Health Tips: ಬಿಳಿ ಮತ್ತು ಕಂದು ಅಕ್ಕಿಯಲ್ಲಿ ಯಾವುದು ಹೆಚ್ಚು ಆರೋಗ್ಯಕರ? ಇಲ್ಲಿದೆ ಆಸಕ್ತಿದಾಯಕ ವಿಷಯ!

ದೇಶದಲ್ಲಿ ಹೆಚ್ಚಿನ ಜನರು ಸರಾಸರಿ ಬಿಳಿ ಅಕ್ಕಿಯನ್ನು ತಿನ್ನುತ್ತಾರೆ. ಆದರೆ ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿ ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿಯೇ ಈಗ ಕಂದು ಅಕ್ಕಿಯ ಸೇವನೆ ಹೆಚ್ಚಾಗಿದೆ.

Health Tips: ಬಿಳಿ ಮತ್ತು ಕಂದು ಅಕ್ಕಿಯಲ್ಲಿ ಯಾವುದು ಹೆಚ್ಚು ಆರೋಗ್ಯಕರ? ಇಲ್ಲಿದೆ ಆಸಕ್ತಿದಾಯಕ ವಿಷಯ!
ಕಂದು, ಬಿಳಿ ಅಕ್ಕಿ (ಸಂಗ್ರಹ ಚಿತ್ರ)
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 10, 2022 | 8:00 AM

ಕರೋನಾ ಎನ್ನೋ ಮಹಾಮಾರಿ ಬಂದು ಹೋದ ನಂತರ ನಮ್ಮ ಇಡೀ ಜೀವನವೇ ಬದಲಾಗಿ ಹೋಗಿದೆ. ಆಹಾರ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಜಂಕ್ ಫುಡ್​ನಿಂದ ದೂರವಿದ್ದು, ಪೌಷ್ಠಿಕತೆಯುಕ್ತ ಆಹಾರಗಳನ್ನು ಸೇವಿಸುವುದರ ಬಗ್ಗೆ ಅರಿವು ಹೆಚ್ಚುತ್ತಿದೆ. ಆಹಾರ ಪದ್ಧತಿ ಉತ್ತಮವಾದಷ್ಟೂ ಆರೋಗ್ಯ ಉತ್ತಮ ಎಂಬುದು ನಮಗೆಲ್ಲರಿಗೂ ಗೊತ್ತು. ನಮ್ಮ ಮಧ್ಯಾಹ್ನ ಮತ್ತು ರಾತ್ರಿಯ ಊಟದಲ್ಲಿ ನಾವುಗಳು ಬಹುತೇಕ ಅನ್ನವನ್ನು ಸೇವಿಸುತ್ತೇವೆ. ಆದರೆ ಪ್ರತಿದಿನ ಸೇವಿಸುವ ಬಿಳಿ ಅಕ್ಕಿಗಿಂತ ಕಂದು ಅಕ್ಕಿ (Brown Rice) ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ದೇಶದಲ್ಲಿ ಹೆಚ್ಚಿನ ಜನರು ಸರಾಸರಿ ಬಿಳಿ ಅಕ್ಕಿಯನ್ನು ತಿನ್ನುತ್ತಾರೆ. ಆದರೆ ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿ ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿಯೇ ಈಗ ಕಂದು ಅಕ್ಕಿಯ ಸೇವನೆ ಹೆಚ್ಚಾಗಿದೆ. ಹೊಟ್ಟು ತೆಗೆದ ನಂತರ ಉಳಿಯುವ ಅಕ್ಕಿಯೇ ಕಂದು ಅಕ್ಕಿ. ಸ್ವಲ್ಪ ಕಂದು ಬಣ್ಣವಿರುವುದರಿಂದ ಬ್ರೌನ್ ರೈಸ್ ಎಂದು ಕರೆಯಲಾಗುತ್ತದೆ. ಅದನ್ನು ಸಂಪೂರ್ಣವಾಗಿ ಪಾಲಿಶ್ ಮಾಡಿದರೆ ಬಿಳಿ ಅಕ್ಕಿ ಉತ್ಪತ್ತಿಯಾಗುತ್ತದೆ. ಈ ಕಂದು ಅಕ್ಕಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಆ ಕುರಿತು ತಿಳಿದುಕೊಳ್ಳೋಣ.

ಇದು ಸಂಸ್ಕರಿಸದ ಅಕ್ಕಿಯಾಗಿರುವುದರಿಂದ, ಇದು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತದೆ. ಕಂದು ರೈಸ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಕಂದು ಅಕ್ಕಿಯಲ್ಲಿರುವ ಫೈಬರ್ ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲಿಗ್ನಾನ್ ದೇಹದಲ್ಲಿನ ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡುತ್ತದೆ. ಇದು ಅಧಿಕ ರಕ್ತದೊತ್ತಡವನ್ನೂ ನಿಯಂತ್ರಿಸುತ್ತದೆ.

ಕಂದು ಅಕ್ಕಿಯನ್ನು ತಿನ್ನುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಬಹುದು. ಏಕೆಂದರೆ ಅದು ರಿಫೈನ್ಡ್ ರೈಸ್ ಅಲ್ಲ. ಅದೇ ಬಿಳಿ ಅಕ್ಕಿ ಅಥವಾ ಸಂಸ್ಕರಿಸಿದ ಅಕ್ಕಿಯಲ್ಲಿ ಪೋಷಕಾಂಶಗಳು ಮತ್ತು ನಾರಿನಂಶ ಬಹಳ ಕಡಿಮೆಯಿರುತ್ತದೆ. ಪರಿಣಾಮವಾಗಿ, ದೇಹವು ಕಡಿಮೆ ಪೋಷಕಾಂಶಗಳನ್ನು ಪಡೆಯುತ್ತದೆ. ಕಂದು ಅಕ್ಕಿಯನ್ನು ಬಳಸುವುದರಿಂದ ತೂಕ ನಷ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಫೈಬರ್ ಮತ್ತು ಪೋಷಕಾಂಶಗಳನ್ನು ಸಹ ಒದಗಿಸುತ್ತದೆ.

ಜೀವನಶೈಲಿಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್