AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್‌ನಟ್ಸ್​​​​ನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ

ವಾಲ್‌ನಟ್ಸ್​​​​ ಅಥವಾ ಅಖ್ರೋಟ್ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ನೀವಿದನ್ನು ಹೀಗೆಯೆ ತಿನ್ನಬಹುದು ಅಥವಾ ವಿಶೇಷ ಪಾಕ ವಿಧಾನದ ಮೂಲಕ ಸವಿಯಬಹುದಾಗಿದೆ.

ವಾಲ್‌ನಟ್ಸ್​​​​ನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ
walnutsImage Credit source: refreshyourlife
ಅಕ್ಷತಾ ವರ್ಕಾಡಿ
|

Updated on: May 18, 2023 | 2:27 PM

Share

ವಾಲ್‌ನಟ್ಸ್​​​​ ಅಥವಾ ಅಖ್ರೋಟ್ ಹೆಚ್ಚಿನ ಮಟ್ಟದ ಪೌಷ್ಟಿಕಾಂಶವನ್ನು ಹೊಂದಿದ್ದು, ಇದನ್ನು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಇದು ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ನೀವಿದನ್ನು ಹೀಗೆಯೆ ತಿನ್ನಬಹುದು ಅಥವಾ ನೀವಿದನ್ನು ವಿಶೇಷ ಪಾಕ ವಿಧಾನದ ಮೂಲಕ ಸವಿಯಬಹುದಾಗಿದೆ.

ವಾಲ್‌ನಟ್ಸ್ ತಿನ್ನುವುದರಿಂದ ಆಗುವ ಪ್ರಯೋಜನಗಳೇನು?

ವಾಲ್‌ನಟ್ಸ್ ನಿಮ್ಮ ದೇಹಕ್ಕೆ ಉತ್ತಮವಾದ ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುತ್ತದೆ. ಜೊತೆಗೆ ಅವು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ವಾಲ್‌ನಟ್ಸ್‌ನಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ದೇಹವನ್ನು ಚೈತನ್ಯಗೊಳಿಸುತ್ತದೆ ಮತ್ತು ಮೆದುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ವಾಲ್‌ನಟ್ಸ್  ದೇಹದ ಚಯಾಪಚಯವನ್ನು ಹೆಚ್ಚಿಸಲು ಮತ್ತು ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಲಿಚ್ಚಿ ಹಣ್ಣಿನ 5 ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿವೆ

ವಾಲ್‌ನಟ್ಸ್‌ನಲ್ಲಿ ಸಕ್ಕರೆ ಅಂಶ ಕಡಿಮೆ ಇರುವುದರಿಂದ ಮಧುಮೇಹ ಮತ್ತು ತೂಕ ಇಳಿಸುವ ಆಹಾರಕ್ರಮಕ್ಕೆ ಒಳ್ಳೆಯದು. ವಾಲ್‌ನಟ್‌ಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಕಾರಣದಿಂದ, ಅವುಗಳನ್ನು ಆಸಕ್ತಿದಾಯಕ ವಿಧಾನಗಳಲ್ಲಿ ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ನಿಮ್ಮ ಆಹಾರದಲ್ಲಿ ವಾಲ್ನಟ್ಸ್ ಸೇರಿಸುವುದರಿಂದ ಬ್ಯೂಟೈರೇಟ್ ಅನ್ನು ಉತ್ಪಾದಿಸುವ ಬ್ಯಾಕ್ಟೀರಿಯಾಗಳು ಹೆಚ್ಚಾಗುತ್ತವೆ. ಇದು ನಿಮ್ಮ ಕರುಳನ್ನು ಪೋಷಿಸುತ್ತದೆ ಮತ್ತು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ. ಇದು ಉತ್ತಮ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಆದ್ದರಿಂದ ನೀವು ಹಣ್ಣುಗಳೊಂದಿಗೆ ವಾಲ್ನಟ್ಸ್ ತಯಾರಿಸಿ ಸವಿಯಬಹುದು. ಇದು ಉತ್ತಮ ರುಚಿಯ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ