ಮೂತ್ರವನ್ನು ಕಟ್ಟಿಕೊಂಡಿರುತ್ತೀರಾ? ಈ ಸಮಸ್ಯೆ ಬರಬಹುದು ಎಚ್ಚರ!

ಕೆಲವು ಜನರಿಗೆ ಹೊರಗೆ ಹೋದಾಗ ಮೂತ್ರ ವಿಸರ್ಜನೆ ಮಾಡಲು ಸರಿಯಾಗುವುದಿಲ್ಲ. ಹೀಗಾಗಿ, ಮನೆಗೆ ವಾಪಾಸ್ ಬರುವವರೆಗೂ ಮೂತ್ರವನ್ನು ಕಟ್ಟಿಕೊಂಡಿರುತ್ತಾರೆ. ಇನ್ನು ಕೆಲವು ಬಾರಿ ಅರ್ಜೆಂಟಾಗಿ ಮೂತ್ರ ವಿಸರ್ಜನೆ ಮಾಡಬೇಕೆಂದರೂ ಸುತ್ತಮುತ್ತಲೂ ಶೌಚಾಲಯ ಇಲ್ಲದ ಕಾರಣ ಅನಿವಾರ್ಯವಾಗಿ ಮೂತ್ರವನ್ನು ತಡೆಹಿಯಬೇಕಾಗುತ್ತದೆ. ಆದರೆ, ಈ ಅಭ್ಯಾಸದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು, ಎಚ್ಚರ!

ಮೂತ್ರವನ್ನು ಕಟ್ಟಿಕೊಂಡಿರುತ್ತೀರಾ? ಈ ಸಮಸ್ಯೆ ಬರಬಹುದು ಎಚ್ಚರ!
ಸಾಂದರ್ಭಿಕ ಚಿತ್ರ Image Credit source: iStock
Follow us
|

Updated on:Feb 28, 2024 | 7:33 PM

ವೈದ್ಯರಷ್ಟೇ ಅಲ್ಲ, ನಮ್ಮ ಮನೆಯ ಹಿರಿಯರೂ ಸಹ ದೀರ್ಘಕಾಲ ಮೂತ್ರ ವಿಸರ್ಜನೆಯನ್ನು ತಡೆಹಿಡಿಯದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಮೂತ್ರ ವಿಸರ್ಜನೆಯು ಒಂದು ನೈಸರ್ಗಿಕ ಪ್ರಕ್ರಿಯೆಯಾಗಿದ್ದು, ಮೂತ್ರನಾಳವು ತ್ಯಾಜ್ಯ ಮತ್ತು ಹೆಚ್ಚುವರಿ ದ್ರವವನ್ನು ಫಿಲ್ಟರ್ ಮಾಡಲು ಸಹಾಯ ಇದು ಮಾಡುತ್ತದೆ. ಮೂತ್ರದ ರೂಪದಲ್ಲಿ ಆ ತ್ಯಾಜ್ಯವನ್ನು ತೆಗೆದುಹಾಕುತ್ತದೆ. ಆದ್ದರಿಂದ, ಮೂತ್ರಕೋಶವು ಮೂತ್ರವನ್ನು ಹಿಡಿದಿಟ್ಟುಕೊಳ್ಳುವಾಗ, ಮೂತ್ರನಾಳವು ಒಳಚರಂಡಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಹೀಗಾಗಿ, ಮೂತ್ರವನ್ನು ತುಂಬ ಹೊತ್ತು ಕಂಟ್ರೋಲ್ ಮಾಡುವುದು ಒಳ್ಳೆಯದಲ್ಲ.

ನಮಗೆ ಮೂತ್ರ ಬಂದಾಗಲೆಲ್ಲ ಮೂತ್ರ ವಿಸರ್ಜನೆ ಮಾಡುವುದರಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ. ಕೆಲವೊಮ್ಮೆ ಅನಿವಾರ್ಯವಾಗಿ ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗುವುದಿಲ್ಲ. ಆಗಾಗ ಈ ರೀತಿ ಆದರೆ ಅದರಿಂದ ತೊಂದರೆಯಿಲ್ಲ. ಆದರೆ, ಇದು ಮುಂದುವರಿದರೆ ಮತ್ತು ಅಭ್ಯಾಸವಾಗಿ ಬದಲಾದರೆ ಸಮಸ್ಯೆಗಳು ಉಂಟಾಗಬಹುದು. ದೀರ್ಘಕಾಲದವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳುವುದು ಮೂತ್ರಪಿಂಡದ ಕಲ್ಲುಗಳ ರಚನೆಗೆ ಕಾರಣವಾಗಬಹುದು.

ಈ ಬಗ್ಗೆ ಪಿಡಿ ಹಿಂದೂಜಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಮಾಹಿಮ್‌ನ ಕನ್ಸಲ್ಟೆಂಟ್ ನೆಫ್ರಾಲಜಿಸ್ಟ್ ಡಾ.ಕೆ. ಮಹೇಶ್ ಪ್ರಸಾದ್ ಮಾಹಿತಿ ನೀಡಿದ್ದಾರೆ. ಮೂತ್ರವನ್ನು ದೀರ್ಘಕಾಲ ಹಿಡಿದಿಟ್ಟುಕೊಳ್ಳುವುದು ಮೂತ್ರದ ಸೋಂಕಿನ ಸಾಧ್ಯತೆಗಳನ್ನು ಹೆಚ್ಚಿಸಬಹುದು. ವಿಶೇಷವಾಗಿ ವಯಸ್ಸಾದವರು ಮಧುಮೇಹಿಗಳು ಮೂತ್ರವನ್ನು ಕಂಟ್ರೋಲ್ ಮಾಡುವುದು ಒಳ್ಳೆಯದಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಿಡ್ನಿ ಸಮಸ್ಯೆಗೆ ಆಯುರ್ವೇದದಲ್ಲಿದೆ ಪರಿಹಾರ

ಮೂತ್ರವನ್ನು ಹಿಡಿದಿಟ್ಟುಕೊಳ್ಳುವುದು ಗಾಳಿಗುಳ್ಳೆಯ ಸ್ನಾಯು ಮತ್ತು ಮೂತ್ರನಾಳದ ಸ್ಪಿಂಕ್ಟರ್​ನ ಅತಿಯಾದ ಹಿಗ್ಗುವಿಕೆಗೆ ಕಾರಣವಾಗಬಹುದು. ಇದು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ. ಯುಎಸ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಯಾಬಿಟಿಸ್ ಆ್ಯಂಡ್ ಡೈಜೆಸ್ಟಿವ್ ಮತ್ತು ಕಿಡ್ನಿ ಡಿಸೀಸ್ ಪ್ರಕಾರ, ಮಾನವನ ಮೂತ್ರಕೋಶವು 1.5 ರಿಂದ 2 ಕಪ್ ಮೂತ್ರವನ್ನು ಹಿಡಿದಿಟ್ಟುಕೊಳ್ಳುತ್ತದೆ. ಹೆಚ್ಚಿನ ಜನರು 3ರಿಂದ 4 ಗಂಟೆಗಳ ಕಾಲ ಮೂತ್ರ ವಿಸರ್ಜನೆ ಮಾಡದೆ ಇರಬಹುದು. ಅದಕ್ಕಿಂತಲೂ ಹೆಚ್ಚು ಸಮಯ ಮೂತ್ರ ಬಂದರೂ ಕಂಟ್ರೋಲ್ ಮಾಡುವುದರಿಂದ ಕೆಲವರಿಗೆ ಅಡ್ಡಪರಿಣಾಮ ಉಂಟಾಗಬಹುದು.

ಮೂತ್ರವನ್ನು ಕಂಟ್ರೋಲ್ ಮಾಡುವುದರಿಂದ ಮೂತ್ರಕೋಶದಲ್ಲಿ ನೋವು, ಮೂತ್ರನಾಳದ ಸೋಂಕು (UTI), ಗಾಳಿಗುಳ್ಳೆಯ ಸ್ಟ್ರೆಚಿಂಗ್, ಕಿಡ್ನಿ ಸ್ಟೋನ್ ಉಂಟಾಗಬಹುದು. ನೀರು, ಖನಿಜಗಳು ಮತ್ತು ಲವಣಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಮೂತ್ರಪಿಂಡಗಳು ಸಹಾಯ ಮಾಡುತ್ತವೆ. ಮೂತ್ರ ವಿಸರ್ಜನೆಯ ಪ್ರಕ್ರಿಯೆಯು ದೇಹದಿಂದ ತ್ಯಾಜ್ಯ ಉತ್ಪನ್ನಗಳು ಮತ್ತು ಹೆಚ್ಚುವರಿ ದ್ರವವನ್ನು ಫಿಲ್ಟರ್ ಮಾಡಲು ಸಹಾಯ ಮಾಡುತ್ತದೆ. ಆದರೆ, ಕೆಲವು ಸಂದರ್ಭಗಳಲ್ಲಿ ವ್ಯಕ್ತಿಯ ಮೂತ್ರವು ಖನಿಜಗಳು ಮತ್ತು ಕ್ಯಾಲ್ಸಿಯಂ, ಆಕ್ಸಲೇಟ್ ಮತ್ತು ಯೂರಿಕ್ ಆಮ್ಲದಂತಹ ಇತರ ಪದಾರ್ಥಗಳ ಹೆಚ್ಚಿನ ಸಾಂದ್ರತೆಯನ್ನು ಹೊಂದಿರುತ್ತದೆ. ಅದು ಒಟ್ಟಿಗೆ ಸೇರಿ ಹರಳುಗಳನ್ನು ರೂಪಿಸುತ್ತದೆ. ಇವು ನಂತರ ಒಟ್ಟಿಗೆ ಸೇರಿ ಕಿಡ್ನಿಯಲ್ಲಿ ಕಲ್ಲುಗಳನ್ನು ಮಾಡುತ್ತವೆ.

ಡಾ ಪ್ರಸಾದ್ ಪ್ರಕಾರ, ಮೂತ್ರಪಿಂಡದ ಕಲ್ಲುಗಳಿಗೆ ಕೆಲವು ಕಾರಣಗಳು ಹೀಗಿವೆ…

– ನಿರ್ಜಲೀಕರಣ

– ಕುಟುಂಬದ ಇತಿಹಾಸ

– ಔಷಧದ ದುರ್ಬಳಕೆ

– ನೋವು ನಿವಾರಕಗಳು

– ಉರಿಯೂತದ ಕರುಳಿನ ಕಾಯಿಲೆ (IBD)

– ಮರುಕಳಿಸುವ ಮೂತ್ರದ ಸೋಂಕು

ಇದನ್ನೂ ಓದಿ: Kidney Stone: ಈ ಲಕ್ಷಣಗಳು ಕಿಡ್ನಿ ಸ್ಟೋನ್ ಸಂಕೇತಗಳಾಗಿರಬಹುದು ಎಚ್ಚರ!

ಮೂತ್ರಪಿಂಡದ ಕಲ್ಲುಗಳ ರಚನೆಯ ಅಪಾಯವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ತೆಗೆದುಕೊಳ್ಳಬೇಕು…

– ಸಾಕಷ್ಟು ದ್ರವವನ್ನು ಕುಡಿಯಿರಿ. ದಿನಕ್ಕೆ 2-3 ಲೀಟರ್ ನೀರು ಸೇವಿಸಿ.

– ಹೆಚ್ಚಿನ ಆಕ್ಸಲೇಟ್ ಅಂಶವಿರುವ ಆಹಾರವನ್ನು ಮಿತಿಗೊಳಿಸಿ.

– ಸಾಕಷ್ಟು ಕ್ಯಾಲ್ಸಿಯಂ ಇರುವ ಆಹಾರ ಸೇವಿಸಿ.

– ಹೆಚ್ಚುವರಿ ಕ್ಯಾಲ್ಸಿಯಂ ಪೂರಕಗಳನ್ನು ತಪ್ಪಿಸಿ.

– ಮಧ್ಯಮ ಪ್ರಮಾಣದ ಪ್ರೋಟೀನ್ ಸೇವಿಸಿ.

– ಹೆಚ್ಚಿನ ಉಪ್ಪು ಸೇವನೆಯನ್ನು ತಪ್ಪಿಸಿ.

– ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಪೂರಕಗಳನ್ನು ತಪ್ಪಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Wed, 28 February 24

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್