AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡಲು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ
ಪುದೀನಾ ಮೊಸರು ಬಜ್ಜಿ
TV9 Web
| Edited By: |

Updated on: Feb 25, 2023 | 7:30 AM

Share

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡುವುದು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇದಲ್ಲದೇ ಮಧ್ಯಾಹ್ನದ ಊಟಕ್ಕೆ ನೀವು ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾದ ಆಹಾರವನ್ನು ಹುಡುಕುತ್ತಿದ್ದರೆ ಕೇವಲ ಕೆಲವೇ ವಸ್ತುಗಳನ್ನು ಉಪಯೋಗಿಸಿ ನೀವು ಮೊಸರು ಬಜ್ಜಿ ತಯಾರಿಸಬಹುದು. ಇದರಲ್ಲಿ ಮೊಸರು, ಪುದೀನಾ ಹಾಗೂ ಕೆಲವು ಹಸಿ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಪುದೀನಾ ಮೊಸರು ಬಜ್ಜಿ ಮಾಡುವುದು ಹೇಗೆ?

ಬೇಕಾಗುವ ಪದಾರ್ಥಗಳು:

  • 2 ಕಪ್ ಮೊಸರು
  • 3 ಹಸಿ ಮೆಣಸಿನಕಾಯಿ
  • 1/2 ಕಪ್ ತುರಿದ ಸೌತೆಕಾಯಿ
  • ಅಗತ್ಯವಿರುವಂತೆ ಕೆಂಪು ಮೆಣಸಿನ ಪುಡಿ
  • 1 ಟೀಚಮಚ ಜೀರಿಗೆ ಪುಡಿ
  • 3/4 ಕಪ್ ಪುದೀನ ಸೊಪ್ಪು
  • 1/4 ಕಪ್ ಈರುಳ್ಳಿ
  • ರುಚಿಕೆ ತಕ್ಕಷ್ಟು ಉಪ್ಪು
  • 1/4 ಟೀಸ್ಪೂನ್ ಸಕ್ಕರೆ

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಪುದೀನಾ ಮೊಸರು ಬಜ್ಜಿ ಮಾಡುವ ವಿಧಾನ:

ಹಂತ 1:

ಪುದೀನಾ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ಹೊತ್ತು ಹಾಗೆಯೇ ಇಡಿ. ಈ ಹೊತ್ತಿಗೆ ಸೌತೆಕಾಯಿ ಮತ್ತು ಈರುಳ್ಳಿ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿ.

ಹಂತ 2:

ಬ್ಲೆಂಡರ್ ತೆಗೆದುಕೊಂಡು ಅದಕ್ಕೆ ಈಗಾಗಲೇ ತೊಳೆದಿಟ್ಟ ಪುದೀನಾ ಸೊಪ್ಪನ್ನು ಹಾಕಿ. ಇದರೊಂದಿಗೆ ಹಸಿ ಮೆಣಸಿನಕಾಯಿ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ಈಗ ಇದನ್ನು ಒಂದು ಚಿಕ್ಕ ಪಾತ್ರೆಗೆ ಹಾಕಿ ಮತ್ತು ಇದಕ್ಕೆ ಕತ್ತರಿಸಿದ ಈರುಳ್ಳಿ ಮತ್ತು ತುರಿದ ಸೌತೆಕಾಯಿಯನ್ನು ಸೇರಿಸಿ.

ಹಂತ 3:

ಕೊನೆಯದಾಗಿ, ಸ್ವಲ್ಪ ಜೀರಿಗೆ ಪುಡಿ, ಉಪ್ಪು ಮತ್ತು ಮೆಣಸಿನ ಪುಡಿಯನ್ನು ಸಿಂಪಡಿಸಿ. ನಂತರ ಪುದೀನ ಎಲೆಗಳಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?