AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆನಪಿನ ಶಕ್ತಿ ಕಡಿಮೆಯಾಗುತ್ತಿದೆಯಾ?; ಮೆದುಳಿನ ಆರೋಗ್ಯ ಹೆಚ್ಚಿಸುವ 5 ಆಹಾರಗಳಿವು

ವಯಸ್ಸಾದಂತೆ ನಮ್ಮ ಮೆದುಳಿನ ಕಾರ್ಯಕ್ಷಮತೆಯೂ ಕಡಿಮೆಯಾಗುತ್ತದೆ. ಹೀಗಾಗಿ, 60ಕ್ಕೆ ಅರಳುಮರಳು ಎಂಬ ಗಾದೆ ಮಾತು ಹುಟ್ಟಿಕೊಂಡಿತು. ವಯಸ್ಸಾಗುತ್ತಿದ್ದಂತೆ ನೆನಪಿನ ಶಕ್ತಿ ಮಾಸುತ್ತಾ ಬರುತ್ತದೆ. ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುವ 5 ನಟ್ಸ್​ಗಳು ಇಲ್ಲಿವೆ.

ನೆನಪಿನ ಶಕ್ತಿ ಕಡಿಮೆಯಾಗುತ್ತಿದೆಯಾ?; ಮೆದುಳಿನ ಆರೋಗ್ಯ ಹೆಚ್ಚಿಸುವ 5 ಆಹಾರಗಳಿವು
ನಟ್ಸ್
Follow us
ಸುಷ್ಮಾ ಚಕ್ರೆ
|

Updated on: Feb 03, 2024 | 4:58 PM

ಮೊದಲೆಲ್ಲ 60 ವರ್ಷವಾಗುತ್ತಿದ್ದಂತೆ ಮುಪ್ಪು ಆವರಿಸಿತೆಂದು ಪರಿಗಣಿಸಲಾಗುತ್ತಿತ್ತು. ಆದರೆ, ಈಗ 50 ವರ್ಷದ ವೇಳೆಗಾಗಲೇ ಮುಪ್ಪಿನ ಲಕ್ಷಣಗಳು ಗೋಚರವಾಗಲಾರಂಭಿಸುತ್ತದೆ. ಅದರಲ್ಲಿ ನೆನಪಿನ ಶಕ್ತಿಯೂ ಒಂದು. 50 ವರ್ಷವಾಗುತ್ತಿದ್ದಂತೆ ನೆನಪಿನ ಶಕ್ತಿ (Memory Power) ಕಡಿಮೆಯಾಗುತ್ತದೆ. ಮೆದುಳಿನ ಆರೋಗ್ಯ ಚೆನ್ನಾಗಿರಬೇಕೆಂದರೆ ನಾವು ತಿನ್ನುವ ಆಹಾರವೂ ಅತಿ ಮುಖ್ಯ. ಜ್ಞಾಪಕಶಕ್ತಿಯನ್ನು ಉತ್ತೇಜಿಸುವ, ಮೆದುಳಿನ ಆರೋಗ್ಯ (Health Tips) ಹೆಚ್ಚಿಸುವ 5 ನಟ್ಸ್​ಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಮಗೆ ವಯಸ್ಸಾದಂತೆ ಮೆದುಳಿನ ಜೀವಕೋಶಗಳ ಚಟುವಟಿಕೆ ಕಡಿಮೆಯಾಗಲು ಪ್ರಾರಂಭಿಸುತ್ತವೆ. ಆದ್ದರಿಂದ 50 ವರ್ಷದ ನಂತರ ನಾವು ನೆನಪಿನ ಶಕ್ತಿಯನ್ನು ಕಳೆದುಕೊಳ್ಳತೊಡಗುತ್ತೇವೆ. ಈ ಸಮಯದಲ್ಲಿ ಆದಷ್ಟೂ ಮೆದುಳನ್ನು ಹೆಚ್ಚು ಸಕ್ರಿಯ ಮತ್ತು ಆರೋಗ್ಯಕರವಾಗಿಡಲು ಪ್ರಯತ್ನಿಸಬೇಕು. ನಟ್ಸ್​ ಆರೋಗ್ಯಕರ ತಿಂಡಿಗಳಾಗಿವೆ. ಇವು ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಉತ್ತಮ ಆಯ್ಕೆಯಾಗಿದೆ.

ಇದನ್ನೂ ಓದಿ: Bowel Cancer: ಕರುಳಿನ ಕ್ಯಾನ್ಸರ್ ಅಪಾಯ ತಡೆಯುವ 8 ಆಹಾರಗಳಿವು

ಬಾದಾಮಿ:

ಬಾದಾಮಿಯಲ್ಲಿ ರೈಬೋಫ್ಲಾವಿನ್ ಮತ್ತು ಮೆದುಳಿನ ಕೋಶಗಳ ಬೆಳವಣಿಗೆಗೆ ಸಹಾಯ ಮಾಡುವ ಇತರ ಸಂಯುಕ್ತಗಳಿವೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ವಾಲ್​ನಟ್ಸ್:

ಸಂಶೋಧನೆಯ ಪ್ರಕಾರ, ವಾಲ್​ನಟ್ಸ್​ ವಯಸ್ಸಾಗುವಿಕೆಯನ್ನು ನಿಧಾನಗೊಳಿಸುತ್ತದೆ. ಹಾಗೇ, ನ್ಯೂರೋ ಡಿಜೆನೆರೆಟಿವ್ ಕಾಯಿಲೆಗಳನ್ನು ಅಭಿವೃದ್ಧಿಪಡಿಸುವ ಅಪಾಯವನ್ನು ಕಡಿಮೆ ಮಾಡುತ್ತದೆ.

ಮೆಕಾಡೆಮಿಯಾ:

ಇದರಲ್ಲಿರುವ ಖನಿಜಗಳ ಹೆಚ್ಚಿನ ಅಂಶವು ಮೆದುಳಿನ ಉತ್ತಮ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತದೆ. ನಮಗೆ ವಯಸ್ಸಾದಾಗಲೂ ಆರೋಗ್ಯಕರ ಜ್ಞಾನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Skin Care: ಮುಖದಲ್ಲಿ ಸುಕ್ಕು ಮೂಡುವುದನ್ನು ತಡೆಯಬೇಕಾ?; ಈ ಆಹಾರ ಸೇವಿಸಿ

ಪಿಸ್ತಾ:

ಪಿಸ್ತಾ ಮೆದುಳಿನ ಶಕ್ತಿ ಮತ್ತು ಅರಿವಿನ ಕಾರ್ಯವನ್ನು ಹೆಚ್ಚಿಸುವ ಅತ್ಯುತ್ತಮ ಆಹಾರಗಳಲ್ಲಿ ಒಂದಾಗಿದೆ.

ಗೋಡಂಬಿ:

ಗೋಡಂಬಿಯಲ್ಲಿರುವ ಮೆಗ್ನೀಸಿಯಸ್ ಮತ್ತು ಸತುವು ನರಪ್ರೇಕ್ಷಕಗಳನ್ನು ಮತ್ತು ಮೆದುಳಿನೊಂದಿಗೆ ಸಂವಹನವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ