AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡಲು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ
ಪುದೀನಾ ಮೊಸರು ಬಜ್ಜಿ
TV9 Web
| Updated By: ಅಕ್ಷತಾ ವರ್ಕಾಡಿ

Updated on: Feb 25, 2023 | 7:30 AM

Share

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡುವುದು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇದಲ್ಲದೇ ಮಧ್ಯಾಹ್ನದ ಊಟಕ್ಕೆ ನೀವು ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾದ ಆಹಾರವನ್ನು ಹುಡುಕುತ್ತಿದ್ದರೆ ಕೇವಲ ಕೆಲವೇ ವಸ್ತುಗಳನ್ನು ಉಪಯೋಗಿಸಿ ನೀವು ಮೊಸರು ಬಜ್ಜಿ ತಯಾರಿಸಬಹುದು. ಇದರಲ್ಲಿ ಮೊಸರು, ಪುದೀನಾ ಹಾಗೂ ಕೆಲವು ಹಸಿ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಪುದೀನಾ ಮೊಸರು ಬಜ್ಜಿ ಮಾಡುವುದು ಹೇಗೆ?

ಬೇಕಾಗುವ ಪದಾರ್ಥಗಳು:

  • 2 ಕಪ್ ಮೊಸರು
  • 3 ಹಸಿ ಮೆಣಸಿನಕಾಯಿ
  • 1/2 ಕಪ್ ತುರಿದ ಸೌತೆಕಾಯಿ
  • ಅಗತ್ಯವಿರುವಂತೆ ಕೆಂಪು ಮೆಣಸಿನ ಪುಡಿ
  • 1 ಟೀಚಮಚ ಜೀರಿಗೆ ಪುಡಿ
  • 3/4 ಕಪ್ ಪುದೀನ ಸೊಪ್ಪು
  • 1/4 ಕಪ್ ಈರುಳ್ಳಿ
  • ರುಚಿಕೆ ತಕ್ಕಷ್ಟು ಉಪ್ಪು
  • 1/4 ಟೀಸ್ಪೂನ್ ಸಕ್ಕರೆ

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಪುದೀನಾ ಮೊಸರು ಬಜ್ಜಿ ಮಾಡುವ ವಿಧಾನ:

ಹಂತ 1:

ಪುದೀನಾ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ಹೊತ್ತು ಹಾಗೆಯೇ ಇಡಿ. ಈ ಹೊತ್ತಿಗೆ ಸೌತೆಕಾಯಿ ಮತ್ತು ಈರುಳ್ಳಿ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿ.

ಹಂತ 2:

ಬ್ಲೆಂಡರ್ ತೆಗೆದುಕೊಂಡು ಅದಕ್ಕೆ ಈಗಾಗಲೇ ತೊಳೆದಿಟ್ಟ ಪುದೀನಾ ಸೊಪ್ಪನ್ನು ಹಾಕಿ. ಇದರೊಂದಿಗೆ ಹಸಿ ಮೆಣಸಿನಕಾಯಿ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ಈಗ ಇದನ್ನು ಒಂದು ಚಿಕ್ಕ ಪಾತ್ರೆಗೆ ಹಾಕಿ ಮತ್ತು ಇದಕ್ಕೆ ಕತ್ತರಿಸಿದ ಈರುಳ್ಳಿ ಮತ್ತು ತುರಿದ ಸೌತೆಕಾಯಿಯನ್ನು ಸೇರಿಸಿ.

ಹಂತ 3:

ಕೊನೆಯದಾಗಿ, ಸ್ವಲ್ಪ ಜೀರಿಗೆ ಪುಡಿ, ಉಪ್ಪು ಮತ್ತು ಮೆಣಸಿನ ಪುಡಿಯನ್ನು ಸಿಂಪಡಿಸಿ. ನಂತರ ಪುದೀನ ಎಲೆಗಳಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು