AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮೆಣಸಿನ ಪುಡಿ ಸೇವನೆಯಿಂದ ಆಗುವ ಅನಾನುಕೂಲಗಳು

ಕೆಲವರಿಗೆ ಕೆಂಪು ಮೆಣಸಿನಕಾಯಿ ಪುಡಿಯನ್ನು ಹೆಚ್ಚು ತಿನ್ನುವ ಅಭ್ಯಾಸವಿರುತ್ತದೆ. ಕಟುವಾದ ಈ ಅಭ್ಯಾಸವು ದೇಹಕ್ಕೆ ಬಹಳಷ್ಟು ಹಾನಿಯನ್ನುಂಟುಮಾಡುತ್ತದೆ ಎಂಬುದನ್ನು ನೆನಪಿನಲ್ಲಿಡಿ.

Health Tips: ಮೆಣಸಿನ ಪುಡಿ ಸೇವನೆಯಿಂದ ಆಗುವ ಅನಾನುಕೂಲಗಳು
ಮೆಣಸಿನ ಪುಡಿ ಸೇವನೆಯಿಂದ ಆಗುವ ಅನಾನುಕೂಲಗಳು
TV9 Web
| Edited By: Rakesh Nayak Manchi|

Updated on: Oct 01, 2022 | 6:14 PM

Share

ಭಾರತವನ್ನು ಮಸಾಲೆಗಳ ದೇಶ ಎಂದೂ ಕರೆಯುತ್ತಾರೆ. ಏಕೆಂದರೆ ಅನಾದಿ ಕಾಲದಿಂದಲೂ ಈ ದೇಶವು ಪ್ರಪಂಚಕ್ಕೆ ಮಸಾಲೆಗಳನ್ನು ಆಕರ್ಷಿಸುತ್ತಿದೆ. ಅತಿಯಾದರೆ ಅಮೃತವೂ ವಿಷ ಎಂಬಂತೆ ಖಾರದ ಪುಡಿಯನ್ನು ಹೆಚ್ಚು ಸೇವಿಸುವುದರಿಂದಲೂ ಆರೋಗ್ಯಕ್ಕೆ ಹಾನಿಕಾರಕ ಎಂಬುದನ್ನು ನೆನಪಿನಲ್ಲಿಡಬೇಕು. ಅದಾಗ್ಯೂ ಕೆಲವರಿಗೆ ಕೆಂಪು ಮೆಣಸಿನಕಾಯಿ ಪುಡಿ(Red Chilli Powder) ಯನ್ನು ಹೆಚ್ಚು ತಿನ್ನುವ ಅಭ್ಯಾಸವಿರುತ್ತದೆ. ಪದಾರ್ಥಕ್ಕೆ ಖಾರ ಕಡಿಮೆಯಾಗಿದೆ ನಾಳೆಯಿಂದ ಹೆಚ್ಚು ಖಾರ ಹಾಕಿ ಎಂದು ಖಾರ ಪ್ರಿಯರು ಸೂಚನೆಯನ್ನೂ ನೀಡುವುದುಂಟು. ಕಟುವಾದ ಈ ಅಭ್ಯಾಸವು ದೇಹಕ್ಕೆ ಬಹಳಷ್ಟು ಹಾನಿಯನ್ನುಂಟುಮಾಡುತ್ತದೆ. ಅಧಿಕ ಖಾರ ಸೇವನೆಯಿಂದ ದೇಹದ ಮೇಲಾಗುವ ಅನಾನುಕೂಲಗಳು ಏನೇನು? ಈ ಬಗ್ಗೆ ತಿಳಿದುಕೊಳ್ಳೋಣ.

ಕೆಂಪು ಮೆಣಸಿನ ಪುಡಿಯ ಅನಾನುಕೂಲಗಳು

ಬಹಳ ಜನಪ್ರಿಯವಾದ ಮಸಾಲೆಯಾಗಿರುವ ಕೆಂಪು ಮೆಣಸಿನಕಾಯಿ ಪುಡಿಯನ್ನು ಯಾವುದೇ ಪಾಕವಿಧಾನದಲ್ಲಿ ಬೆರೆಸಿದರೆ ಅದರ ರುಚಿ ಹೆಚ್ಚಾಗುತ್ತದೆ. ದಾಲ್ ಸೇರಿದಂತೆ ಅನೇಕ ಭಕ್ಷ್ಯಗಳಲ್ಲಿ ಅದಿಲ್ಲದಿದ್ದರೆ ಪದಾರ್ಥ ಅಪೂರ್ಣವೆಂದು ತೋರುತ್ತದೆ. ಆದರೆ ಪುಡಿಯನ್ನು ಹೆಚ್ಚು ಬಳಸಿದರೂ ಅಥವಾ ಮಸಾಲೆಯನ್ನು ಅತಿಯಾಗಿ ಸೇವಿಸಿದರೆ ಅನೇಕ ರೋಗಗಳು ಎದುರಾಗಬಹುದು.

ಅತಿಸಾರ: ಕೆಂಪು ಮೆಣಸಿನಕಾಯಿಯನ್ನು ಹೆಚ್ಚಾಗಿ ತಿನ್ನುವುದರಿಂದ ಅತಿಸಾರದ ಆಕ್ರಮಣಕ್ಕೆ ತುತ್ತಾಗಬೇಕಾಗುತ್ತದೆ. ಇದರ ಅತಿಯಾದ ಸೇವನೆ ಹೊಟ್ಟೆಗೆ ಒಳ್ಳೆಯದಲ್ಲ. ಇದನ್ನು ಸೀಮಿತ ಪ್ರಮಾಣದಲ್ಲಿ ತಿನ್ನಬೇಕು. ಸಾಮಾನ್ಯವಾಗಿ ಮಸಾಲೆಗಳನ್ನು ಡೀಪ್ ಫ್ರೈ ಮಾಡಿದಾಗ ಅದು ಹೊಟ್ಟೆಯ ಒಳಭಾಗಕ್ಕೆ ಅಂಟಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಆಮ್ಲೀಯತೆ: ಕೆಂಪು ಮೆಣಸಿನಕಾಯಿಗಳು ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಉಂಟುಮಾಡಬಹುದು. ಇದು ಹೊಟ್ಟೆಯಲ್ಲಿ ಆಮ್ಲೀಯತೆಯನ್ನು ಉಂಟುಮಾಡಬಹುದು. ಹಾಗೆಯೇ ಕೆಲವರು ಎದೆಯುರಿ ಎಂದು ಆಗಾಗ್ಗೆ ಹೇಳುವುದುಂಟು. ಅಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತಕ್ಷಣ ಕೆಂಪು ಮೆಣಸಿನಕಾಯಿಯನ್ನು ಸೇವಿಸುವುದನ್ನು ನಿಲ್ಲಿಸಿ.

ಹೊಟ್ಟೆಯ ಹುಣ್ಣು: ಸಾಮಾನ್ಯವಾಗಿ ವೈದ್ಯರು ಕೆಂಪು ಮೆಣಸಿನಕಾಯಿಯನ್ನು ಕಡಿಮೆ ತಿನ್ನಲು ಶಿಫಾರಸು ಮಾಡುತ್ತಾರೆ. ಏಕೆಂದರೆ ಹೊಟ್ಟೆಯಲ್ಲಿ ಹುಣ್ಣು ಉಂಟಾಗುತ್ತದೆ ಎಂಬ ಭಯ ಯಾವಾಗಲೂ ಇರುತ್ತದೆ. ಅದರಲ್ಲೂ ಮೆಣಸಿನ ಪುಡಿ ತುಂಬಾ ಅಪಾಯಕಾರಿ. ಇದರ ಕಣಗಳು ಹೊಟ್ಟೆ ಮತ್ತು ಕರುಳಿಗೆ ಅಂಟಿಕೊಳ್ಳುತ್ತವೆ. ಕ್ರಮೇಣ ಇದು ಹುಣ್ಣುಗಳನ್ನು ಉಂಟುಮಾಡುತ್ತವೆ.

(ಸೂಚನೆ: ಈ ಲೇಖನದಲ್ಲಿನ ಮಾಹಿತಿ ಸಾಮಾನ್ಯ ತಿಳಿವಳಿಕೆಗಾಗಿ ಮಾತ್ರ)

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​