AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬಿಳಿ ಮತ್ತು ಕಂದು ಅಕ್ಕಿಯಲ್ಲಿ ಯಾವುದು ಹೆಚ್ಚು ಆರೋಗ್ಯಕರ? ಇಲ್ಲಿದೆ ಆಸಕ್ತಿದಾಯಕ ವಿಷಯ!

ದೇಶದಲ್ಲಿ ಹೆಚ್ಚಿನ ಜನರು ಸರಾಸರಿ ಬಿಳಿ ಅಕ್ಕಿಯನ್ನು ತಿನ್ನುತ್ತಾರೆ. ಆದರೆ ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿ ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿಯೇ ಈಗ ಕಂದು ಅಕ್ಕಿಯ ಸೇವನೆ ಹೆಚ್ಚಾಗಿದೆ.

Health Tips: ಬಿಳಿ ಮತ್ತು ಕಂದು ಅಕ್ಕಿಯಲ್ಲಿ ಯಾವುದು ಹೆಚ್ಚು ಆರೋಗ್ಯಕರ? ಇಲ್ಲಿದೆ ಆಸಕ್ತಿದಾಯಕ ವಿಷಯ!
ಕಂದು, ಬಿಳಿ ಅಕ್ಕಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 10, 2022 | 8:00 AM

Share

ಕರೋನಾ ಎನ್ನೋ ಮಹಾಮಾರಿ ಬಂದು ಹೋದ ನಂತರ ನಮ್ಮ ಇಡೀ ಜೀವನವೇ ಬದಲಾಗಿ ಹೋಗಿದೆ. ಆಹಾರ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೇವೆ. ಜಂಕ್ ಫುಡ್​ನಿಂದ ದೂರವಿದ್ದು, ಪೌಷ್ಠಿಕತೆಯುಕ್ತ ಆಹಾರಗಳನ್ನು ಸೇವಿಸುವುದರ ಬಗ್ಗೆ ಅರಿವು ಹೆಚ್ಚುತ್ತಿದೆ. ಆಹಾರ ಪದ್ಧತಿ ಉತ್ತಮವಾದಷ್ಟೂ ಆರೋಗ್ಯ ಉತ್ತಮ ಎಂಬುದು ನಮಗೆಲ್ಲರಿಗೂ ಗೊತ್ತು. ನಮ್ಮ ಮಧ್ಯಾಹ್ನ ಮತ್ತು ರಾತ್ರಿಯ ಊಟದಲ್ಲಿ ನಾವುಗಳು ಬಹುತೇಕ ಅನ್ನವನ್ನು ಸೇವಿಸುತ್ತೇವೆ. ಆದರೆ ಪ್ರತಿದಿನ ಸೇವಿಸುವ ಬಿಳಿ ಅಕ್ಕಿಗಿಂತ ಕಂದು ಅಕ್ಕಿ (Brown Rice) ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ದೇಶದಲ್ಲಿ ಹೆಚ್ಚಿನ ಜನರು ಸರಾಸರಿ ಬಿಳಿ ಅಕ್ಕಿಯನ್ನು ತಿನ್ನುತ್ತಾರೆ. ಆದರೆ ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿ ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿಯೇ ಈಗ ಕಂದು ಅಕ್ಕಿಯ ಸೇವನೆ ಹೆಚ್ಚಾಗಿದೆ. ಹೊಟ್ಟು ತೆಗೆದ ನಂತರ ಉಳಿಯುವ ಅಕ್ಕಿಯೇ ಕಂದು ಅಕ್ಕಿ. ಸ್ವಲ್ಪ ಕಂದು ಬಣ್ಣವಿರುವುದರಿಂದ ಬ್ರೌನ್ ರೈಸ್ ಎಂದು ಕರೆಯಲಾಗುತ್ತದೆ. ಅದನ್ನು ಸಂಪೂರ್ಣವಾಗಿ ಪಾಲಿಶ್ ಮಾಡಿದರೆ ಬಿಳಿ ಅಕ್ಕಿ ಉತ್ಪತ್ತಿಯಾಗುತ್ತದೆ. ಈ ಕಂದು ಅಕ್ಕಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಆ ಕುರಿತು ತಿಳಿದುಕೊಳ್ಳೋಣ.

ಇದು ಸಂಸ್ಕರಿಸದ ಅಕ್ಕಿಯಾಗಿರುವುದರಿಂದ, ಇದು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತದೆ. ಕಂದು ರೈಸ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಕಂದು ಅಕ್ಕಿಯಲ್ಲಿರುವ ಫೈಬರ್ ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲಿಗ್ನಾನ್ ದೇಹದಲ್ಲಿನ ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡುತ್ತದೆ. ಇದು ಅಧಿಕ ರಕ್ತದೊತ್ತಡವನ್ನೂ ನಿಯಂತ್ರಿಸುತ್ತದೆ.

ಕಂದು ಅಕ್ಕಿಯನ್ನು ತಿನ್ನುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಬಹುದು. ಏಕೆಂದರೆ ಅದು ರಿಫೈನ್ಡ್ ರೈಸ್ ಅಲ್ಲ. ಅದೇ ಬಿಳಿ ಅಕ್ಕಿ ಅಥವಾ ಸಂಸ್ಕರಿಸಿದ ಅಕ್ಕಿಯಲ್ಲಿ ಪೋಷಕಾಂಶಗಳು ಮತ್ತು ನಾರಿನಂಶ ಬಹಳ ಕಡಿಮೆಯಿರುತ್ತದೆ. ಪರಿಣಾಮವಾಗಿ, ದೇಹವು ಕಡಿಮೆ ಪೋಷಕಾಂಶಗಳನ್ನು ಪಡೆಯುತ್ತದೆ. ಕಂದು ಅಕ್ಕಿಯನ್ನು ಬಳಸುವುದರಿಂದ ತೂಕ ನಷ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಫೈಬರ್ ಮತ್ತು ಪೋಷಕಾಂಶಗಳನ್ನು ಸಹ ಒದಗಿಸುತ್ತದೆ.

ಜೀವನಶೈಲಿಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ