ್ಲಿ ಬೇಯಿಸಬೇಕು. ಇದು ತಣ್ಣಗಾದ ನಂತರ, ಅದರಿಂದ ತಲೆಯನ್ನು ಚೆನ್ನಾಗಿ ಮಸಾಜ್ ಮಾಡಿ.
  • ತೆಂಗಿನ ಎಣ್ಣೆಯನ್ನು ಗುಲಾಬಿ ದಳಗಳೊಂದಿಗೆ ಬಿಸಿ ಮಾಡಿ ತಣ್ಣಗಾದ ನಂತರ ತಲೆಗೆ ಹಚ್ಚಿದರೆ, ಒತ್ತಡ ಹೆಚ್ಚಾಗಿರುವ ಮೆದುಳು ತಣ್ಣಗಾಗುತ್ತದೆ ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚುತ್ತದೆ. ಒತ್ತಡ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಕೂದಲು ದಪ್ಪವಾಗಿ ಬೆಳೆಯುತ್ತದೆ.

ಇದನ್ನೂ ಓದಿ: ಬಾಳೆಹಣ್ಣುಗಳು ರಕ್ತದ ಸಕ್ಕರೆಯನ್ನು ಹೆಚ್ಚಿಸುತ್ತವೆಯೇ? ತೂಕ ನಷ್ಟಕ್ಕೆ ಇದು ಒಳ್ಳೆಯದೇ?

ಗುಲಾಬಿ ದಳದಿಂದ ಹೇರ್ ಮಾಸ್ಕ್ ತಯಾರಿಸುವುದು ಹೇಗೆ?

ಈ ಹೂವಿನ ತಾಜಾ ದಳಗಳನ್ನು ಚೆನ್ನಾಗಿ ರುಬ್ಬಿಕೊಳ್ಳಿ. ಈಗ ಈ ಪೇಸ್ಟ್ ಗೆ ಅಲೋವೆರಾ ಜೆಲ್ ಮತ್ತು ಮೊಸರು ಸೇರಿಸಿ. ಇದನ್ನು ವಾರಕ್ಕೆ ಒಂದು ಅಥವಾ ಎರಡು ಬಾರಿ ಕೂದಲಿಗೆ ಹಚ್ಚಿಕೊಳ್ಳಿ. ಅದಲ್ಲದಿದ್ದರೆ ರೋಸ್ ಮೇರಿ ಹೇರ್ ಆಯಿಲ್ ಗೆ ಗುಲಾಬಿ ದಳಗಳನ್ನು ಮೃದುವಾಗಿ ಪೇಸ್ಟ್ ಮಾಡಿಕೊಂಡು ಅದನ್ನು ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿ. ಅಥವಾ ಗುಲಾಬಿ ದಳಗಳಿಂದ ಹೇರ್ ಸ್ಪ್ರೇ ತಯಾರಿಸಬಹುದು. ಈ ರೀತಿ ಮಾಡಲು, ಕೆಲವು ಗುಲಾಬಿ ದಳಗಳನ್ನು ಎರಡು ಲೋಟ ನೀರಿನಲ್ಲಿ ಚೆನ್ನಾಗಿ ಕುದಿಸಿ, ತಣ್ಣಗಾಗಿಸಿ ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಿ ಬಳಸಬಹುದು. ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳುವಲ್ಲಿ ಗುಲಾಬಿ ದಳಗಳು ಅದ್ಭುತ ಪ್ರಯೋಜನಗಳ ಆಗರವಾಗಿದೆ. ವಿಶೇಷವಾಗಿ ದೇಸಿ ಗುಲಾಬಿಗಳನ್ನು ಹೆಚ್ಚಾಗಿ ಸೌಂದರ್ಯವರ್ಧಕಗಳಲ್ಲಿ ಬಳಸಲಾಗುತ್ತದೆ. ನೀವು ಕೂಡ ಇದನ್ನು ಪ್ರಯತ್ನಿಸಿ ನೋಡಿ.

(ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ವೈದ್ಯರು ಅಥವಾ ತಜ್ಞರನ್ನು ಸಂಪರ್ಕಿಸಿ.)

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ