AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಗುಣದಲ್ಲಿ ಹುಳಿಯಾಗಿದ್ದರೂ ಆರೋಗ್ಯಕ್ಕೆ ಸಿಹಿಯಂತೆ ಈ ಬೆಟ್ಟದ ನೆಲ್ಲಿಕಾಯಿ!

ಬೆಟ್ಟ ನೆಲ್ಲಿಕಾಯಿಯಲ್ಲಿ ರುಚಿಯಲ್ಲಿ ಹುಳಿಯಾಗಿದ್ದರೂ ತಿಂದ ಬಳಿಕ ಆರೋಗ್ಯಕ್ಕೆ ಸಿಹಿ ಎನ್ನುವುದು ಮಾತ್ರ ನಿಜ. ಬೆಟ್ಟದ ನೆಲ್ಲಿ ಅಥವಾ ಆಮ್ಲಾ ಎಂದು ಕರೆಯಲ್ಪಡುವ ಆಯುರ್ವೇದದಲ್ಲಿ ಇದನ್ನು ಔಷಧಿಯಾಗಿ ಬಳಸಲಾಗುತ್ತದೆ. ನಮ್ಮ ಹಿರಿಯರು ಈ ಬೆಟ್ಟದ ನೆಲ್ಲಿಯನ್ನು ಬಳಸಿ ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವುದರಲ್ಲಿ ನಿಪುಣರು. ಇವತ್ತಿಗೂ ಹಳ್ಳಿ ಕಡೆಗೆ ಹೋದರೆ ಈ ಬೆಟ್ಟದ ನೆಲ್ಲಿಕಾಯಿಯನ್ನು ಮನೆ ಮದ್ದು ತಯಾರಿಕೆಯಲ್ಲಿ ಬಳಸುವುದನ್ನು ಕಾಣಬಹುದು.

Health Tips: ಗುಣದಲ್ಲಿ ಹುಳಿಯಾಗಿದ್ದರೂ ಆರೋಗ್ಯಕ್ಕೆ ಸಿಹಿಯಂತೆ ಈ ಬೆಟ್ಟದ ನೆಲ್ಲಿಕಾಯಿ!
ಬೆಟ್ಟದ ನೆಲ್ಲಿಕಾಯಿImage Credit source: Pinterest
ಸಾಯಿನಂದಾ
| Edited By: |

Updated on: Feb 03, 2024 | 11:47 AM

Share

ಬೆಟ್ಟದ ನೆಲ್ಲಿಕಾಯಿ ಎಂದ ಕೂಡಲೇ ಎಲ್ಲರ ಬಾಯಲ್ಲಿ ನೀರು ಬರುತ್ತದೆ. ಗುಣದಲ್ಲಿ ಹುಳಿಯಾಗಿದ್ದು, ಈ ನೆಲ್ಲಿಕಾಯಿಯನ್ನು ಉಪ್ಪಿನ ಕಾಯಿ ತಯಾರಿಸಲು ಬಳಸುತ್ತಾರೆ. ನೆಲ್ಲಿಕಾಯಿ ಮರದ ಹಣ್ಣು, ಹೂವು, ಕಾಯಿ, ಎಲೆಗಳು, ಬೇರು ಮತ್ತು ತೊಗಟೆ ತುಂಬಾ ಔಷಧೀಯ ಗುಣವನ್ನು ಹೊಂದಿದೆ. ಆದರೆ, ಈ ಬೆಟ್ಟದ ನೆಲ್ಲಿಕಾಯಿಯಲ್ಲಿ ಕ್ಯಾಲೋರಿಗಳು, ಫೈಬರ್, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್ಗಳು, ಕ್ಯಾಲ್ಸಿಯಂ 50%, ಕಬ್ಬಿಣ, ಕ್ಯಾರೋಟಿನ್, ಥಯಾಮಿನ್, ರೈಬೋಫ್ಲಾವಿನ್, ನಿಯಾಸಿನ್, ವಿಟಮಿನ್ ಗಳು ಹೇರಳವಾಗಿದ್ದು, ಇದನ್ನು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಸಿಹಿಯಾಗಿದೆ.

ರೋಗ ಶಮನಕಾರಿ ಗುಣವಿರುವ ಬೆಟ್ಟದ ನೆಲ್ಲಿಕಾಯಿಯ ಮನೆಮದ್ದು:

  1. ನೆಲ್ಲಿಕಾಯಿ ಪುಡಿ ಎರಡು ಚಮಚ, ಜೀರಿಗೆ ಪುಡಿ ಅರ್ಧ ಚಮಚ ಮತ್ತು ಕಲ್ಲು ಸಕ್ಕರೆ ಇವುಗಳನ್ನು ಮಿಶ್ರ ಮಾಡಿ ದಿನಕ್ಕೆರಡು ಬಾರಿ ಸೇವಿಸಿದರೆ ಅಸಿಡಿಟಿ ಸಮಸ್ಯೆಯೂ ನಿವಾರಣೆಯಾಗುತ್ತದೆ.
  2. ನೆಲ್ಲಿಕಾಯಿ ಬೀಜದ ಕಷಾಯ ತಯಾರಿಸಿ ಆರಿಸಿ ಶೋಧಿಸಿ ಕಣ್ಣಿಗೆ ಎರಡು ಹನಿ ಹಾಕಿದರೆದರೆ ಕಣ್ಣು ನೋವು ಗುಣಮುಖವಾಗುತ್ತದೆ.
  3. ನೆಲ್ಲಿಕಾಯಿ ಪುಡಿಯನ್ನು ಜೇನುತುಪ್ಪದಲ್ಲಿ ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ಕಣ್ಣು ನೋವಿಗೆ ಪರಿಣಾಮಕಾರಿಯಾಗಿದೆ.
  4. ಒಂದು ಚಮಚ ನೆಲ್ಲಿಕಾಯಿ ಪುಡಿಯನ್ನು ಅಕ್ಕಿ ತೊಳೆದ ನೀರಿನಲ್ಲಿ ಕಲಸಿ ದಿನಕ್ಕೆರಡು ಬಾರಿ ಸೇವಿಸಿದರೆ ಬಿಳಿ ಮುಟ್ಟು ನಿವಾರಣೆಯಾಗುತ್ತದೆ.
  5. ನಾಲ್ಕು ಚಮಚ ನೆಲ್ಲಿಕಾಯಿ ರಸಕ್ಕೆ ಒಂದು ಚಮಚ ಅಶ್ವಗಂಧ ಪುಡಿ ಒಂದು ಚಮಚ ಜೇನುತುಪ್ಪ ಅಥವಾ ಅರ್ಧ ಚಮಚ ತುಪ್ಪ ಸೇರಿಸಿ ಸೇವಿಸಿ ನಂತರ ಹಾಲು ಕುಡಿದರೆರೆ ಕಣ್ಣು ನೋವಿನ ಸಮಸ್ಯೆಯೂ ಶಮನವಾಗುತ್ತದೆ.
  6.  ನೆಲ ನೆಲ್ಲಿಯನ್ನು ಬಾಯಿಗೆ ಹಾಕಿ ಅಗಿದು, ಬಿಸಿನೀರಿನಿಂದ ಬಾಯಿ ಮುಕ್ಕಳಿಸಿದರೆ ಹಲ್ಲುನೋವು ಕಡಿಮೆಯಾಗುತ್ತದೆ.
  7. ನೆಲ್ಲಿಕಾಯಿ ರಸ ಮತ್ತು ಜೀರಿಗೆ ಪುಡಿಯನ್ನು ಮಜ್ಜಿಗೆಯಲ್ಲಿ ಬೆರೆಸಿ, ಬಾಯಿ ಮುಕ್ಕಳಿಸಿದರೆ ಬಾಯಿ ಹುಣ್ಣು ಗುಣಮುಖವಾಗುತ್ತದೆ.
  8. ಉರಿಮೂತ್ರ ಸಮಸ್ಯೆಯಿರುವವರು ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಮಿಶ್ರಣ ಮಾಡಿ, ಬೆಳಗ್ಗಿನ ಹೊತ್ತು ಮೂರು ದಿನಗಳ ಕಾಲ ಸೇವಿಸಿದರೆ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
  9. ನೆಲ್ಲಿಕಾಯಿ ಪುಡಿಯನ್ನು ಮಜ್ಜಿಗೆಯಲ್ಲಿ ಕಲಸಿ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆಯು ವಾಸಿಯಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು