AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡ ಉಂಟಾದಾಗ ಹೊಟ್ಟೆನೋವು ಹೆಚ್ಚಲು ಕಾರಣವೇನು?

Stress Effects: ಒತ್ತಡವನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ. ಇದು ದೊಡ್ಡ ಸಮಸ್ಯೆಯಲ್ಲದಿದ್ದರೂ ನಮ್ಮೆಲ್ಲ ಆರೋಗ್ಯ ಸಮಸ್ಯೆಯ ಮೇಲೆ ಪರಿಣಾಮ ಬೀರುತ್ತದೆ. ಒತ್ತಡ ವಿವಿಧ ರೀತಿಯ ಅಹಿತಕರ ಲಕ್ಷಣಗಳಿಗೆ ಕಾರಣವಾಗುತ್ತದೆ. ಒತ್ತಡವು ನಿಮ್ಮ ಹೊಟ್ಟೆಯ ನೋವನ್ನು ಹೆಚ್ಚಿಸಲು ಕಾರಣವೇನೆಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಒತ್ತಡ ಉಂಟಾದಾಗ ಹೊಟ್ಟೆನೋವು ಹೆಚ್ಚಲು ಕಾರಣವೇನು?
ಹೊಟ್ಟೆ ನೋವು
ಸುಷ್ಮಾ ಚಕ್ರೆ
|

Updated on: Jan 11, 2024 | 2:06 PM

Share

ಪರೀಕ್ಷೆಗೆ 1 ತಿಂಗಳಿರುವಾಗಲೇ ಕೆಲವರಲ್ಲಿ ಒತ್ತಡ ಹೆಚ್ಚಾಗುತ್ತದೆ. ಇನ್ನು ಕೆಲವರಿಗೆ ಸಣ್ಣಪುಟ್ಟ ವಿಷಯವೂ ಒತ್ತಡವನ್ನು ಉಂಟುಮಾಡುತ್ತದೆ. ಒತ್ತಡವನ್ನು ದೂರ ಇಡಬೇಕೆಂದು ಎಷ್ಟೇ ಪ್ರಯತ್ನಿಸಿದರೂ ಅದು ನಮ್ಮನ್ನು ಬಿಟ್ಟು ಹೋಗುವುದಿಲ್ಲ. ನಮಗೆ ತಿಳಿಯದೆ ನಮ್ಮ ಮೇಲೆ ಸವಾರಿ ಮಾಡುವ ಒತ್ತಡ ನಮ್ಮ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಒತ್ತಡದಿಂದ ಮಾನಸಿಕ ಆರೋಗ್ಯ ಮಾತ್ರವಲ್ಲದೆ ದೈಹಿಕವಾಗಿಯೂ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಒತ್ತಡವು ಹೊಟ್ಟೆ ನೋವನ್ನು ಉಂಟುಮಾಡಬಹುದು, ಹೊಟ್ಟೆಯಲ್ಲಿ ತಳಮಳ ಉಂಟುಮಾಡಬಹುದು.

ಒತ್ತಡ ವಿವಿಧ ರೀತಿಯ ಅಹಿತಕರ ಲಕ್ಷಣಗಳಿಗೆ ಕಾರಣವಾಗುತ್ತದೆ. ಒತ್ತಡವು ನಿಮ್ಮ ಹೊಟ್ಟೆಯ ನೋವನ್ನು ಹೆಚ್ಚಿಸಲು ಕಾರಣವೇನೆಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಹೆಚ್ಚಿದ ಕಾರ್ಟಿಸೋಲ್ ಮಟ್ಟ:

ಒತ್ತಡವು ಕಾರ್ಟಿಸೋಲ್ ಬಿಡುಗಡೆಯನ್ನು ಪ್ರಚೋದಿಸುತ್ತದೆ. ಇದನ್ನು ಸಾಮಾನ್ಯವಾಗಿ “ಒತ್ತಡದ ಹಾರ್ಮೋನ್” ಎಂದು ಕರೆಯಲಾಗುತ್ತದೆ. ಕಾರ್ಟಿಸೋಲ್‌ ಹೆಚ್ಚಾದರೆ ಜೀರ್ಣಕಾರಿ ಪ್ರಕ್ರಿಯೆಗಳ ಸೂಕ್ಷ್ಮ ಸಮತೋಲನವನ್ನು ಅಡ್ಡಿಪಡಿಸುತ್ತದೆ. ಇದು ಹೊಟ್ಟೆಯ ಆ್ಯಸಿಡ್ ಉತ್ಪಾದನೆಯನ್ನು ಹೆಚ್ಚಿಸಲು ಕಾರಣವಾಗುತ್ತದೆ. ಈ ಆಮ್ಲದ ಒಳಹರಿವು ಹೊಟ್ಟೆಯ ಒಳಪದರವನ್ನು ಕೆರಳಿಸಿ, ಅಸ್ವಸ್ಥತೆಯನ್ನು ಉಂಟುಮಾಡಬಹುದು. ಇದು ಹೊಟ್ಟೆ ನೋವಿನ ಹೆಚ್ಚಳಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ಮಾನಸಿಕ ಒತ್ತಡದಿಂದ ದೇಹದ ತೂಕ ಹೆಚ್ಚಾಗಲು ಕಾರಣವೇನು?

ಹೆಚ್ಚಿದ ಸ್ನಾಯು ಸೆಳೆತ:

ಒತ್ತಡವು ದೇಹದ ಹೋರಾಟ ಪ್ರತಿಕ್ರಿಯೆಯನ್ನು ಪ್ರಚೋದಿಸುತ್ತದೆ. ಇದು ಸ್ನಾಯುಗಳನ್ನು ಬಿಗಿಗೊಳಿಸುವುದಕ್ಕೆ ಕಾರಣವಾಗುತ್ತದೆ. ಈ ಹೆಚ್ಚಿದ ಸ್ನಾಯುವಿನ ಒತ್ತಡವು ಹೊಟ್ಟೆಯ ಸ್ನಾಯುಗಳಿಗೆ ವಿಸ್ತರಿಸುತ್ತದೆ. ಈ ಸ್ನಾಯುಗಳಲ್ಲಿನ ನಿರಂತರ ಒತ್ತಡವು ಹೊಟ್ಟೆ ನೋವಿಗೆ ಕಾರಣವಾಗುತ್ತದೆ. ಇದು ಒತ್ತಡ ಮತ್ತು ಹೊಟ್ಟೆ ನೋವಿನ ನಡುವೆ ನೇರ ಸಂಪರ್ಕವನ್ನು ಸೃಷ್ಟಿಸುತ್ತದೆ.

ರೋಗನಿರೋಧಕ ಶಕ್ತಿ ಕುಸಿತ:

ಒತ್ತಡವು ಪ್ರತಿರಕ್ಷಣಾ ವ್ಯವಸ್ಥೆಯನ್ನು ಕಡಿಮೆ ಮಾಡಬಹುದು. ನಮ್ಮ ದೇಹವು ಸೋಂಕುಗಳು ಮತ್ತು ಉರಿಯೂತಕ್ಕೆ ಹೆಚ್ಚು ಒಳಗಾಗುತ್ತದೆ. ದುರ್ಬಲ ಪ್ರತಿರಕ್ಷಣಾ ಪ್ರತಿಕ್ರಿಯೆಯು ಹಾನಿಕಾರಕ ಬ್ಯಾಕ್ಟೀರಿಯಾದ ಪ್ರಸರಣಕ್ಕೆ ಅಥವಾ ಜೀರ್ಣಕ್ರಿಯೆಯೆ ತೊಂದರೆಗೆ ಅವಕಾಶ ನೀಡುತ್ತದೆ. ಹೊಟ್ಟೆಯ ಒಳಪದರದಲ್ಲಿ ಉರಿಯೂತವು ಹೊಟ್ಟೆ ನೋವಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಒತ್ತಡ ಕಡಿಮೆ ಮಾಡಿ, ಮೆದುಳಿನ ಆರೋಗ್ಯ ಹೆಚ್ಚಿಸಲು ಈ 4 ಆಹಾರ ಸೇವಿಸಿ

ಜೀರ್ಣಕ್ರಿಯೆ ಕಡಿಮೆಯಾಗುವುದು:

ದೀರ್ಘಕಾಲದ ಒತ್ತಡವು ನೈಸರ್ಗಿಕ ಜೀರ್ಣಕಾರಿ ಪ್ರಕ್ರಿಯೆಗಳನ್ನು ನಿಧಾನಗೊಳಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ. ರಕ್ತದ ಹರಿವಿನಲ್ಲಿನ ಒತ್ತಡ ಪ್ರೇರಿತ ಬದಲಾವಣೆಗಳು ಜೀರ್ಣಕಾರಿ ಕಿಣ್ವಗಳ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಾಂಗವ್ಯೂಹದ ಮೂಲಕ ಆಹಾರದ ಚಲನೆಯನ್ನು ನಿಧಾನಗೊಳಿಸುತ್ತದೆ. ಈ ನಿಧಾನಗತಿಯ ಜೀರ್ಣಕ್ರಿಯೆಯು ಗ್ಯಾಸ್ ಶೇಖರಣೆ ಮತ್ತು ಉಬ್ಬುವಿಕೆಗೆ ಕಾರಣವಾಗುತ್ತದೆ. ಇದರಿಂದ ಹೊಟ್ಟೆ ನೋವು ಉಂಟಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್