Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair loss: ಬೋಳು ತಲೆ ಸಮಸ್ಯೆಗೆ ಈರುಳ್ಳಿಯನ್ನು ಹೀಗೆ ಬಳಸಿ, ಕೆಲವೇ ದಿನದಲ್ಲಿ ಫಲಿತಾಂಶ ಪಡೆಯುವಿರಿ

ಕೂದಲು ಅತಿಯಾಗಿ ಉದುರುತ್ತಿದೆ ಎಂಬ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ ಈರುಳ್ಳಿ ಈ ರೀತಿಯಾಗಿ ಬಳಸಿ. ಈರುಳ್ಳಿಯನ್ನು ಅಡುಗೆಯಲ್ಲಿ ಮಾತ್ರ ಬಳಸುವುದಲ್ಲದೇ ಕೂದಲಿಗೆ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ.

Hair loss: ಬೋಳು ತಲೆ ಸಮಸ್ಯೆಗೆ ಈರುಳ್ಳಿಯನ್ನು ಹೀಗೆ ಬಳಸಿ, ಕೆಲವೇ ದಿನದಲ್ಲಿ ಫಲಿತಾಂಶ ಪಡೆಯುವಿರಿ
Healthy HairImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Nov 26, 2023 | 4:55 PM

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಕೂದಲು ಉದುರುವಿಕೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ . ಹೆಚ್ಚುತ್ತಿರುವ ಮಾಲಿನ್ಯ, ಒತ್ತಡ, ಬದಲಾಗುತ್ತಿರುವ ಜೀವನಶೈಲಿ, ರಾಸಾಯನಿಕ ಉತ್ಪನ್ನಗಳ ಅತಿಯಾದ ಬಳಕೆಯಿಂದ ಜನರು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವರಿಗೆ ಕೂದಲು ಉದುರಿ ಬೋಳು ಬರುತ್ತದೆ. ಕೂದಲು ಆರೋಗ್ಯಕರವಾಗಿರಲು ಈರುಳ್ಳಿ ರಸ ಉಪಯುಕ್ತವಾಗಿದೆ. ಏಕೆಂದರೆ ಈರುಳ್ಳಿ ರಸವು ವಿಟಮಿನ್‌ಗಳನ್ನು ಹೊಂದಿದ್ದು, ನಿಮ್ಮ ಕೂದಲನ್ನು ಬಲವಾಗಿ ಮಾಡುವ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ.

ಈರುಳ್ಳಿ ರಸವು ಕೂದಲು ಉದುರುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಹೆಚ್ಚಿನವರಿಗೆ ಈ ಈರುಳ್ಳಿ ರಸವನ್ನು ಹೇಗೆ ಬಳಸಬೇಕು ಎಂದು ತಿಳಿದಿಲ್ಲ. ಆದ್ದರಿಂದ ಸರಿಯಾದ ಕ್ರಮದಲ್ಲಿ ಇರುಳ್ಳಿ ಬಳಸುವುದು ಅಗತ್ಯ. ಮೊದಲು ಈರುಳ್ಳಿ ತೆಗೆದುಕೊಂಡು ಸಿಪ್ಪೆ ತೆಗೆಯಿರಿ. ನಂತರ ಈರುಳ್ಳಿಯನ್ನು ಕತ್ತರಿಸಿ ಮಿಕ್ಸಿಯಲ್ಲಿ ರುಬ್ಬಿಕೊಂಡು ಪೇಸ್ಟ್ ಮಾಡಿಕೊಳ್ಳಿ. ನಂತರ ಈ ಪೇಸ್ಟ್ ಅನ್ನು ಸ್ವಚ್ಛವಾದ ಬಟ್ಟೆಗೆ ಸೇರಿಸಿ ಮತ್ತು ಅದನ್ನು ಚೆನ್ನಾಗಿ ಹಿಸುಕು ಹಾಕಿ. ಈಗ ಈರುಳ್ಳಿ ರಸ ತಯಾರಾಗಿದೆ.

ಹಾಗಾಗಿ ಈ ತಯಾರಿಸಿದ ಈರುಳ್ಳಿ ರಸವನ್ನು ಹತ್ತಿಯ ಸಹಾಯದಿಂದ ನಿಮ್ಮ ಕೂದಲಿನ ಬುಡಕ್ಕೆ ಹಚ್ಚಿಕೊಳ್ಳಿ. ನಂತರ ನೆತ್ತಿಯನ್ನು ನಿಧಾನವಾಗಿ ಮಸಾಜ್ ಮಾಡಿ. ನಂತರ ರಸವನ್ನು 15 ನಿಮಿಷಗಳ ಕಾಲ ಇರಿಸಿ ಮತ್ತು ನಂತರ ನಿಮ್ಮ ಕೂದಲನ್ನು ಶಾಂಪೂ ಬಳಸಿ ತೊಳೆಯಿರಿ. ಈ ರೀತಿಯಾಗಿ ನೀವು ವಾರಕ್ಕೆ ಮೂರರಿಂದ ನಾಲ್ಕು ಬಾರಿ ಈರುಳ್ಳಿ ರಸ ಹಚ್ಚಬೇಕು. ಇದು ನಿಮ್ಮ ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮತ್ತು ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಒಂದು ಬಿಳಿಕೂದಲು ಕಿತ್ತರೆ ಸುತ್ತಲಿನ ಕೂದಲು ಬಿಳಿಯಾಗುತ್ತಾ?

ಈರುಳ್ಳಿ ರಸವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು ಅದು ನೆತ್ತಿಯ ಎಲ್ಲಾ ಸೋಂಕುಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಅಲ್ಲದೆ, ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ತಲೆಹೊಟ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಈರುಳ್ಳಿ ರಸವನ್ನು ಕೂದಲಿಗೆ ಹಚ್ಚುವುದು ಪ್ರಯೋಜನಕಾರಿ. ಈರುಳ್ಳಿ ರಸದಿಂದ ತಲೆಗೆ ಮಸಾಜ್ ಮಾಡಿದರೆ ಕೂದಲು ವೇಗವಾಗಿ ಬೆಳೆಯುತ್ತದೆ. ಈರುಳ್ಳಿ ರಸವು ನಿಮ್ಮ ಕೂದಲು ಕಿರುಚೀಲಗಳಿಗೆ ಪೋಷಣೆ ನೀಡುವಲ್ಲಿ ಸಹಾಯ ಮಾಡುತ್ತದೆ.

ಈರುಳ್ಳಿ ರಸಕ್ಕೆ 2 ಚಮಚ ತೆಂಗಿನೆಣ್ಣೆ ಬೆರೆಸಿ ಹಚ್ಚಿದರೆ ಕೂದಲಿಗೆ ಹೆಚ್ಚು ಪ್ರಯೋಜನಕಾರಿ. ಏಕೆಂದರೆ ತೆಂಗಿನ ಎಣ್ಣೆಯು ಆಂಟಿಫಂಗಲ್ ಗುಣಗಳನ್ನು ಹೊಂದಿದ್ದು ಅದು ನೆತ್ತಿಯ ಸೋಂಕು ಮತ್ತು ತಲೆಹೊಟ್ಟು ವಿರುದ್ಧ ರಕ್ಷಿಸುತ್ತದೆ. ಅಲ್ಲದೆ, ನಿಮ್ಮ ಕೂದಲು ಆರೋಗ್ಯಕರವಾಗಿರುತ್ತದೆ. ಆದ್ದರಿಂದ ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆಯ ಮಿಶ್ರಣವನ್ನು ನಿಮ್ಮ ತಲೆಗೆ ಹಚ್ಚಿ ಅರ್ಧ ಗಂಟೆಯ ನಂತರ ತೊಳೆಯಿರಿ. ಇದು ನಿಮ್ಮ ಕೂದಲನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ