AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 9 ಗಂಟೆ ಮೇಲೆ ಊಟ ಮಾಡುತ್ತೀರಾ?; ಈ ಅಪಾಯದ ಬಗ್ಗೆ ಎಚ್ಚರವಿರಲಿ

ತಡರಾತ್ರಿಯ ಊಟವು ಮಹಿಳೆಯರಲ್ಲಿ ಅಪಧಮನಿಕಾಠಿಣ್ಯ, ಬೊಜ್ಜು, ಅಸಹಜ ಲಿಪಿಡ್ ಪ್ರೊಫೈಲ್‌ಗಳು ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗೆ ಕಾರಣವಾಗುತ್ತದೆ ಎಂದು ಅಧ್ಯಯನ ತಿಳಿಸಿದೆ.

ರಾತ್ರಿ 9 ಗಂಟೆ ಮೇಲೆ ಊಟ ಮಾಡುತ್ತೀರಾ?; ಈ ಅಪಾಯದ ಬಗ್ಗೆ ಎಚ್ಚರವಿರಲಿ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Dec 19, 2023 | 5:55 PM

Share

ಹೊಸ ಹೊಸ ರೀತಿಯ ಉದ್ಯೋಗ, ಜೀವನಶೈಲಿಯಿಂದಾಗಿ ನಮ್ಮ ಊಟ, ನಿದ್ರೆಯ ಸಮಯವೂ ಬದಲಾಗುತ್ತಿದೆ. ನಮ್ಮ ಊಟ ಹಾಗೂ ನಿದ್ರೆ ಕೂಡ ಆರೋಗ್ಯದ ವಿಷಯದಲ್ಲಿ ಬಹಳ ಮುಖ್ಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿರಲಿ. ಇತ್ತೀಚಿನ ಅಧ್ಯಯನವೊಂದು ನಮ್ಮ ಊಟದ ಸಮಯವು ಹೃದಯ ರಕ್ತನಾಳದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಸಿದೆ. ನೇಚರ್ ಕಮ್ಯುನಿಕೇಷನ್ಸ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ರಾತ್ರಿ 9 ಗಂಟೆಯ ನಂತರ ಊಟ ಮಾಡುವವರಿಗೆ ಸ್ಟ್ರೋಕ್ ಅಥವಾ ಪಾರ್ಶ್ವವಾಯು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ನಮ್ಮ ದೇಹವು ಸಿರ್ಕಾಡಿಯನ್ ಚಕ್ರಗಳನ್ನು ಅನುಸರಿಸುತ್ತದೆ. ಇದು ನಮ್ಮ ನಿದ್ರೆಯ ಮತ್ತು ಊಟ ಮತ್ತಿತರ ಎಲ್ಲ ದಿನನಿತ್ಯದ ಕಾರ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ಹೃದಯ ಮತ್ತು ರಕ್ತನಾಳಗಳ ಕಾರ್ಯಗಳನ್ನು ಕೂಡ ನಿಯಂತ್ರಿಸುತ್ತದೆ. ಆಹಾರ ಸೇವನೆ ಮತ್ತು ಉಪವಾಸದ ಸಮಯಗಳಲ್ಲಿನ ಬದಲಾವಣೆಗಳು ಮತ್ತು ಹೃದಯರಕ್ತನಾಳದ ಕಾಯಿಲೆಯ (CVD) ಸಂಭವದ ನಡುವಿನ ಸಂಬಂಧವನ್ನು ಅಧ್ಯಯನವು ತಿಳಿಸಿದೆ. ಜಾಗತಿಕ ರೋಗ ಮತ್ತು ಸಾವಿಗೆ CVD ಪ್ರಮುಖ ಕಾರಣವಾಗಿರುವುದರಿಂದ, ದೋಷಯುಕ್ತ ಆಹಾರ ಪದ್ಧತಿಗಳು ಪಾರ್ಶ್ವವಾಯುಗೆ ಕಾರಣವಾಗಲಿದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಕಾರಣ

ನಮ್ಮ ಚಯಾಪಚಯ ಮತ್ತು ಹೃದಯರಕ್ತನಾಳದ ಆರೋಗ್ಯವನ್ನು ಕಾಪಾಡಿಕೊಳ್ಳಲು ಊಟದ ಪ್ರಾಮುಖ್ಯತೆಯನ್ನು ಸಂಶೋಧನೆ ಎತ್ತಿ ತೋರಿಸುತ್ತದೆ. ತಡರಾತ್ರಿಯ ಊಟವು ಮಹಿಳೆಯರಲ್ಲಿ ಅಪಧಮನಿಕಾಠಿಣ್ಯ, ಬೊಜ್ಜು, ಅಸಹಜ ಲಿಪಿಡ್ ಪ್ರೊಫೈಲ್‌ಗಳು ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗೆ ಕಾರಣವಾಗುತ್ತದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಸ್ಟ್ರೋಕ್​ ಆಗಿದೆ ಎಂಬುದರ ಲಕ್ಷಣಗಳಿವು

ರಾತ್ರಿ 9 ಗಂಟೆಯ ನಂತರ ಆಹಾರ ಸೇವಿಸುವುದರಿಂದ ಶೇ. 28ರಷ್ಟು ಪಾರ್ಶ್ವವಾಯುವಿನ ಅಪಾಯ ಉಂಟಾಗುತ್ತದೆ ಎಂದು ಅಧ್ಯಯನ ತಿಳಿಸಿದೆ. ಈ ಅಧ್ಯಯನವು ಊಟದ ಸಮಯ-ಹೃದಯನಾಳದ ಆರೋಗ್ಯಕ್ಕೆ ಇರುವ ಸಂಬಂಧದ ಮೇಲೆ ಬೆಳಕು ಚೆಲ್ಲುತ್ತದೆ. ರಾತ್ರಿ ಪಾಳಿಯ ಕೆಲಸ ಮತ್ತು ಇತರ ಜೀವನಶೈಲಿಯ ಅಂಶಗಳಿಂದ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತಿದೆ. ಊಟದ ಸಮಯ, ಸಿರ್ಕಾಡಿಯನ್ ಲಯಗಳು ಮತ್ತು ಒಟ್ಟಾರೆ ಆರೋಗ್ಯದ ನಡುವಿನ ಸಂಕೀರ್ಣ ಸಂಬಂಧದ ಕುರಿತು ಹೆಚ್ಚಿನ ಸಂಶೋಧನೆಗೆ ಈ ಅಧ್ಯಯನವು ಒತ್ತಾಯಿಸಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ