AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy Lifestyle: ಬೇಸಿಗೆಯಲ್ಲಿ ನಿಮ್ಮ ಆಹಾರಕ್ರಮ ಹೀಗಿದ್ದರೆ ನೀವೇ ಆರೋಗ್ಯವಂತರು

ಫೆಬ್ರವರಿ ತಿಂಗಳ ಕೊನೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಹೀಗೆ ಮುಂದುವರೆದರೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ಈ ಸುಡು ಬಿಸಿಲು ಹೆಚ್ಚಳವಾಗುವ ಸಾಧ್ಯತೆಯೇ ಹೆಚ್ಚು. ಉರಿ ಬಿಸಿಲು ಹಾಗೂ ಸೆಕೆಯನ್ನು ತಾಳಲಾರದೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಈ ಸಮಯದಲ್ಲಿ ನೀರು ಹೆಚ್ಚಾಗಿ ಸೇವಿಸುವ ಜೊತೆಗೆ ಆಹಾರ ಪದಾರ್ಥಗಳ ಬಗ್ಗೆ ಗಮನ ಕೊಡುವುದು ಬಹಳ ಮುಖ್ಯ. ಬೇಸಿಗೆಯ ಸಮಯದಲ್ಲಿ ನಿಮ್ಮ ಆಹಾರ ಕ್ರಮವು ಹೀಗಿದ್ದರೆ ಆರೋಗ್ಯಯುತವಾಗಿರಬಹುದು.

Healthy Lifestyle: ಬೇಸಿಗೆಯಲ್ಲಿ ನಿಮ್ಮ ಆಹಾರಕ್ರಮ ಹೀಗಿದ್ದರೆ ನೀವೇ ಆರೋಗ್ಯವಂತರು
Healthy LifestyleImage Credit source: Pinterest
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Feb 21, 2024 | 7:30 PM

Share

ಬೇಸಿಗೆ ಇನ್ನು ಆರಂಭವಾಗಿಲ್ಲ. ಆದರೆ ಸೂರ್ಯನು ತನ್ನ ಪ್ರಖರತೆಯನ್ನು ತೋರಿಸುತ್ತಿದ್ದಾನೆ. ಬೆಳಗ್ಗೆ ಎಂಟು ಗಂಟೆಯ ಬಳಿಕ ಹೊರಗೆ ಹೋಗುವುದೇ ಬೇಡ ಎನ್ನುವಷ್ಟರ ಮಟ್ಟಿಗೆ ಬಿಸಿಲು ನೆತ್ತಿಯನ್ನು ಸುಡುತ್ತದೆ. ಈ ಸಮಯದಲ್ಲಿ ಆರೋಗ್ಯವು ಕೈ ಕೊಡುವುದು ಸಹಜ. ಸಿಕ್ಕ ಸಿಕ್ಕ ಆಹಾರಗಳನ್ನು ಸೇವಿಸಿದರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಟ್ಟಂತೆ ಆಗುತ್ತದೆ, ಹೀಗಾಗಿ ದೇಹವನ್ನು ತಂಪಾಗಿಸಿರುವುದು ಮುಖ್ಯ. ಈ ಸಮಯದಲ್ಲಿ ದೇಹಕ್ಕೆ ನೀರಿನ ಅಂಶ ಹೆಚ್ಚಿರುವ ಆಹಾರಗಳು ಅಗತ್ಯವಾಗಿ ಬೇಕಾಗುತ್ತದೆ.

  1. ನೀರು ಕುಡಿಯಿರಿ : ಬೇಸಿಗೆಯಲ್ಲಿ ಬಿಸಿಲಿನ ಝಳವನ್ನು ಸಹಿಸಿಕೊಳ್ಳುವುದು ಕಷ್ಟ. ಹೊರಗಡೆ ಸುತ್ತಾಡಿಕೊಂಡು ಬಂದರೆ ಸಾಕು ಬಾಯಾರಿಕೆಯಾಗುತ್ತದೆ. ಬಿಸಿಲಿನ ತಾಪಕ್ಕೆ ದೇಹವು ನೀರು ಬೇಕಾಗುತ್ತದೆ. ಈ ಸಮಯದಲ್ಲಿ ತಣ್ಣನೆಯ ನೀರು ಅಥವಾ ತಂಪು ಪಾನೀಯಗಳನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
  2. ಟೊಮೆಟೊ : ವಿಟಮಿನ್ ಸಿ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿರುವ ಈ ಟೊಮೊಟೊ ಬೇಸಿಗೆಗಾಲಕ್ಕೆ ಉತ್ತಮ ಆಹಾರವಾಗಿದೆ. ನಿಯಮಿತವಾಗಿ ಸೇವಿಸುವುದರಿಂದ ಅನಾರೋಗ್ಯ ಸಮಸ್ಯೆಯಿಂದ ದೂರವಿಡುತ್ತದೆ.
  3. ಕಲ್ಲಂಗಡಿ : ಇದು ಬೇಸಿಗೆ ಕಾಲದಲ್ಲಿ ಹೆಚ್ಚು ಜನರು ಸೇವಿಸುವ ಹಣ್ಣುಗಳಲ್ಲಿ ಒಂದು. ನೀರಿನ ಅಂಶ ಹೆಚ್ಚಾಗಿರುವ ಕಾರಣ ನಿರ್ಜಲೀಕರಣವನ್ನು ಕಡಿಮೆ ಮಾಡುತ್ತದೆ. ಚರ್ಮ ಸಂಬಂಧಿ ರೋಗಗಳನ್ನೂ ದೂರ ಮಾಡಿ ನಿಮ್ಮನ್ನು ಸದಾ ಲವಲವಿಕೆಯಿಂದ ಇರುವಂತೆ ಮಾಡುತ್ತದೆ.
  4. ಕಿತ್ತಳೆ : ಕಿತ್ತಳೆಹಣ್ಣಿನಲ್ಲಿ ಸಿಹಿ ಸಿಟ್ರಸ್ ಪೊಟ್ಯಾಸಿಯಮ್ ಸಮೃದ್ಧವಾಗಿದ್ದು ನೀರಿನ ಪ್ರಮಾಣವು ಹೇರಳವಾಗಿದೆ. ಇದು ದೇಹದಲ್ಲಿನ ನಿರ್ಜಲೀಕರಣ ನಿವಾರಣೆ ಮಾಡಿ ಅನಾರೋಗ್ಯ ಸಮಸ್ಯೆಯಿಂದ ಕಾಪಾಡುತ್ತದೆ.
  5.  ಮೊಸರು : ದೇಹವನ್ನು ತಂಪಾಗಿರಿಸಲು ಬೇಸಿಗೆಯ ಉತ್ತಮ ಆಹಾರ ಪದಾರ್ಥಗಳಲ್ಲಿ ಮೊಸರು ಕೂಡ ಒಂದು. ಹೆಚ್ಚಿನವರು ಮಧ್ಯಾಹ್ನದ ಊಟಕ್ಕೆ ಮೊಸರನ್ನು ಸೇವಿಸುತ್ತಾರೆ. ಇದು ದೇಹದ ಉಷ್ಟಾಂಶ ಸಮತೋಲನದಲ್ಲಿರಿಸಲು ಸಹಾಯಕವಾಗಿದೆ.
  6. ಎಳ ನೀರು : ಬಿಸಿಲಿನ ಝಳ ತಾಳಲಾರದೆ ತಂಪು ಪಾನೀಯವನ್ನು ಹೆಚ್ಚು ಸೇವಿಸಲು ಇಷ್ಟ ಪಡುತ್ತಾರೆ. ಆದರೆ ರಾಸಾಯನಿಕಗಳಿಂದ ಕೂಡಿದ ತಂಪು ಪಾನೀಯಗಳಿಗಿಂತ ಈ ಎಳನೀರನ್ನು ಕುಡಿಯುವುದರಿಂದ ಆರೋಗ್ಯವನ್ನು ಕಾಪಾಡಬಹುದು.
  7. ಪುದೀನಾ : ದೇಹವನ್ನು ತಂಪಾಗಿಸುವ ಮತ್ತು ರಿಫ್ರೆಶ್ ಮಾಡುವ ಗುಣಗಳನ್ನು ಹೊಂದಿರುವ ಪುದೀನಾ ಬೇಸಿಗೆಯ ಹೇಳಿ ಮಾಡಿಸಿದ ಆಹಾರವಾಗಿದೆ. ಪುದೀನಾ ನಿಂಬು ಜ್ಯೂಸ್ ಅಥವಾ ಪುದೀನಾ ಚಹಾವನ್ನು ಮಾಡಿ ತಣ್ಣಗಾದ ಬಳಿಕ ಕುಡಿಯುವುದರಿಂದ ಆರೋಗ್ಯ ಲಾಭವನ್ನು ಪಡೆಯಬಹುದು.
  8. ಹಸಿರು ತರಕಾರಿ : ಹಸಿರು ತರಕಾರಿಗಳು ದೇಹಕ್ಕೆ ಅಗತ್ಯವಾಗಿ ಬೇಕು. ಬೇಸಿಗೆಯಲ್ಲಿ ಇದರ ನಿಯಮಿತ ಸೇವನೆಯಿಂದ ಆರೋಗ್ಯಯುತರಾಗಿರಬಹುದು. ಮೂಲಂಗಿ, ಕ್ಯಾರೆಟ್, ಸೌತೆಕಾಯಿ ಇನ್ನಿತ್ತರ ತರಕಾರಿಗಳನ್ನು ಸೇರಿಸಿ ಸಲಾಡ್ ತಯಾರಿಸಿ ಸೇವಿಸಿದರೆ ದೇಹವನ್ನು ತಂಪಾಗಿರಿಸಬಹುದು. ಅದಲ್ಲದೇ ದೇಹದ ನಿರ್ಜಲೀಕರಣವನ್ನು ಕಡಿಮೆ ಮಾಡುವ ಶಕ್ತಿ ಈ ಆಹಾರಕ್ಕಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ