AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡಲು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ, ರೆಸಿಪಿ ಇಲ್ಲಿದೆ
ಪುದೀನಾ ಮೊಸರು ಬಜ್ಜಿ
TV9 Web
| Edited By: |

Updated on: Feb 25, 2023 | 7:30 AM

Share

ಈ ಉರಿ ಬಿಸಿಲಿನಲ್ಲಿ ನಿಮ್ಮ ದೇಹವನ್ನು ತಂಪಾಗಿಡುವುದು ಈ ಪುದೀನಾ ಬಳಸಿ ಮೊಸರು ಬಜ್ಜಿ ತಯಾರಿಸಿ. ಇದು ದೇಹವನ್ನು ತಂಪಾಗಿಡುವುದರ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಇದಲ್ಲದೇ ಮಧ್ಯಾಹ್ನದ ಊಟಕ್ಕೆ ನೀವು ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾದ ಆಹಾರವನ್ನು ಹುಡುಕುತ್ತಿದ್ದರೆ ಕೇವಲ ಕೆಲವೇ ವಸ್ತುಗಳನ್ನು ಉಪಯೋಗಿಸಿ ನೀವು ಮೊಸರು ಬಜ್ಜಿ ತಯಾರಿಸಬಹುದು. ಇದರಲ್ಲಿ ಮೊಸರು, ಪುದೀನಾ ಹಾಗೂ ಕೆಲವು ಹಸಿ ತರಕಾರಿಗಳನ್ನು ಬಳಸುವುದರಿಂದ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.

ಪುದೀನಾ ಮೊಸರು ಬಜ್ಜಿ ಮಾಡುವುದು ಹೇಗೆ?

ಬೇಕಾಗುವ ಪದಾರ್ಥಗಳು:

  • 2 ಕಪ್ ಮೊಸರು
  • 3 ಹಸಿ ಮೆಣಸಿನಕಾಯಿ
  • 1/2 ಕಪ್ ತುರಿದ ಸೌತೆಕಾಯಿ
  • ಅಗತ್ಯವಿರುವಂತೆ ಕೆಂಪು ಮೆಣಸಿನ ಪುಡಿ
  • 1 ಟೀಚಮಚ ಜೀರಿಗೆ ಪುಡಿ
  • 3/4 ಕಪ್ ಪುದೀನ ಸೊಪ್ಪು
  • 1/4 ಕಪ್ ಈರುಳ್ಳಿ
  • ರುಚಿಕೆ ತಕ್ಕಷ್ಟು ಉಪ್ಪು
  • 1/4 ಟೀಸ್ಪೂನ್ ಸಕ್ಕರೆ

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಪುದೀನಾ ಮೊಸರು ಬಜ್ಜಿ ಮಾಡುವ ವಿಧಾನ:

ಹಂತ 1:

ಪುದೀನಾ ಸೊಪ್ಪನ್ನು ಚೆನ್ನಾಗಿ ತೊಳೆದು ಸ್ವಲ್ಪ ಹೊತ್ತು ಹಾಗೆಯೇ ಇಡಿ. ಈ ಹೊತ್ತಿಗೆ ಸೌತೆಕಾಯಿ ಮತ್ತು ಈರುಳ್ಳಿ ತೆಗೆದುಕೊಂಡು ಅದನ್ನು ಚಿಕ್ಕದಾಗಿ ಕತ್ತರಿಸಿ.

ಹಂತ 2:

ಬ್ಲೆಂಡರ್ ತೆಗೆದುಕೊಂಡು ಅದಕ್ಕೆ ಈಗಾಗಲೇ ತೊಳೆದಿಟ್ಟ ಪುದೀನಾ ಸೊಪ್ಪನ್ನು ಹಾಕಿ. ಇದರೊಂದಿಗೆ ಹಸಿ ಮೆಣಸಿನಕಾಯಿ ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ಈಗ ಇದನ್ನು ಒಂದು ಚಿಕ್ಕ ಪಾತ್ರೆಗೆ ಹಾಕಿ ಮತ್ತು ಇದಕ್ಕೆ ಕತ್ತರಿಸಿದ ಈರುಳ್ಳಿ ಮತ್ತು ತುರಿದ ಸೌತೆಕಾಯಿಯನ್ನು ಸೇರಿಸಿ.

ಹಂತ 3:

ಕೊನೆಯದಾಗಿ, ಸ್ವಲ್ಪ ಜೀರಿಗೆ ಪುಡಿ, ಉಪ್ಪು ಮತ್ತು ಮೆಣಸಿನ ಪುಡಿಯನ್ನು ಸಿಂಪಡಿಸಿ. ನಂತರ ಪುದೀನ ಎಲೆಗಳಿಂದ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ