AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳಸಿ ಎಲೆಯ ಆರೋಗ್ಯ ಪ್ರಯೋಜನಗಳು ಒಂದೆರಡಲ್ಲ, ಇಲ್ಲಿದೆ ನೋಡಿ

ಭಾರತೀಯ ಸಂಸ್ಕೃತಿಯಲ್ಲಿ ತುಳಸಿಗೆ ತನ್ನದೇ ಆದ ವೈಶಿಷ್ಯವಿದ್ದು, ಲಕ್ಷ್ಮಿ ದೇವಿಯ ಸಹೋದರಿಯಾಗಿರುವ ಈ ತುಳಸಿಯು ವಿಷ್ಣುವಿಗೆ ಅತ್ಯಂತ ಪ್ರಿಯವಾದವಳು ಎನ್ನುವ ನಂಬಿಕೆಯಿದೆ. ದೇವರ ಸ್ಥಾನದಲ್ಲಿಟ್ಟು ಪೂಜಿಸುವ ಈ ತುಳಸಿಯೂ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದ್ದು, ಅನೇಕ ರೋಗಗಳಿಗೆ ರಾಮಬಾಣವಾಗಿದೆ. ಹಾಗಾದ್ರೆ ಈ ತುಳಸಿ ಎಲೆಯಿಂದ ಹಲವಾರು ರೋಗಗಳಿಗೆ ಮನೆ ಮದ್ದಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

ತುಳಸಿ ಎಲೆಯ ಆರೋಗ್ಯ ಪ್ರಯೋಜನಗಳು ಒಂದೆರಡಲ್ಲ, ಇಲ್ಲಿದೆ ನೋಡಿ
ಸಾಯಿನಂದಾ
| Edited By: |

Updated on: Jan 27, 2024 | 2:40 PM

Share

ಹಿಂದೂ ಧರ್ಮದಲ್ಲಿ ತುಳಸಿಯನ್ನು ಲಕ್ಷ್ಮಿ ದೇವಿಗೆ ಹೋಲಿಸುವ ಮೂಲಕ ವಿಶೇಷ ಸ್ಥಾನವನ್ನು ನೀಡಲಾಗಿದೆ. ಆಯುರ್ವೇದದಲ್ಲಿ ವಿಶೇಷ ಔಷಧೀಯ ಮೂಲಿಕೆಯಾಗಿ ಬಳಸುವ ಈ ತುಳಸಿಯಲ್ಲಿ ಅಂಟಿ ಆಕ್ಸಿಡೆಂಟ್ಸ್​ ಅಂಶಗಳು ಹೇರಳವಾಗಿದೆ. ಹೀಗಾಗಿ ತುಳಸಿಯು ನಾನಾ ರೋಗಗಳನ್ನು ಶಮನ ಮಾಡುವ ಗುಣವನ್ನು ಹೊಂದಿದೆ. ನಮ್ಮ ಹಿರಿಯರು ಈ ತುಳಸಿ ಸಸ್ಯವನ್ನು ಬಳಸಿ ಹಲವಾರು ಮನೆ ಮದ್ದನ್ನು ತಯಾರಿಸಿ ಆರೋಗ್ಯ ಸಮಸ್ಯೆಗಳಿಗೆ ಔಷಧಿಯಾಗಿ ಇವತ್ತಿಗೂ ಬಳಸುತ್ತಿದ್ದಾರೆ.

ತುಳಸಿ ಎಲೆಯ ಮನೆಮದ್ದುಗಳು ಇಲ್ಲಿವೆ:

* ತುಳಸಿ ಎಲೆಯನ್ನು ಜಜ್ಜಿ ಒಂದು ಲೋಟ ನೀರಿನಲ್ಲಿ ಹಾಕಿ ಮೂರು ನಾಲ್ಕು ಘಂಟೆಗಳ ಬಳಿಕ ಕುಡಿದರೆ ಅಜೀರ್ಣ ಸಮಸ್ಯೆಯೂ ನಿವಾರಣೆಯಾಗುವುದು.

* ಅಸ್ತಮಾ ಅಥವಾ ಉಬ್ಬಸ ಸಮಸ್ಯೆಯಿರುವವರು ತುಳಸಿ ಎಲೆಗಳನ್ನು ಜಜ್ಜಿ ಒಂದು ಲೀಟರ್ ನೀರಿನಲ್ಲಿ ಚೆನ್ನಾಗಿ ಕುದಿಸಿ, ಈ ನೀರು ಕುಡಿಯುವುದು ಉತ್ತಮ.

* ಇಸುಬು ಅಥವಾ ಹುಳು ಕಡ್ಡಿಯ ಸಮಸ್ಯೆ ಇದ್ದವರು ತುಳಸಿ ಎಲೆಗೆ ಉಪ್ಪು ಬೆರೆಸಿ ಅದನ್ನು ಚೆನ್ನಾಗಿ ಅರೆದು, ಈ ಮಿಶ್ರಣವನ್ನು ಇಸುಬು ಇರುವ ಜಾಗಕ್ಕೆ ಲೇಪಿಸಿದರೆ ಚರ್ಮದ ಸಮಸ್ಯೆಯು ಕಡಿಮೆಯಾಗುವುದು.

* ತುಳಸಿ ಎಲೆಗಳನ್ನು ಬೆಳಿಗ್ಗೆ ಮತ್ತು ರಾತ್ರಿ ಆಹಾರ ಸೇವಿಸುವ ನಂತರ ಅಗಿದು ತಿಂದರೆ ಬಾಯಿಯಿಂದ ಹೊರ ಬರುವ ದುರ್ನಾತವು ಇಲ್ಲದಂತಾಗುತ್ತದೆ.

* ಕೀಲು ನೋವು ಸಮಸ್ಯೆಯಿದ್ದವರು ಇಪ್ಪತ್ತು ತುಳಸಿ ಎಲೆ, ಐದು ಕಾಳು ಮೆಣಸು ಎರಡನ್ನು ಸೇರಿಸಿ ಅರೆದು, ಅದಕ್ಕೆ ಒಂದು ಚಮಚ ತುಪ್ಪ ಸೇರಿಸಿ ಬೆಳೆಗ್ಗೆ ರಾತ್ರಿ ಸೇವಿಸಿದರೆ ಪರಿಣಾಮಕಾರಿ.

* 10 ಗ್ರಾಂ ತುಳಸಿ ಬೀಜದ ಪುಡಿಗೆ ಒಂದು ಚಮಚ ಬೆಣ್ಣೆ ಮತ್ತು ಸ್ವಲ್ಪ ಬೆಲ್ಲ ಸೇರಿಸಿ ದಿನಕ್ಕೆರಡು ಸಲ ತಿನ್ನುವುದರಿಂದ ಮೂಲವ್ಯಾಧಿ ಸಮಸ್ಯೆಯೂ ಶಮನವಾಗುತ್ತದೆ.

ಇದನ್ನೂ ಓದಿ: ಅಲೋವೆರಾ ಜ್ಯೂಸ್ ಕುಡಿಯುವ ಅಭ್ಯಾಸ ಬೆಳೆಸಿಕೊಂಡರೆ ಈ ರೋಗಗಳು ಮಾಯ

* ಜ್ವರ ಇದ್ದವರು ಒಂದು ಹಿಡಿಯಷ್ಟು ತುಳಸಿ ಎಲೆಯನ್ನು ಜಜ್ಜಿ ಒಂದು ಲೋಟ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ, ಅದಕ್ಕೆಬೆಲ್ಲವನ್ನು ಸೇರಿಸಬೇಕು. ಇದನ್ನು ದಿನಕ್ಕೆ ಮೂರು ಬಾರಿ ನಾಲ್ಕು ಚಮಚದಂತೆ ಸೇವಿಸುವುದರಿಂದ ಜ್ವರವೂ ಕಡಿಮೆಯಾಗುತ್ತದೆ.

* ಗಂಟಲು ನೋವು ಬಾಧಿಸುತ್ತಿದ್ದರೆ, ತುಳಸಿ ಎಲೆ, ದೊಡ್ಡ ಪತ್ರೆ ಎಲೆಗಳನ್ನು ಅರೆದು, ಅರ್ಧ ಲೀಟರ್ ನೀರಿನಲ್ಲಿ ಕುದಿಸಬೇಕು. ಕುದಿಸಿದ ನೀರಿಗೆ ಸ್ವಲ್ಪ ಉಪ್ಪು ಬೆರೆಸಿ ದಿನಕ್ಕೆ ಮೂರು ಸಲ ಊಟಕ್ಕೂ ಮುನ್ನ ಕುಡಿಯುವುದರಿಂದ ಪರಿಣಾಮಕಾರಿಯಾಗಿದೆ.

* ಹೊಟ್ಟೆ ನೋವಿನಿಂದ ಬಳಲುತ್ತಿರುವವರು ತುಳಸಿ ರಸಕ್ಕೆ ಹಸಿಶುಂಠಿ ರಸ ಬೆರೆಸಿ ಬಿಸಿ ಮಾಡಿ, ದಿನಕ್ಕೆ ಎರಡು ಬಾರಿಯಂತೆ ನಾಲ್ಕು ಚಮಚದಷ್ಟು ಸೇವಿಸಿದರೆ ಉತ್ತಮ ಫಲಿತಾಂಶವು ಸಿಗುತ್ತದೆ.

* ತುಳಸಿ ಎಲೆ ಮತ್ತು ಬ್ರಾಹ್ಮೀ ಎಲೆಯನ್ನು ಅರೆದು ಇಸುಬು (ಹುಳುಕಡ್ಡಿ) ಇರುವ ಜಾಗಕ್ಕೆ ಲೇಪಿಸುವುದರಿಂದ ಗುಣಮುಖವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ