AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin B12 Deficiency: ವಿಟಮಿನ್ ಬಿ 12 ಕೊರತೆಯಿಂದ ಭಾದಿಸುವ ಆರೋಗ್ಯ ಸಮಸ್ಯೆಗಳಾವುವು?

ಉತ್ತಮ ಆರೋಗ್ಯಕ್ಕಾಗಿ ನಮ್ಮ ದೇಹಕ್ಕೆ ಅನೇಕ ಜೀವಸತ್ವಗಳು ಮತ್ತು ಖನಿಜಗಳ ಅಗತ್ಯವಿದೆ. ಆದರೆ ಈ ಪೋಷಕಾಂಶಗಳ ಕೊರತೆಯು ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಅದೇ ರೀತಿ ವಿಟಮಿನ್ ಬಿ12 ಜೀವಸತ್ವದ ಕೊರತೆಯಿಂದಲೂ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ಬಿ12 ಜೀವಸತ್ವ ಕೊರತೆಯ ಲಕ್ಷಣಗಳು ಯಾವುವು, ಆ ಕೊರತೆಯನ್ನು ತಡೆಗಟ್ಟುವ ಮಾರ್ಗಗಳು ಯಾವುವು ಎಂಬುದನ್ನು ತಿಳಿಯೋಣ.

Vitamin B12 Deficiency: ವಿಟಮಿನ್ ಬಿ 12 ಕೊರತೆಯಿಂದ ಭಾದಿಸುವ ಆರೋಗ್ಯ ಸಮಸ್ಯೆಗಳಾವುವು?
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 25, 2023 | 4:07 PM

Share

ಜೀವಸತ್ವಗಳು ನಮ್ಮ ದೇಹಕ್ಕೆ ಬಹಳ ಮುಖ್ಯ. ಯಾವುದೇ ರೀತಿಯ ಪೋಷಕಾಂಶದ ಕೊರತೆಯು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಅದರಂತೆ ವಿಟಮಿನ್ ಬಿ12 (Vitamin B12) ಕೂಡಾ ನಮ್ಮ ದೇಹ ಸದೃಢವಾಗಿಡಲು ಬಹಳ ಮುಖ್ಯ. ಈ ಜೀವಸತ್ವದ ಕೊರತೆಯು ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವಿಟಮಿನ್ ಬಿ12 ಕೊರತೆಯಿಂದ ಏನಾಗುತ್ತದೆ, ಅದರ ಲಕ್ಷಣಗಳು ಯಾವುವು ಮತ್ತು ಆ ಕೊರತೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಮಾಹಿತಿ ಇಲ್ಲಿದೆ.

ವಿಟಮಿನ್ ಬಿ12 ನಮ್ಮ ದೇಹಕ್ಕೆ ಏಕೆ ಮುಖ್ಯವಾಗಿದೆ:

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ದೇಹಕ್ಕೆ ಅನೇಕ ಜೀವಸತ್ವಗಳು ಮತ್ತು ಪೋಷಕಾಂಶಗಳು ಬೇಕಾಗುತ್ತವೆ. ಈ ಪೋಷಕಾಂಶಗಳ ಕೊರತೆಯು ವ್ಯಕ್ತಿಯಲ್ಲಿ ಸಣ್ಣ ಪ್ರಮಾಣದ ಅಥವಾ ದೊಡ್ಡ ಪ್ರಮಾಣದ ಆರೋಗ್ಯ ಸಮಸ್ಯೆಯನ್ನು ಉಂಟುಮಾಡಬಹುದು. ಅದರಂತೆ ವಿಟಮಿನ್ ಬಿ12 ಆರೋಗ್ಯಕರ ಕೆಂಪು ರಕ್ತಕಣಗಳ ಉತ್ಪಾದನೆಗೆ ಅಗತ್ಯವಾಗಿ ಬೇಕಾಗಿರುವ ಪೋಷಕಾಂಶವಾಗಿದೆ. ಈ ಕೊರತೆಯು ಹಲವಾರು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು

ದೀರ್ಘಕಾಲದ ವಿಟಮಿನ್ ಬಿ12 ಕೊರತೆಯಿಂದ ಏನಾಗುತ್ತದೆ:

ದೀರ್ಘಕಾಲದ ವಿಟಮಿನ್ ಬಿ12 ಕೊರತೆಯು ಆರೋಗ್ಯಕ್ಕೆ ಅಪಾಯಕಾರಿ. ಇದು ನರ ಹಾನಿ, ಹೃದಯ ವೈಫಲ್ಯ ಮತ್ತು ಕರುಳಿನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ ಸಮಯಕ್ಕೆ ಸರಿಯಾಗಿ ಈ ಪೋಷಕಾಂಶದ ಕೊರತೆಯಿರುವುದನ್ನು ಪತ್ತೆ ಹಚ್ಚಿ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಪಡೆಯಬೇಕು.

ವಿಟಮಿನ್ ಬಿ12 ಕೊರತೆಯಿಂದ ದೇಹದಲ್ಲಿ ಕಾಣಿಸಿಕೊಳ್ಳುವ ಚಿಹ್ನೆಗಳು:

• ನಾಲಿಗೆ ಮೇಲೆ ದದ್ದು ಮತ್ತು ಬಾಯಿಯಲ್ಲಿ ಹುಣ್ಣು

• ಉಸಿರಾಟದ ತೊಂದರೆ

• ಕೈ ಮತ್ತು ಕಾಲುಗಳ ಮರಗಟ್ಟುವಿಕೆ

• ತೂಕನಷ್ಟ

• ತಲೆನೋವು

• ಹಸಿವಿನ ಕೊರತೆ

• ಮೂಳೆಗಳು ದುರ್ಬಲವಾಗುವುದು

ಇದನ್ನೂ ಓದಿ:ವಿಟಮಿನ್ ಬಿ 12 ಕೊರತೆಯು ದೇಹದಲ್ಲಿ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತವೆ

ವಿಟಮಿನ್ ಬಿ12 ಕೊರತೆಯ ಇತರ ಲಕ್ಷಣಗಳು:

ಕೆಂಪು ರಕ್ತಕಣಗಳು ದೇಹದಾದ್ಯಂತ ಆಮ್ಲಜನಕವನ್ನು ಸಾಗಿಸುವ ಕೆಲಸವನ್ನು ಮಾಡುತ್ತದೆ. ಅವುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ವಿಟಮಿನ್ ಬಿ12 ಅತ್ಯವಶ್ಯಕವಾಗಿದೆ. ಹೀಗಿರುವಾಗ ಬಿ12 ಜೀವಸತ್ವದ ಕೊರತೆಯಿದ್ದರೆ ರಕ್ತದಲ್ಲಿ ಆಮ್ಲಜನಕವನ್ನು ಸಾಗಿಸುವ ಸಾಮರ್ಥ್ಯ ಕಡಿಮೆಯಾಗುತ್ತದೆ, ಇದು ಆಯಾಸಕ್ಕೆ ಕಾರಣವಾಗಬಹುದು. ಈ ಪರಿಸ್ಥಿತಿಯನ್ನು ಮೆಗಾಲೋಬ್ಲಾಸ್ಟಿಕ್ ರಕ್ತಹೀನತೆ ಎಂದು ಕರೆಯಲಾಗುತ್ತದೆ. ಆಯಾಸದ ಜೊತೆಗೆ ಉಸಿರಾಟದ ತೊಂದರೆ, ಅಜೀರ್ಣ, ಹೆದರಿಕೆ, ದೃಷ್ಟಿ ಸಮಸ್ಯೆಗಳು, ಮುಂತಾದ ರೋಗಲಕ್ಷಣಗಳನ್ನು ಉಂಟುಮಾಡಬಹುದು.

ವಿಟಮಿನ್ ಬಿ12 ಕೊರತೆಯನ್ನು ಈ ರೀತಿಯಲ್ಲಿ ನಿವಾರಿಸಬಹುದು:

ವಿಟಮಿನ್ ಬಿ 12 ಪೋಷಕಾಂಶವು ಮಾಂಸ, ಮೀನು, ಚೀಸ್ ಮೊಟ್ಟೆ ಮತ್ತು ಬೆಣ್ಣೆಯಲ್ಲಿ ಹೇರಳವಾಗಿ ಕಂಡುಬರುತ್ತದೆ. ಅಲ್ಲದೆ ಅಣಬೆ, ಆಲೂಗಡ್ಡೆ, ಮತ್ತು ಬೀಟ್ರೂಟ್ ಸೇವಿಸುವ ಮೂಲಕ ವಿಟಮಿನ್ ಬಿ 12 ಕೊರತೆಯನ್ನು ನೀಗಿಸಬಹುದು. ಆರೋಗ್ಯ ತಜ್ಞರ ಪ್ರಕಾರ ಈ ಆಹಾರಗಳು ಸಾಕಷ್ಟು ಪ್ರಮಾಣದಲ್ಲಿ ಮಿಟಮಿನ್ ಬಿ12 ನ್ನು ಒದಗಿಸುವುದಿಲ್ಲ. ಆದ್ದರಿಂದ ಈ ಕೊರತೆ ಕಂಡು ಬಂದಾಗ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಮುಖ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು