AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Breakfast: ಆರೋಗ್ಯಕರ ಜೀವನಕ್ಕಾಗಿ ಐದು ಭಾರತೀಯ ಪೌಷ್ಟಿಕ ಉಪಹಾರಗಳು

ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ತಿಂಡಿ ತಿನಿಸುಗಳ ಬದಲಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ತಿನ್ನಲು ನಮ್ಮ ಭಾರತೀಯ ಸಂಸ್ಕೃತಿಯು ಯಾವಾಗಲೂ ಪ್ರೋತ್ಸಾಹಿಸುತ್ತಿದೆ. ಈ ಆಹಾರಗಳು ಆರೋಗ್ಯಕರ ಜೀವನಕ್ಕೆ ಪ್ರಮುಖವಾಗಿವೆ.

Healthy Breakfast: ಆರೋಗ್ಯಕರ ಜೀವನಕ್ಕಾಗಿ ಐದು ಭಾರತೀಯ ಪೌಷ್ಟಿಕ ಉಪಹಾರಗಳು
ಆರೋಗ್ಯಕರ ಜೀವನಕ್ಕಾಗಿ ಐದು ಪೌಷ್ಟಿಕಾಂಶದ ಭಾರತೀಯ ಉಪಹಾರಗಳುImage Credit source: westend61
Follow us
TV9 Web
| Updated By: Rakesh Nayak Manchi

Updated on: Sep 12, 2022 | 7:01 AM

ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ತಿಂಡಿ ತಿನಿಸುಗಳ ಬದಲಿಗೆ ಮನೆಯಲ್ಲೇ ತಯಾರಿಸಿದ ಆಹಾರವನ್ನು ತಿನ್ನಲು ನಮ್ಮ ಭಾರತೀಯ ಸಂಸ್ಕೃತಿಯು ಯಾವಾಗಲೂ ಪ್ರೋತ್ಸಾಹಿಸುತ್ತಿದೆ. ಆರೋಗ್ಯಕರ ಜೀವನದ ರಹಸ್ಯವು ನಿಮ್ಮ ಅಡುಗೆಮನೆಯಲ್ಲಿದೆ ಎಂಬುದನ್ನು ಮರೆಯದಿರಿ. ಭಾರತೀಯ ಆಹಾರ ಪದ್ದತಿಯು ಆರೋಗ್ಯಕರ ಜೀವನಕ್ಕೆ ಪ್ರಮುಖವಾಗಿವೆ. ನೀವು ಆರೋಗ್ಯಕರ ಉಪಹಾರವನ್ನು ತಿನ್ನಲು ಬಯಸುತ್ತಿದ್ದರೆ ಕೆಲವೊಂದು ಉತ್ತಮ ಉಪಹಾರಗಳ ಬಗ್ಗೆ ತಿಳಿಸುತ್ತೇವೆ. ಅವುಗಳು ಈ ಕೆಳಗಿನಂತಿವೆ.

ಇಡ್ಲಿ: ರಾಗಿ ಅಥವಾ ರವೆಯಿಂದ ಮಾಡಿದ ಇಡ್ಲಿ ಬೆಳಗಿನ ಉಪಾಹಾರವಾಗಿ ಸೇವಿಸಬಹುದು. ಇದು ತ್ವರಿತವಾಗಿ ಮತ್ತು ಸರಳವಾಗಿ ಜೀರ್ಣವಾಗುತ್ತವೆ. ರಾಗಿಯು ತೂಕ ನಷ್ಟಕ್ಕೆ ಪರಿಣಾಮಕಾರಿಯಾಗಿದೆ.

ತರಕಾರಿ ಸ್ಯಾಂಡ್‌ವಿಚ್: ಗೋಧಿ ಬ್ರೆಡ್​ಗಳ ನಡುವೆ ತರಕಾರಿಗಳು ಮತ್ತು ಪನೀರ್ ತುಂಬಿದ ಆರೋಗ್ಯಕರ ಸ್ಯಾಂಡ್‌ವಿಚ್ ಸೇವಿಸುವುದರೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಬಹುದು. ಗೋಧಿ, ತರಕಾರಿಗಳ ಪ್ರೋಟೀನ್ ನಿಮ್ಮ ದೇಹಕ್ಕೆ ನೀಡಲಿದೆ.

ಓಟ್​ ಮೀಲ್: ಇದು ಆರೋಗ್ಯಕರ ಉಪಹಾರ ಆಯ್ಕೆಯಾಗಿದೆ. ಓಟ್ಸ್ ಕಬ್ಬಿಣ, ಬಿ ವಿಟಮಿನ್, ಮ್ಯಾಂಗನೀಸ್, ಮೆಗ್ನೀಸಿಯಮ್, ಸತು ಮತ್ತು ಸೆಲೆನಿಯಮ್ ಅನ್ನು ಹೊಂದಿರುತ್ತದೆ.

ಪೋಹಾ (ಅವಲಕ್ಕಿ): ಭಾರತದ ಪ್ರಸಿದ್ಧ ಉಪಹಾರಗಳಲ್ಲಿ ಅವಲಕ್ಕಿ ಒಂದಾಗಿದೆ. ಪೋಹಾವನ್ನು ಹೆಚ್ಚು ಪೌಷ್ಟಿಕ ಅಥವಾ ಆರೋಗ್ಯಕರವಾಗಿಸಲು ಕೆಲವು ತರಕಾರಿಗಳನ್ನು ಸೇರಿಸಬಹುದು. ಕಾರ್ಬೋಹೈಡ್ರೇಟ್‌ಗಳು, ಕಬ್ಬಿಣ, ಫೈಬರ್ ಅನ್ನು ಹೊಂದಿರುವ ಅವಲಕ್ಕಿ, ಉತ್ಕರ್ಷಣ ನಿರೋಧಕಗಳು ಮತ್ತು ಅಗತ್ಯವಾದ ಜೀವಸತ್ವಗಳ ಉತ್ತಮ ಮೂಲವಾಗಿದೆ.

ಮೂಂಗ್ ದಾಲ್ ಚೀಲ (ಹೆಸರು ಕಾಳಿನ ದೋಸೆ): ಭಾರತೀಯ ಖಾದ್ಯಗಳಲ್ಲಿ ಮೂಂಗ್ ದಾಲ್ ದೋಸೆ ಕೂಡ ಒಂದು. ಹೆಸರು ಕಾಲುಗಳು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಉತ್ತಮ ಪ್ರೋಟೀನ್ ಅಂಶವನ್ನು ಹೊಂದಿದೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್