AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆನಪಿನ ಶಕ್ತಿ ಕಡಿಮೆಯಾಗುತ್ತಿದೆಯಾ?; ಮೆದುಳಿನ ಆರೋಗ್ಯ ಹೆಚ್ಚಿಸುವ 5 ಆಹಾರಗಳಿವು

ವಯಸ್ಸಾದಂತೆ ನಮ್ಮ ಮೆದುಳಿನ ಕಾರ್ಯಕ್ಷಮತೆಯೂ ಕಡಿಮೆಯಾಗುತ್ತದೆ. ಹೀಗಾಗಿ, 60ಕ್ಕೆ ಅರಳುಮರಳು ಎಂಬ ಗಾದೆ ಮಾತು ಹುಟ್ಟಿಕೊಂಡಿತು. ವಯಸ್ಸಾಗುತ್ತಿದ್ದಂತೆ ನೆನಪಿನ ಶಕ್ತಿ ಮಾಸುತ್ತಾ ಬರುತ್ತದೆ. ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುವ 5 ನಟ್ಸ್​ಗಳು ಇಲ್ಲಿವೆ.

ನೆನಪಿನ ಶಕ್ತಿ ಕಡಿಮೆಯಾಗುತ್ತಿದೆಯಾ?; ಮೆದುಳಿನ ಆರೋಗ್ಯ ಹೆಚ್ಚಿಸುವ 5 ಆಹಾರಗಳಿವು
ನಟ್ಸ್
ಸುಷ್ಮಾ ಚಕ್ರೆ
|

Updated on: Feb 03, 2024 | 4:58 PM

Share

ಮೊದಲೆಲ್ಲ 60 ವರ್ಷವಾಗುತ್ತಿದ್ದಂತೆ ಮುಪ್ಪು ಆವರಿಸಿತೆಂದು ಪರಿಗಣಿಸಲಾಗುತ್ತಿತ್ತು. ಆದರೆ, ಈಗ 50 ವರ್ಷದ ವೇಳೆಗಾಗಲೇ ಮುಪ್ಪಿನ ಲಕ್ಷಣಗಳು ಗೋಚರವಾಗಲಾರಂಭಿಸುತ್ತದೆ. ಅದರಲ್ಲಿ ನೆನಪಿನ ಶಕ್ತಿಯೂ ಒಂದು. 50 ವರ್ಷವಾಗುತ್ತಿದ್ದಂತೆ ನೆನಪಿನ ಶಕ್ತಿ (Memory Power) ಕಡಿಮೆಯಾಗುತ್ತದೆ. ಮೆದುಳಿನ ಆರೋಗ್ಯ ಚೆನ್ನಾಗಿರಬೇಕೆಂದರೆ ನಾವು ತಿನ್ನುವ ಆಹಾರವೂ ಅತಿ ಮುಖ್ಯ. ಜ್ಞಾಪಕಶಕ್ತಿಯನ್ನು ಉತ್ತೇಜಿಸುವ, ಮೆದುಳಿನ ಆರೋಗ್ಯ (Health Tips) ಹೆಚ್ಚಿಸುವ 5 ನಟ್ಸ್​ಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಮಗೆ ವಯಸ್ಸಾದಂತೆ ಮೆದುಳಿನ ಜೀವಕೋಶಗಳ ಚಟುವಟಿಕೆ ಕಡಿಮೆಯಾಗಲು ಪ್ರಾರಂಭಿಸುತ್ತವೆ. ಆದ್ದರಿಂದ 50 ವರ್ಷದ ನಂತರ ನಾವು ನೆನಪಿನ ಶಕ್ತಿಯನ್ನು ಕಳೆದುಕೊಳ್ಳತೊಡಗುತ್ತೇವೆ. ಈ ಸಮಯದಲ್ಲಿ ಆದಷ್ಟೂ ಮೆದುಳನ್ನು ಹೆಚ್ಚು ಸಕ್ರಿಯ ಮತ್ತು ಆರೋಗ್ಯಕರವಾಗಿಡಲು ಪ್ರಯತ್ನಿಸಬೇಕು. ನಟ್ಸ್​ ಆರೋಗ್ಯಕರ ತಿಂಡಿಗಳಾಗಿವೆ. ಇವು ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಉತ್ತಮ ಆಯ್ಕೆಯಾಗಿದೆ.

ಇದನ್ನೂ ಓದಿ: Bowel Cancer: ಕರುಳಿನ ಕ್ಯಾನ್ಸರ್ ಅಪಾಯ ತಡೆಯುವ 8 ಆಹಾರಗಳಿವು

ಬಾದಾಮಿ:

ಬಾದಾಮಿಯಲ್ಲಿ ರೈಬೋಫ್ಲಾವಿನ್ ಮತ್ತು ಮೆದುಳಿನ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುವ ಇತರ ಸಂಯುಕ್ತಗಳಿವೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ವಾಲ್​ನಟ್ಸ್:

ಸಂಶೋಧನೆಯ ಪ್ರಕಾರ, ವಾಲ್​ನಟ್ಸ್​ ವಯಸ್ಸಾಗುವಿಕೆಯನ್ನು ನಿಧಾನಗೊಳಿಸುತ್ತದೆ. ಹಾಗೇ, ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಕಡಿಮೆ ಮಾಡುತ್ತದೆ.

ಮೆಕಾಡೆಮಿಯಾ:

ಇದರಲ್ಲಿರುವ ಖನಿಜಗಳ ಹೆಚ್ಚಿನ ಅಂಶವು ಮೆದುಳಿನ ಉತ್ತಮ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ. ನಮಗೆ ವಯಸ್ಸಾದಾಗಲೂ ಆರೋಗ್ಯಕರ ಜ್ಞಾನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Skin Care: ಮುಖದಲ್ಲಿ ಸುಕ್ಕು ಮೂಡುವುದನ್ನು ತಡೆಯಬೇಕಾ?; ಈ ಆಹಾರ ಸೇವಿಸಿ

ಪಿಸ್ತಾ:

ಪಿಸ್ತಾ ಮೆದುಳಿನ ಶಕ್ತಿ ಮತ್ತು ಅರಿವಿನ ಕಾರ್ಯವನ್ನು ಹೆಚ್ಚಿಸುವ ಅತ್ಯುತ್ತಮ ಆಹಾರಗಳಲ್ಲಿ ಒಂದಾಗಿದೆ.

ಗೋಡಂಬಿ:

ಗೋಡಂಬಿಯಲ್ಲಿರುವ ಮೆಗ್ನೀಸಿಯಸ್ ಮತ್ತು ಸತುವು ನರಪ್ರೇಕ್ಷಕಗಳನ್ನು ಮತ್ತು ಮೆದುಳಿನೊಂದಿಗೆ ಸಂವಹನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ