AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳಸಿದ ಬಾಟಲ್​ನಲ್ಲಿ ಅಂಟಿಕೊಂಡಿರುತ್ತವೆ ಸೂಕ್ಷ್ಮಜೀವಿಗಳು: ಈ ವಿಧಾನದ ಮೂಲಕ ಶುಚಿಗೊಳಿಸಿ

ಅನೇಕ ಜನರು ಬಾಟಲಿಯ ನೀರನ್ನು ತುಂಬಿರುತ್ತಾರೆ, ಆದರೆ ಬಾಟಲಿಯನ್ನು ಸರಿಯಾದ ಕ್ರಮದಲ್ಲಿ ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದು ಮತ್ತೆ ನೀವು ಅದೇ ಬಾಟಲಿಗೆ ನೀರನ್ನು ತುಂಬಿಸಿದಾಗ ಆ ನೀರು ಕಲುಷಿತವಾಗುತ್ತದೆ ಎಂಬುದು ತಿಳಿದಿರಲಿ.

ಬಳಸಿದ ಬಾಟಲ್​ನಲ್ಲಿ ಅಂಟಿಕೊಂಡಿರುತ್ತವೆ ಸೂಕ್ಷ್ಮಜೀವಿಗಳು: ಈ ವಿಧಾನದ ಮೂಲಕ ಶುಚಿಗೊಳಿಸಿ
ಕುಡಿಯುವ ನೀರಿನ ಬಾಟಲಿಯನ್ನು ಶುಚಿಗೊಳಿಸುವ ಸುಲಭ ವಿಧಾನಗಳು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 18, 2022 | 7:33 AM

Share

ಅನೇಕ ಜನರು ನೀರು ಕುಡಿಯಲು ಬಾಟಲಿಯನ್ನು ಬಳಸುತ್ತಾರೆ. ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾದರೆ ಕೇವಲ ಶುದ್ಧ ನೀರು ಕುಡಿದರೆ ಸಾಕಾಗುವುದಿಲ್ಲ, ನಿಮ್ಮ ನೀರಿನ ಬಾಟಲಿಯನ್ನೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರಿನ ಬಾಟಲಿಯನ್ನು ಸ್ವಚ್ಛವಾಗಿ ಮತ್ತು ರೋಗಾಣು ಮುಕ್ತವಾಗಿಡುವುದು ತುಂಬಾ ಕಷ್ಟದ ಕೆಲಸ. ಅನೇಕ ಜನರು ಬಾಟಲಿಯ ನೀರನ್ನು ತುಂಬಿರುತ್ತಾರೆ, ಆದರೆ ಬಾಟಲಿಯನ್ನು ಸರಿಯಾದ ಕ್ರಮದಲ್ಲಿ ಸ್ವಚ್ಛಗೊಳಿಸಲು ಮರೆತುಬಿಡುತ್ತಾರೆ. ಇದು ಮತ್ತೆ ನೀವು ಅದೇ ಬಾಟಲಿಗೆ ನೀರನ್ನು ತುಂಬಿಸಿದಾಗ ನೀರು ಕಲುಷಿತಗೊಳ್ಳುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ನೀರಿನ ಬಾಟಲಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹೇಗೆ ಎಂದು ತಿಳಿಯೋಣ.

ಲಿಕ್ವಿಡ್ ಡಿಶ್ ಸೋಪ್

ನೀರಿನ ಬಾಟಲಿಯನ್ನು ಸ್ವಚ್ಛಗೊಳಿಸಲು ನೀವು ಲಿಕ್ವಿಡ್ ಡಿಶ್ ಸೋಪ್ ಅನ್ನು ಬಳಸಬಹುದು. ಅದಕ್ಕಾಗಿ ಬಾಣಲೆ ಅಥವಾ ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಬಿಸಿ ಮಾಡಿ. ಇದಕ್ಕೆ 1-2 ಚಮಚ ದ್ರವ ಸೋಪ್ ಸೇರಿಸಿ. ನಂತರ ಅದಕ್ಕೆ ಒಂದು ಬಾಟಲ್ ನೀರನ್ನು ಸೇರಿಸಿ ರಾತ್ರಿಯಿಡೀ ಇಡಿ. ಬೆಳಿಗ್ಗೆ ಸರಳ ನೀರಿನಲ್ಲಿ ಬಾಟಲಿಯನ್ನು ತೊಳೆಯಿರಿ.

ನಿಂಬೆ ಮತ್ತು ಉಪ್ಪು

ನೀರಿನ ಬಾಟಲಿಯನ್ನು ಸ್ವಚ್ಛಗೊಳಿಸಲು ನಿಂಬೆ, ಉಪ್ಪು ಮತ್ತು ಐಸ್ ಅನ್ನು ಬಳಸುವುದು ಉತ್ತಮ ಆಯ್ಕೆಯಾಗಿದೆ. ಇದಕ್ಕಾಗಿ ನೀರಿನ ಬಾಟಲಿಯಲ್ಲಿ 1 ಕಪ್ ನೀರನ್ನು ಸೇರಿಸಿ. ನಂತರ ಆ ಬಾಟಲಿಗೆ ನಿಂಬೆ ರಸ, ಉಪ್ಪು ಮತ್ತು ಐಸ್ ಸೇರಿಸಿ. ಈ ಎಲ್ಲಾ ವಸ್ತುಗಳನ್ನು ಬಲವಾಗಿ ಶೇಕ್ ಮಾಡಿ. ಬಳಿಕ ಬಾಟಲಿಯನ್ನು ನೀರಿನಿಂದ ತೊಳೆಯಿರಿ.

ಅಡುಗೆ ಸೋಡಾ ಮತ್ತು ವಿನೆಗರ್

ಅಡುಗೆ ಸೋಡಾ ಮತ್ತು ವಿನೆಗರ್ ನೀರಿನ ಬಾಟಲಿಯನ್ನು ಸ್ವಚ್ಛವಾಗಿಡಲು ಸಹಾಯಕವಾಗಿದೆ. ಇದಕ್ಕಾಗಿ ಒಂದು ಬಾಟಲಿಯಲ್ಲಿ 1 ಚಮಚ ಅಡಿಗೆ ಸೋಡಾ ಮತ್ತು 2 ಚಮಚ ವಿನೆಗರ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಸ್ವಲ್ಪ ಸಮಯದವರೆಗೆ ಇರಿಸಿ. ನಂತರ ಬಾಟಲಿಯನ್ನು ಸರಳ ನೀರಿನಿಂದ ತೊಳೆಯಿರಿ. ಇದು ನಿಮ್ಮ ನೀರಿನ ಬಾಟಲಿಯನ್ನು ಹೊಳೆಯುವಂತೆ ಮಾಡಲಿದೆ.

ಮತ್ತಷ್ಟು ಲೈಫ್​ಸ್ಟೈಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು