AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಗುಣದಲ್ಲಿ ಹುಳಿಯಾಗಿದ್ದರೂ ಆರೋಗ್ಯಕ್ಕೆ ಸಿಹಿಯಂತೆ ಈ ಬೆಟ್ಟದ ನೆಲ್ಲಿಕಾಯಿ!

ಬೆಟ್ಟ ನೆಲ್ಲಿಕಾಯಿಯಲ್ಲಿ ರುಚಿಯಲ್ಲಿ ಹುಳಿಯಾಗಿದ್ದರೂ ತಿಂದ ಬಳಿಕ ಆರೋಗ್ಯಕ್ಕೆ ಸಿಹಿ ಎನ್ನುವುದು ಮಾತ್ರ ನಿಜ. ಬೆಟ್ಟದ ನೆಲ್ಲಿ ಅಥವಾ ಆಮ್ಲಾ ಎಂದು ಕರೆಯಲ್ಪಡುವ ಆಯುರ್ವೇದದಲ್ಲಿ ಇದನ್ನು ಔಷಧಿಯಾಗಿ ಬಳಸಲಾಗುತ್ತದೆ. ನಮ್ಮ ಹಿರಿಯರು ಈ ಬೆಟ್ಟದ ನೆಲ್ಲಿಯನ್ನು ಬಳಸಿ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವುದರಲ್ಲಿ ನಿಪುಣರು. ಇವತ್ತಿಗೂ ಹಳ್ಳಿ ಕಡೆಗೆ ಹೋದರೆ ಈ ಬೆಟ್ಟದ ನೆಲ್ಲಿಕಾಯಿಯನ್ನು ಮನೆ ಮದ್ದು ತಯಾರಿಕೆಯಲ್ಲಿ ಬಳಸುವುದನ್ನು ಕಾಣಬಹುದು.

Health Tips: ಗುಣದಲ್ಲಿ ಹುಳಿಯಾಗಿದ್ದರೂ ಆರೋಗ್ಯಕ್ಕೆ ಸಿಹಿಯಂತೆ ಈ ಬೆಟ್ಟದ ನೆಲ್ಲಿಕಾಯಿ!
ಬೆಟ್ಟದ ನೆಲ್ಲಿಕಾಯಿImage Credit source: Pinterest
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Feb 03, 2024 | 11:47 AM

Share

ಬೆಟ್ಟದ ನೆಲ್ಲಿಕಾಯಿ ಎಂದ ಕೂಡಲೇ ಎಲ್ಲರ ಬಾಯಲ್ಲಿ ನೀರು ಬರುತ್ತದೆ. ಗುಣದಲ್ಲಿ ಹುಳಿಯಾಗಿದ್ದು, ಈ ನೆಲ್ಲಿಕಾಯಿಯನ್ನು ಉಪ್ಪಿನ ಕಾಯಿ ತಯಾರಿಸಲು ಬಳಸುತ್ತಾರೆ. ನೆಲ್ಲಿಕಾಯಿ ಮರದ ಹಣ್ಣು, ಹೂವು, ಕಾಯಿ, ಎಲೆಗಳು, ಬೇರು ಮತ್ತು ತೊಗಟೆ ತುಂಬಾ ಔಷಧೀಯ ಗುಣವನ್ನು ಹೊಂದಿದೆ. ಆದರೆ, ಈ ಬೆಟ್ಟದ ನೆಲ್ಲಿಕಾಯಿಯಲ್ಲಿ ಕ್ಯಾಲೋರಿಗಳು, ಫೈಬರ್, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್ಗಳು, ಕ್ಯಾಲ್ಸಿಯಂ 50%, ಕಬ್ಬಿಣ, ಕ್ಯಾರೋಟಿನ್, ಥಯಾಮಿನ್, ರೈಬೋಫ್ಲಾವಿನ್, ನಿಯಾಸಿನ್, ವಿಟಮಿನ್ ಗಳು ಹೇರಳವಾಗಿದ್ದು, ಇದನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಸಿಹಿಯಾಗಿದೆ.

ರೋಗ ಶಮನಕಾರಿ ಗುಣವಿರುವ ಬೆಟ್ಟದ ನೆಲ್ಲಿಕಾಯಿಯ ಮನೆಮದ್ದು:

  1. ನೆಲ್ಲಿಕಾಯಿ ಪುಡಿ ಎರಡು ಚಮಚ, ಜೀರಿಗೆ ಪುಡಿ ಅರ್ಧ ಚಮಚ ಮತ್ತು ಕಲ್ಲು ಸಕ್ಕರೆ ಇವುಗಳನ್ನು ಮಿಶ್ರ ಮಾಡಿ ದಿನಕ್ಕೆರಡು ಬಾರಿ ಸೇವಿಸಿದರೆ ಅಸಿಡಿಟಿ ಸಮಸ್ಯೆಯೂ ನಿವಾರಣೆಯಾಗುತ್ತದೆ.
  2. ನೆಲ್ಲಿಕಾಯಿ ಬೀಜದ ಕಷಾಯ ತಯಾರಿಸಿ ಆರಿಸಿ ಶೋಧಿಸಿ ಕಣ್ಣಿಗೆ ಎರಡು ಹನಿ ಹಾಕಿದರೆದರೆ ಕಣ್ಣು ನೋವು ಗುಣಮುಖವಾಗುತ್ತದೆ.
  3. ನೆಲ್ಲಿಕಾಯಿ ಪುಡಿಯನ್ನು ಜೇನುತುಪ್ಪದಲ್ಲಿ ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ಕಣ್ಣು ನೋವಿಗೆ ಪರಿಣಾಮಕಾರಿಯಾಗಿದೆ.
  4. ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಅಕ್ಕಿ ತೊಳೆದ ನೀರಿನಲ್ಲಿ ಕಲಸಿ ದಿನಕ್ಕೆರಡು ಬಾರಿ ಸೇವಿಸಿದರೆ ಬಿಳಿ ಮುಟ್ಟು ನಿವಾರಣೆಯಾಗುತ್ತದೆ.
  5. ನಾಲ್ಕು ಚಮಚ ನೆಲ್ಲಿಕಾಯಿ ರಸಕ್ಕೆ ಒಂದು ಚಮಚ ಅಶ್ವಗಂಧ ಪುಡಿ ಒಂದು ಚಮಚ ಜೇನುತುಪ್ಪ ಅಥವಾ ಅರ್ಧ ಚಮಚ ತುಪ್ಪ ಸೇರಿಸಿ ಸೇವಿಸಿ ನಂತರ ಹಾಲು ಕುಡಿದರೆರೆ ಕಣ್ಣು ನೋವಿನ ಸಮಸ್ಯೆಯೂ ಶಮನವಾಗುತ್ತದೆ.
  6.  ನೆಲ ನೆಲ್ಲಿಯನ್ನು ಬಾಯಿಗೆ ಹಾಕಿ ಅಗಿದು, ಬಿಸಿನೀರಿನಿಂದ ಬಾಯಿ ಮುಕ್ಕಳಿಸಿದರೆ ಹಲ್ಲುನೋವು ಕಡಿಮೆಯಾಗುತ್ತದೆ.
  7. ನೆಲ್ಲಿಕಾಯಿ ರಸ ಮತ್ತು ಜೀರಿಗೆ ಪುಡಿಯನ್ನು ಮಜ್ಜಿಗೆಯಲ್ಲಿ ಬೆರೆಸಿ, ಬಾಯಿ ಮುಕ್ಕಳಿಸಿದರೆ ಬಾಯಿ ಹುಣ್ಣು ಗುಣಮುಖವಾಗುತ್ತದೆ.
  8. ಉರಿಮೂತ್ರ ಸಮಸ್ಯೆಯಿರುವವರು ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಮಿಶ್ರಣ ಮಾಡಿ, ಬೆಳಗ್ಗಿನ ಹೊತ್ತು ಮೂರು ದಿನಗಳ ಕಾಲ ಸೇವಿಸಿದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
  9. ನೆಲ್ಲಿಕಾಯಿ ಪುಡಿಯನ್ನು ಮಜ್ಜಿಗೆಯಲ್ಲಿ ಕಲಸಿ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆಯು ವಾಸಿಯಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ