AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕ ಕೊಲೆಸ್ಟ್ರಾಲ್​​​ನಿಂದಾಗಿ ದೇಹದಲ್ಲಿ ಈ ಲಕ್ಷಣಗಳು ಕಂಡುಬರಬಹುದು

ದೇಹದಲ್ಲಾಗುವ ಕೆಲವೊಂದು ಬದಲಾವಣೆಗಳು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಅಧಿಕವಾಗಿದೆ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದ ಇಂತಹ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯ ಬೇಡ.

ಅಧಿಕ ಕೊಲೆಸ್ಟ್ರಾಲ್​​​ನಿಂದಾಗಿ ದೇಹದಲ್ಲಿ ಈ ಲಕ್ಷಣಗಳು ಕಂಡುಬರಬಹುದು
ಅಕ್ಷತಾ ವರ್ಕಾಡಿ
|

Updated on: Jul 02, 2023 | 7:08 PM

Share

ಅಧಿಕ ಕೊಲೆಸ್ಟ್ರಾಲ್ ಇದು ಯಾವುದೇ ಲಕ್ಷಣಗಳನ್ನು ಹೊಂದಿರುವುದಿಲ್ಲ, ಜೊತೆಗೆ ಆರಂಭದಲ್ಲಿ ದೇಹದ ಮೇಲೆ ಯಾವುದೇ ಪರಿಣಾಮವನ್ನುಂಟು ಮಾಡುವುದಿಲ್ಲ. ಆದ್ದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಆಗಾಗ ಪರೀಕ್ಷಿಸುವುದು ಮುಖ್ಯ. ಇದರ ಹೊರತಾಗಿಯೂ ನಿಮ್ಮ ದೇಹದಲ್ಲಾಗುವ ಕೆಲವೊಂದು ಬದಲಾವಣೆಗಳು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಅಧಿಕವಾಗಿದೆ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದ ಇಂತಹ ಲಕ್ಷಣಗಳು ನಿಮ್ಮಲ್ಲಿ ಕಂಡುಬಂದರೆ ಎಂದಿಗೂ ನಿರ್ಲಕ್ಷ್ಯ ಬೇಡ.

ಕಾಲು ಭಾರವಾದಂತೆ ಅನುಭವ:

ತೀವ್ರವಾದ ನೋವಿನಿಂದಾಗಿ ಕಾಲುಗಳಲ್ಲಿ ಭಾರವಾದ ಭಾವನೆಯು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಿದೆ ಎಂಬುದರ ಸೂಚನೆಯಾಗಿರಬಹುದು. ವಾಕಿಂಗ್ ಸಮಯದಲ್ಲಿ ತೊಡೆಯ ಭಾಗಗಳಲ್ಲಿ ನೋವು ಕಾಣಿಸಿಕೊಳ್ಳಬಹುದು.

ಆಗಾಗ್ಗೆ ಸೆಳೆತ:

ವಿಶೇಷವಾಗಿ ಹಿಮ್ಮಡಿ ಮತ್ತು ಕಾಲ್ಬೆರಳುಗಳಲ್ಲಿ ಸೆಳೆತ ಸಾಮಾನ್ಯವಾಗಿ ಅಧಿಕ ಕೊಲೆಸ್ಟ್ರಾಲ್ ಹೊಂದಿರುವವರಲ್ಲಿ ಕಂಡುಬರುತ್ತವೆ. ಹಾನಿಕಾರಕ ಅಪಧಮನಿಗಳ ಕಾರಣದಿಂದಾಗಿ ಇದು ಸಂಭವಿಸುತ್ತದೆ. ಸೆಳೆತಗಳು ಹೆಚ್ಚಾಗಿ ರಾತ್ರಿಯಲ್ಲಿ ಸಂಭವಿಸುತ್ತವೆ.

ಇದನ್ನೂ ಓದಿ: ದೇಹದ ಮೇಲಿನ ಮಚ್ಚೆಯ ಆಕಾರವು ಬದಲಾಗುತ್ತಿದೆಯೇ? ಇದು ಚರ್ಮದ ಕ್ಯಾನ್ಸರ್​​ನ ಅಪಾಯದ ಸೂಚಕವಾಗಿರಬಹುದು

ಶೀತ ಪಾದಗಳು:

ಹವಾಮಾನವು ತಂಪಾಗಿರುವಾಗ ಸಾಮಾನ್ಯವಾಗಿ ಪಾದಗಳು ತಣ್ಣಗಾಗುತ್ತದೆ. ಆದರೆ ಯಾವುದೇ ಕಾರಣವಿಲ್ಲದೆ ನಿಮ್ಮ ಕಾಲುಗಳು ತಣ್ಣಗಾಗುತ್ತಿದ್ದರೆ ನಿಮ್ಮ ಕೊಲೆಸ್ಟ್ರಾಲ್ ಅದಕ್ಕೆ ಕಾರಣವಾಗಬಹುದು. ಈ ಚಿಹ್ನೆಯನ್ನು ನಿರ್ಲಕ್ಷಿಸಬೇಡಿ ಮತ್ತು ಸಾಧ್ಯವಾದಷ್ಟು ಬೇಗ ನಿಮ್ಮ ರಕ್ತ ಪರೀಕ್ಷೆ ಮಾಡುವುದು ಅಗತ್ಯ.

ಚರ್ಮದ ಬಣ್ಣದಲ್ಲಿ ಬದಲಾವಣೆ:

ಮುಚ್ಚಿಹೋಗಿರುವ ಅಪಧಮನಿಗಳ ಕಾರಣ, ರಕ್ತದ ಹರಿವು ದೇಹದ ಕೆಲವು ಭಾಗಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಕಡಿಮೆ ರಕ್ತ ಪೂರೈಕೆಯಿಂದಾಗಿ ಚರ್ಮದ ಬಣ್ಣದಲ್ಲಿ ಬದಲಾವಣೆಯು ಕಂಡುಬರುತ್ತದೆ. ನಿಮ್ಮ ಚರ್ಮದ ಬಣ್ಣದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದರೆ ನಿರ್ಲಕ್ಷಿಸಬೇಡಿ.

ಗಾಯದ ಬೇಗ ಗುಣ ಆಗದೆ ಇರುವುದು:

ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟವು ದೇಹದಲ್ಲಿ ಕಳಪೆ ರಕ್ತ ಪರಿಚಲನೆಗೆ ಕಾರಣವಾಗುತ್ತದೆ. ಇದು ಯಾವುದೇ ಗಾಯಗಳು ಬೇಗ ವಾಸಿಯಾಗದಿರಲು ಕಾರಣವಾಗುತ್ತದೆ. ಇದಕ್ಕೆ ಅಧಿಕ ಕೊಲೆಸ್ಟ್ರಾಲ್ ಮಟ್ಟದ ಹೊರತಾಗಿ ಮಧುಮೇಹ ಸೇರಿದಂತೆ ಇತರ ಕಾರಣಗಳೂ ಇರಬಹುದು. ಆದ್ದರಿಂದ ಇಂತಹ ಲಕ್ಷಣಗಳು ಕಂಡು ಬಂದರೆ ರಕ್ತ ಪರೀಕ್ಷೆಯ ಮಾಡಿಸುವುದು ಅಗತ್ಯ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ