AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Health: ವಾಯುಮಾಲಿನ್ಯ ಹೃದಯಕ್ಕೂ ಅಪಾಯಕಾರಿ; ಹೃದಯದ ಆರೋಗ್ಯವನ್ನು ಹೀಗೆ ಕಾಪಾಡಿ

ವಾಯುಮಾಲಿನ್ಯದಿಂದ ಮಾನವನ ಜೀವ ಅನೇಕ ರೀತಿಯಲ್ಲಿ ಹಾನಿಗೊಳಗಾಗುತ್ತಿದೆ. ವಾಹನಗಳ ವಿಷಕಾರಿ ಹೊಗೆಯು ಶ್ವಾಸಕೋಶದ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಹೃದಯಕ್ಕೂ ಅಪಾಯಕಾರಿಯಾಗಿದೆ.

Heart Health: ವಾಯುಮಾಲಿನ್ಯ ಹೃದಯಕ್ಕೂ ಅಪಾಯಕಾರಿ; ಹೃದಯದ ಆರೋಗ್ಯವನ್ನು ಹೀಗೆ ಕಾಪಾಡಿ
ವಾಯುಮಾಲಿನ್ಯ ಹೃದಯಕ್ಕೂ ಅಪಾಯಕಾರಿImage Credit source: Freepik
TV9 Web
| Updated By: Rakesh Nayak Manchi|

Updated on:Oct 17, 2022 | 7:00 PM

Share

ಬದಲಾಗುತ್ತಿರುವ ವಾತಾವರಣದಿಂದ ಮಳೆಯೊಂದಿಗೆ ಚಳಿಯೂ ಆರಂಭವಾಗಿದೆ. ಇದರೊಂದಿಗೆ ವಾಯು ಮಾಲಿನ್ಯವೂ ಹೆಚ್ಚಾಗತೊಡಗಿದೆ. ಹವಾಮಾನವು ತಣ್ಣಗಾಗುತ್ತಿದ್ದಂತೆ ಮಂಜು, ಹೊಗೆ, ವಾಹನಗಳ ಹೊಗೆ ಹೆಚ್ಚಾಗುತ್ತದೆ. ಈ ಹೊಗೆ ನಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಹೊಗೆಯು ನಮ್ಮ ಶ್ವಾಸಕೋಶದ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ ಶ್ವಾಸಕೋಶಕ್ಕೆ ಮಾತ್ರವಲ್ಲ ನಮ್ಮ ಹೃದಯಕ್ಕೂ ತುಂಬಾ ಅಪಾಯಕಾರಿ ಎಂಬುದು ನಿಮಗೆ ತಿಳಿದಿದೆಯೇ? ಹೊಗೆಯು ನಮ್ಮ ಹೃದಯದ ಆರೋಗ್ಯಕ್ಕೆ ಅನೇಕ ಅಪಾಯಗಳನ್ನು ಉಂಟುಮಾಡಬಹುದು. ಇಂತಹ ಸ್ಥಿತಿಯಲ್ಲಿ ಹೃದಯದ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬುದು ಇಲ್ಲಿದೆ ನೋಡಿ.

ಗಮನಾರ್ಹವಾಗಿ ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫರ್ಮೇಷನ್ ಪ್ರಕಾರ, ವಾಯು ಮಾಲಿನ್ಯಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಹೃದಯಾಘಾತ ಮತ್ತು ಇತರ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸಬಹುದು. ಕಳಪೆ ಗಾಳಿಯ ಗುಣಮಟ್ಟವನ್ನು ಉಸಿರಾಡಿದಾಗ ಗಾಳಿಯಲ್ಲಿರುವ ಮಾಲಿನ್ಯಕಾರಕಗಳು ನಮ್ಮ ಶ್ವಾಸಕೋಶ ಮತ್ತು ಹೃದಯಕ್ಕೆ ಸೇರಿಕೊಳ್ಳುತ್ತವೆ. ಇದರಿಂದ ಹೃದಯ ಸಂಬಂಧಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಗಾಳಿಯಲ್ಲಿರುವ ಮಾಲಿನ್ಯಕಾರಕಗಳು ನಮ್ಮ ದೇಹವನ್ನು ಪ್ರವೇಶಿಸಿದಾಗ ರಕ್ತವು ಮುಕ್ತವಾಗಿ ಹರಿಯಲು ಹೆಚ್ಚು ಕಷ್ಟಕರವಾಗುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಗೆ ಹೆಚ್ಚಿನ ಅವಕಾಶ ನೀಡಬಹುದು. ದೇಹದ ಇತರ ಭಾಗಗಳನ್ನು ತಲುಪಲು ಹೃದಯವು ರಕ್ತವನ್ನು ವೇಗವಾಗಿ ಪಂಪ್ ಮಾಡುವುದರಿಂದ ರಕ್ತದೊತ್ತಡವು ಹೆಚ್ಚಾಗಿ ಹೃದಯ ವೈಫಲ್ಯವೂ ಸಂಭವಿಸಬಹುದು. ಅಷ್ಟೇ ಅಲ್ಲದೆ ಈಗಾಗಲೇ ಇತರೆ ಹೃದಯ ಸಮಸ್ಯೆ ಎದುರಿಸುತ್ತಿರುವವರು ಹೃದಯಾಘಾತಕ್ಕೂ ಒಳಗಾಗಬಹುದು.

ನಮ್ಮ ದೇಹದಲ್ಲಿ ವಾಯು ಮಾಲಿನ್ಯದಿಂದ ಉಂಟಾಗುವ ಹಾನಿಯನ್ನು ನಿಭಾಯಿಸಲು ಸಮತೋಲಿತ ಆಹಾರವನ್ನು ಆಯ್ಕೆ ಮಾಡುವುದು ಸಹಾಯಕವಾಗಿದೆ. ಸಮತೋಲಿತ ಆಹಾರವು ಸಾಕಷ್ಟು ಅಗತ್ಯವಾದ ಜೀವಸತ್ವಗಳು ಮತ್ತು ಪೋಷಕಾಂಶಗಳನ್ನು ಹೊಂದಿರುತ್ತದೆ. ಇದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ನಿಮ್ಮ ಜೀವನಶೈಲಿಯಲ್ಲಿ ನೀವು ನಿಯಮಿತ ವ್ಯಾಯಾಮವನ್ನು ಸೇರಿಸಿಕೊಳ್ಳಬಹುದು.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 am, Mon, 17 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ