Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಬದ್ಧತೆ ಸಮಸ್ಯೆ ನಿವಾರಣೆಗೆ ಈ ತರಕಾರಿಗಳಿಗೂ ನಿಮ್ಮ ಅಡುಗೆಯಲ್ಲಿ ಜಾಗವಿರಲಿ

ತರಕಾರಿಗಳು, ಹಣ್ಣುಗಳು, ಡ್ರೈಫ್ರೂಟ್ಸ್, ಓಟ್ಸ್ ಮತ್ತು ಬಾರ್ಲಿಯಲ್ಲಿ ನಾರಿನಂಶ ಇರುತ್ತದೆ. ಫೈಬರ್ ಅಂಶ ಕ್ಯಾನ್ಸರ್ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಫೈಬರ್ ಅಥವಾ ನಾರಿನಂಶ ತೂಕ ಇಳಿಸಲು ಸಹಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ, ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.

ಮಲಬದ್ಧತೆ ಸಮಸ್ಯೆ ನಿವಾರಣೆಗೆ ಈ ತರಕಾರಿಗಳಿಗೂ ನಿಮ್ಮ ಅಡುಗೆಯಲ್ಲಿ ಜಾಗವಿರಲಿ
ನಾರಿನಂಶ ಹೆಚ್ಚಾಗಿರುವ ಆಹಾರImage Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 26, 2023 | 7:40 PM

ದೇಹದಲ್ಲಿ ನಾರಿನಂಶ ಕಡಿಮೆಯಾದರೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ, ನಾರಿನಂಶ ಹೆಚ್ಚಾಗಿರುವ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಫೈಬರ್ ಅಥವಾ ನಾರಿನಂಶ ತೂಕ ಇಳಿಸಲು ಸಹಕಾರಿಯಾಗಿದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ, ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. ಹಾಗೇ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ತರಕಾರಿಗಳು, ಹಣ್ಣುಗಳು, ಡ್ರೈಫ್ರೂಟ್ಸ್, ಓಟ್ಸ್ ಮತ್ತು ಬಾರ್ಲಿಯಲ್ಲಿ ನಾರಿನಂಶ ಇರುತ್ತದೆ. ಫೈಬರ್ ಅಂಶ ಕ್ಯಾನ್ಸರ್ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ತರಕಾರಿಗಳು ನಮ್ಮ ದೇಹಕ್ಕೆ ಅತ್ಯಂತ ಒಳ್ಳೆಯದು. ಆದರೆ, ಕೆಲವು ತರಕಾರಿಗಳಲ್ಲಿ ಮಾತ್ರ ಫೈಬರ್ ಅಂಶ ಹೇರಳವಾಗಿದೆ. ಅಂತಹ ಕೆಲವು ತರಕಾರಿಗಳ ಪಟ್ಟಿ ಇಲ್ಲಿದೆ. ಇದನ್ನು ನಿಮ್ಮ ಅಡುಗೆ, ಸಲಾಡ್​ನಲ್ಲಿ ಸೇರಿಸಿಕೊಳ್ಳಲು ಮರೆಯಬೇಡಿ.

ಇದನ್ನೂ ಓದಿ: ತರಕಾರಿ ಹಸಿರಾಗಿ, ಫ್ರೆಶ್ ಆಗಿದೆ ಎಂದು ಮೋಸ ಹೋಗಬೇಡಿ; ಈ ವಿಡಿಯೋ ನೋಡಿ

ಹೂಕೋಸು: ಹೂಕೋಸು ಅನೇಕ ಪಾಕವಿಧಾನಗಳಲ್ಲಿ ಬಳಸಲಾಗುವ ಬಹುಮುಖ ತರಕಾರಿಯಾಗಿದೆ. ಕಾರ್ಬೋಹೈಡ್ರೇಟ್ ಸೇವನೆಯನ್ನು ಕಡಿಮೆ ಮಾಡಲು ಪ್ರಯತ್ನಿಸುವವರು ಹೂಕೋಸಿನ ಬಳಕೆ ಹೆಚ್ಚು ಮಾಡುತ್ತಾರೆ. ಇದು ಪೌಷ್ಠಿಕಾಂಶದ ಶಕ್ತಿ ಕೇಂದ್ರವಾಗಿದೆ. ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಫೋಲೇಟ್‌ನಿಂದ ತುಂಬಿದೆ. ಹೂಕೋಸು ಹೃದಯದ ಆರೋಗ್ಯಕ್ಕೆ ಒಳ್ಳೆಯದು.

ಕ್ಯಾರೆಟ್: ಕ್ಯಾರೆಟ್‌ಗಳು ಪ್ರತಿ ಕಪ್‌ಗೆ 3.6 ಗ್ರಾಂ ಫೈಬರ್ ಅನ್ನು ನೀಡುತ್ತವೆ. ಇದು ಹೆಚ್ಚಿನ ಫೈಬರ್ ಅಂಶವಿರುವ ತರಕಾರಿಯಾಗಿದೆ. ಕ್ಯಾರೆಟ್ ಕಣ್ಣಿನ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಕ್ಯಾರೆಟ್‌ನಲ್ಲಿರುವ ಕರಗುವ ಫೈಬರ್ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಗೆಣಸು: ಗೆಣಸಿನಲ್ಲಿ ಫೈಬರ್ ಅಂಶ ಯಥೇಚ್ಛವಾಗಿದೆ. ಗೆಣಸು ಹೆಚ್ಚಿನ ಫೈಬರ್ ಮತ್ತು ವಿಟಮಿನ್ ಎ ಮತ್ತು ಸಿ ಅಂಶವನ್ನು ಹೊಂದಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪಾಲಕ್: ಪಾಲಕ್ ಅನ್ನು ಸಲಾಡ್, ಚಟ್ನಿ, ಸ್ಮೂಥಿ ಹೀಗೆ ಯಾವ ರೂಪದಲ್ಲಿ ಬೇಕಾದರೂ ಸೇವಿಸಬಹುದು. ಪಾಲಕ್ ಸೊಪ್ಪು ಮೂಳೆಯ ಆರೋಗ್ಯ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಬೀಟಾ-ಕ್ಯಾರೋಟಿನ್‌ನಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ.

ಇದನ್ನೂ ಓದಿ: ದಿನಕ್ಕೆ ಐದಾರು ಎಸಳು ಪುದೀನಾ ಸೊಪ್ಪು ತಿಂದರೆ ಏನೇನೆಲ್ಲ ಆಗುತ್ತೆ ನೋಡಿ!

ಬ್ರೊಕೊಲಿ: ಬ್ರೊಕೊಲಿಯಲ್ಲಿ ಫೈಬರ್ ಅಂಶವಿದ್ದು, ಇದರ ಜೊತೆಗೆ ಆಂಟಿಆಕ್ಸಿಡೆಂಟ್ ವಿಟಮಿನ್‌ಗಳಾದ ಎ ಮತ್ತು ಸಿ, ಖನಿಜ, ಕ್ಯಾಲ್ಸಿಯಂ ಕೂಡ ಅಧಿಕವಾಗಿದೆ.

ಬಟಾಣಿ: ಬಟಾಣಿ ನೋಡಲು ಚಿಕ್ಕದಾದರೂ ಅದರ ಕೀರ್ತಿ ದೊಡ್ಡದು. ಪ್ರತಿ ಕಪ್‌ಗೆ 7 ಗ್ರಾಂ ಫೈಬರ್‌ ಅನ್ನು ಇದು ಹೊಂದಿರುತ್ತದೆ. ದೇಹಕ್ಕೆ ಖನಿಜ ಮತ್ತು ಫೈಬರ್ ಅಂಶವನ್ನು ಬಟಾಣಿ ಒದಗಿಸುತ್ತದೆ.

ಇದರ ಜೊತೆಗೆ ಇಡೀ ಧಾನ್ಯಗಳು, ಪಾಪ್​ಕಾರ್ನ್, ಅವಕಾಡೊ, ಬೆರಿ ಹಣ್ಣುಗಳು, ಸೇಬುಹಣ್ಣು, ಹರಿವೆ, ಬಸಳೆ, ಪಾಲಕ್ ಸೊಪ್ಪುಗಳನ್ನು ಹೆಚ್ಚಾಗಿ ಸೇವಿಸಲು ಮರೆಯಬೇಡಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್