AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health benefits of Buttermilk: ಶಾಖದ ಅಲೆ ಹೆಚ್ಚಾಗುತ್ತಿದೆ, ಮಜ್ಜಿಗೆ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ

ಬೇಸಿಗೆ ದಿನಗಳಲ್ಲಿ ಹಾಗೂ ಇತರ ದಿನಗಳಲ್ಲಿ ಎಲ್ಲ ಮನೆಯ ತಾಯಂದಿರು ಮಕ್ಕಳಿಗೆ, ಯುವಕರಿಗೆ ಮಜ್ಜಿಗೆ ಕುಡಿಯಿರಿ ಎಂದು ಹೇಳುವುದು ಮಲೆನಾಡಿನಲ್ಲಿ ತೀರ ಸಾಮಾನ್ಯ. ಆದರೆ ಈ ತಾಯಂದಿರು ಹೇಳಿದಂತೆ ಮಜ್ಜಿಗೆಯನ್ನು ಸೇವಿಸುವವರು ಹತ್ತರಲ್ಲಿ ಒಬ್ಬರು ಇಬ್ಬರು.

Health benefits of Buttermilk: ಶಾಖದ ಅಲೆ ಹೆಚ್ಚಾಗುತ್ತಿದೆ, ಮಜ್ಜಿಗೆ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ
ಡಾ ರವಿಕಿರಣ ಪಟವರ್ಧನ ಶಿರಸಿ.
ಅಕ್ಷತಾ ವರ್ಕಾಡಿ
|

Updated on: Mar 06, 2023 | 6:30 AM

Share

ಬೇಸಿಗೆ ದಿನಗಳಲ್ಲಿ ಹಾಗೂ ಇತರ ದಿನಗಳಲ್ಲಿ ಎಲ್ಲ ಮನೆಯ ತಾಯಂದಿರು ಮಕ್ಕಳಿಗೆ, ಯುವಕರಿಗೆ ಮಜ್ಜಿಗೆ ಕುಡಿಯಿರಿ ಎಂದು ಹೇಳುವುದು ಮಲೆನಾಡಿನಲ್ಲಿ ತೀರ ಸಾಮಾನ್ಯ. ಆದರೆ ಈ ತಾಯಂದಿರು ಹೇಳಿದಂತೆ ಮಜ್ಜಿಗೆಯನ್ನು ಸೇವಿಸುವವರು ಹತ್ತರಲ್ಲಿ ಒಬ್ಬರು ಇಬ್ಬರು ಇನ್ನು ಎಂಟು ಜನರು ಇದಕ್ಕೆ ನಕಾರಾತ್ಮಕ ಭಾವನೆಯನ್ನು ತೋರಿಸುತ್ತ ಮೂಗು ಮುರಿಯುವವರು ಯುವಜನರೇ. ಏರಿಯೆಟೆಡ್ ತಂಪು ಪಾನೀಯ, ಇತರ ತಂಪು ಪಾನೀಯ, ಪುಡಿ ಹಾಕಿ ತಯಾರು ಮಾಡುವ ತಂಪು ಗಳಿಗೆ ಹೇಳುವ ಮೊದಲೇ ಅಡ್ಡಿ ಇಲ್ಲ ಹೇಳುವಂತ ಒಂದು ಮಾನಸಿಕತೆ ಈಗ ಎಲ್ಲರ ಮನದಲ್ಲಿ. ಇವುಗಳು ಆರೋಗ್ಯಕರ ಲಾಭವನ್ನು ನೀಡದೆ ಅನಾರೋಗ್ಯವನ್ನು ಉಂಟುಮಾಡುವಂತಹ ಎಲ್ಲ ಅವಕಾಶಗಳನ್ನು ಭರಪೂರದಲ್ಲಿ ಒದಗಿಸುತ್ತವೆ.

ಎಲ್ಲ ಯುವ ಜನತೆ ಚರ್ಮ ,ಕೇಶ, ಮುಖದ ಸೌಂದರ್ಯದ ಕಡೆಗೆ ಹೆಚ್ಚಿನ ಒಲವು. ಆದರೆ ಇವುಗಳ ಆರೋಗ್ಯ ಕಾಪಾಡುವಲ್ಲಿ ಮಜ್ಜಿಗೆ ಮಹತ್ತರ ಪಾತ್ರವನ್ನು ವಹಿಸುತ್ತದೆ ,ಮಜ್ಜಿಗೆಯಲ್ಲಿರುವ ಲ್ಯಾಕ್ಟಿಕ್ ಆಮ್ಲವು ನಿಮ್ಮ ಚರ್ಮಕ್ಕೆ ಒಳ್ಳೆಯದು. ಮಜ್ಜಿಗೆ ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ ಮತ್ತು ಅತ್ಯುತ್ತಮ ಸ್ಕಿನ್ ಕ್ಲೆನ್ಸರ್ ಮತ್ತು ಟೋನರ್ ಆಗಿದೆ. ಇದು ಟ್ಯಾನ್, ಮೊಡವೆ ಕಲೆಗಳು ಮತ್ತು ಕಲೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ನಿಮ್ಮ ಚರ್ಮವನ್ನು ತೇವಗೊಳಿಸುತ್ತದೆ ಮತ್ತು ಹೊಳಪು ನೀಡುತ್ತದೆ, ವಯಸ್ಸಾಗುವುದನ್ನು ವಿಳಂಬಗೊಳಿಸುತ್ತದೆ. ಇಂತಹ ಇವತ್ತಿನ ತೊಂದರೆಯ ವಿದ್ಯಮಾನಗಳಿಂದ ದೂರ ಮಾಡುವ ಗುಣವನ್ನು ಹೊಂದಿರುವಂತಹ ಮಜ್ಜಿಗೆಯನ್ನು ಅಮೃತ ಸಮಾನ ಎಂದು ಕರೆದಿರುತ್ತಾರೆ.

ಇದನ್ನೂ ಓದಿ: ದಿನಕ್ಕೆ 3 ದಾಳಿಂಬೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ

ಮಜ್ಜಿಗೆ ಒಂದು ಅತ್ಯುತ್ತಮ ಜಲಸಂಚಯನ ಪಾನೀಯವಾಗಿದ್ದು ಅದು ದೇಹದಲ್ಲಿ ನೀರಿನ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಬೆವರುವಿಕೆಯಿಂದ ಕಳೆದುಹೋದ ಎಲೆಕ್ಟ್ರೋಲೈಟ್‌ಗಳನ್ನು ಬದಲಾಯಿಸುತ್ತದೆ ಮತ್ತು ನಿರ್ಜಲೀಕರಣವನ್ನು ತಡೆಯುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಜ್ಜಿಗೆ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಪರಿಣಾಮವಾಗಿ ಹೆಚ್ಚಿದ ರೋಗನಿರೋಧಕ ಶಕ್ತಿಗೆ ಕಾರಣವಾಗುತ್ತದೆ. ಇದು ನಿಯಮಿತ ಕರುಳಿನ ಚಲನೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಡಾ ರವಿಕಿರಣ ಪಟವರ್ಧನ ಶಿರಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌