AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡಲು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ
ಪುದೀನಾ ಮೊಸರು ಬಜ್ಜಿ
TV9 Web
| Edited By: |

Updated on: Feb 25, 2023 | 7:30 AM

Share

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡುವುದು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇದಲ್ಲದೇ ಮಧ್ಯಾಹ್ನದ ಊಟಕ್ಕೆ ನೀವು ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾದ ಆಹಾರವನ್ನು ಹುಡುಕುತ್ತಿದ್ದರೆ ಕೇವಲ ಕೆಲವೇ ವಸ್ತುಗಳನ್ನು ಉಪಯೋಗಿಸಿ ನೀವು ಮೊಸರು ಬಜ್ಜಿ ತಯಾರಿಸಬಹುದು. ಇದರಲ್ಲಿ ಮೊಸರು, ಪುದೀನಾ ಹಾಗೂ ಕೆಲವು ಹಸಿ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಪುದೀನಾ ಮೊಸರು ಬಜ್ಜಿ ಮಾಡುವುದು ಹೇಗೆ?

ಬೇಕಾಗುವ ಪದಾರ್ಥಗಳು:

  • 2 ಕಪ್ ಮೊಸರು
  • 3 ಹಸಿ ಮೆಣಸಿನಕಾಯಿ
  • 1/2 ಕಪ್ ತುರಿದ ಸೌತೆಕಾಯಿ
  • ಅಗತ್ಯವಿರುವಂತೆ ಕೆಂಪು ಮೆಣಸಿನ ಪುಡಿ
  • 1 ಟೀಚಮಚ ಜೀರಿಗೆ ಪುಡಿ
  • 3/4 ಕಪ್ ಪುದೀನ ಸೊಪ್ಪು
  • 1/4 ಕಪ್ ಈರುಳ್ಳಿ
  • ರುಚಿಕೆ ತಕ್ಕಷ್ಟು ಉಪ್ಪು
  • 1/4 ಟೀಸ್ಪೂನ್ ಸಕ್ಕರೆ

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಪುದೀನಾ ಮೊಸರು ಬಜ್ಜಿ ಮಾಡುವ ವಿಧಾನ:

ಹಂತ 1:

ಪುದೀನಾ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ಹೊತ್ತು ಹಾಗೆಯೇ ಇಡಿ. ಈ ಹೊತ್ತಿಗೆ ಸೌತೆಕಾಯಿ ಮತ್ತು ಈರುಳ್ಳಿ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿ.

ಹಂತ 2:

ಬ್ಲೆಂಡರ್ ತೆಗೆದುಕೊಂಡು ಅದಕ್ಕೆ ಈಗಾಗಲೇ ತೊಳೆದಿಟ್ಟ ಪುದೀನಾ ಸೊಪ್ಪನ್ನು ಹಾಕಿ. ಇದರೊಂದಿಗೆ ಹಸಿ ಮೆಣಸಿನಕಾಯಿ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ಈಗ ಇದನ್ನು ಒಂದು ಚಿಕ್ಕ ಪಾತ್ರೆಗೆ ಹಾಕಿ ಮತ್ತು ಇದಕ್ಕೆ ಕತ್ತರಿಸಿದ ಈರುಳ್ಳಿ ಮತ್ತು ತುರಿದ ಸೌತೆಕಾಯಿಯನ್ನು ಸೇರಿಸಿ.

ಹಂತ 3:

ಕೊನೆಯದಾಗಿ, ಸ್ವಲ್ಪ ಜೀರಿಗೆ ಪುಡಿ, ಉಪ್ಪು ಮತ್ತು ಮೆಣಸಿನ ಪುಡಿಯನ್ನು ಸಿಂಪಡಿಸಿ. ನಂತರ ಪುದೀನ ಎಲೆಗಳಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!