AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ಇರುವೆಗಳು ಬರದಂತೆ ಮಾಡಲು ಇಲ್ಲಿವೆ 6 ಮನೆಮದ್ದುಗಳು

ಇರುವೆ ಬರದಂತೆ ತಡೆಯಲು ಹಲವಾರು ಔಷಧಗಳಿದ್ದರೂ ಅವುಗಳಿಂದ ಅಡ್ಡ ಪರಿಣಾಮಗಳು ಇರುತ್ತವೆ ಆದರೆ ಮನೆ ಮದ್ದುಗಳನ್ನು ಬಳಸುವುದರಿಂದ ಯಾವುದೇ ರೀತಿಯ ಹಾನಿಯಿಲ್ಲದೆ, ಇರುವೆ ಬರದಂತೆ ನೋಡಿಕೊಳ್ಳಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಮಳೆಗಾಲದಲ್ಲಿ ಇರುವೆಗಳು ಬರದಂತೆ ಮಾಡಲು ಇಲ್ಲಿವೆ 6 ಮನೆಮದ್ದುಗಳು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Jun 30, 2023 | 11:22 AM

Share

ಮಳೆಗಾಲದಲ್ಲಿ ಇರುವೆಗಳು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಕಾಣಿಸಿಕೊಳ್ಳುತ್ತವೆ. ಜೊತೆಗೆ ಆಹಾರ ಪದಾರ್ಥಗಳನ್ನು ಇಟ್ಟು ಸ್ವಲ್ಪ ಹೊತ್ತಿನಲ್ಲಿಯೇ ಅದಕ್ಕೆ ಮುತ್ತಿಕೊಳ್ಳುತ್ತೇವೆ, ಇರುವೆ ಬರದಂತೆ ತಡೆಯಲು ಹಲವಾರು ಔಷಧಗಳಿದ್ದರೂ ಅವುಗಳಿಂದ ಅಡ್ಡ ಪರಿಣಾಮಗಳು ಇರುತ್ತವೆ ಆದರೆ ಮನೆ ಮದ್ದುಗಳನ್ನು ಬಳಸುವುದರಿಂದ ಯಾವುದೇ ರೀತಿಯ ಹಾನಿಯಿಲ್ಲದೆ ಇರುವೆ ಬರದಂತೆ ನೋಡಿಕೊಳ್ಳಬಹುದು.

ಮಳೆ ಬಿಳುತ್ತಿದ್ದಂತೆ, ಇರುವೆಗಳು ತಂಪಾದ ಸ್ಥಳಗಳನ್ನು ಹುಡುಕುತ್ತವೆ, ಸಾಮನ್ಯವಾಗಿ ಮನೆಯ ಅಡುಗೆಮನೆ ಮತ್ತು ವಾಶ್ ರೂಮ್ ನಂತಹ ಸ್ಥಳಗಳನ್ನು ಇವು ಆಕ್ರಮಿಸಿಕೊಳ್ಳುತ್ತವೆ. ಇವು ಸಣ್ಣ ಸಣ್ಣ ಗೂಡುಗಳನ್ನು ಮಾಡಿಕೊಳ್ಳುವ ಮೂಲಕ ಮುತ್ತಿಗೆ ಹಾಕುತ್ತವೆ ಅದಲ್ಲದೆ ಆಹಾರ ಪದಾರ್ಥಗಳನ್ನು ಹಾಳು ಮಾಡುತ್ತವೆ. ಹಾಗಾಗಿ ಅವುಗಳನ್ನು ದೂರವಿರಿಸಲು ಕೆಲವು ಸುಲಭ ಸಲಹೆಗಳು ಇಲ್ಲಿವೆ.

ಇದನ್ನೂ ಓದಿ: Monsoon Vegetable Gardening: ಮಳೆಗಾಲದಲ್ಲಿ ನಿಮ್ಮ ಮನೆಯಲ್ಲಿ ಬೆಳೆಯಲು ಸೂಕ್ತವಾದ ತರಕಾರಿಗಳ ಯಾವುವು?

ನಿಮ್ಮ ಮನೆಯನ್ನು ಇರುವೆ ಮುಕ್ತ ವಲಯವನ್ನಾಗಿ ಮಾಡಲು ಇಲ್ಲಿವೆ ಮನೆ ಮದ್ದುಗಳು:

-ಸುಣ್ಣ, ಕ್ಯಾಲ್ಸಿಯಂ ಕಾರ್ಬೋನೇಟ್ ಅನ್ನು ಹೊಂದಿರುತ್ತದೆ. ಇದು ಇರುವೆಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ. ಇರುವೆಗಳ ಪ್ರವೇಶ ದ್ವಾರಗಳಲ್ಲಿ ಸ್ವಲ್ಪ ಸುಣ್ಣದ ಪುಡಿಯನ್ನು ಸಿಂಪಡಿಸಿ ಅಥವಾ ಅದರಲ್ಲಿಯೇ ಗೆರೆಯನ್ನು ಎಳೆಯಿರಿ.

-ಇರುವೆಗಳು ಬರುವ ಜಾಗದಲ್ಲಿ ನಿಂಬೆ ರಸವನ್ನು ಹಿಂಡಿ ಅಥವಾ ಕೆಲವು ನಿಂಬೆಯ ಸಿಪ್ಪೆಗಳನ್ನು ತುಂಡು ಮಾಡಿ ಇರಿಸಿ. ಇರುವೆಗಳು ನಿಂಬೆಯ ವಾಸನೆಯನ್ನು ಇಷ್ಟಪಡದ ಕಾರಣ ಇರುವೆಗಳು ಬರುವುದಿಲ್ಲ.ಅಥವಾ ನೀವು ನೆಲವನ್ನು ಒರೆಸುವ ನೀರಿನಲ್ಲಿ ನಿಂಬೆ ರಸವನ್ನು ಸೇರಿಸಿಯೂ ನೆಲವನ್ನು ಒರೆಸಬಹುದು.

-ಇರುವೆಗಳು ಸಕ್ಕರೆಯನ್ನು ಪ್ರೀತಿಸುತ್ತವೆ ಆದರೆ ಮೆಣಸನ್ನಲ್ಲ. ಆದ್ದರಿಂದ, ನಿಮ್ಮ ಮನೆಯ ಇರುವೆ ಬರುವ ಸ್ಥಳಗಳಲ್ಲಿ ಸ್ವಲ್ಪ ಮೆಣಸನ್ನು ಅಥವಾ ಮೆಣಸಿನ ಹುಡಿಯನ್ನು ಸಿಂಪಡಿಸಿ.

-ಬಿಳಿ ವಿನೆಗರ್, ನೀರಿನ ದ್ರಾವಣವನ್ನು ತಯಾರಿಸಿ ಮತ್ತು ಅದಕ್ಕೆ ಕೆಲವು ಸಾರಭೂತ ತೈಲಗಳನ್ನು ಸೇರಿಸಿ. ಇರುವೆಗಳು ಪ್ರವೇಶಿಸುವ ಜಾಗದಲ್ಲಿ ಪ್ರತಿದಿನ ಈ ದ್ರಾವಣವನ್ನು ಸಿಂಪಡಿಸಿ.

-ಪುದೀನಾ, ಕೀಟ ನಿವಾರಕವಾಗಿದೆ ಏಕೆಂದರೆ ಇದು ಬಲವಾದ ಪರಿಮಳವನ್ನು ಹೊಂದಿದ್ದು, ಅಂತಹ ಪರಿಮಳಗಳನ್ನು ಇರುವೆಗಳು ಸಹಿಸಿಕೊಳ್ಳುವುದಿಲ್ಲ. ಇರುವೆಗಳು ಬರುವ ಸ್ಥಳಗಳಲ್ಲಿ ದಿನಕ್ಕೆ ಎರಡು ಬಾರಿ ಸಿಂಪಡಿಸುವುದರಿಂದ ಇರುವೆಗಳು ಬರುವುದಿಲ್ಲ.

-ಇರುವೆಗಳನ್ನು ನೈಸರ್ಗಿಕವಾಗಿ ತೊಡೆದು ಹಾಕಲು ಉಪ್ಪು ಅತ್ಯುತ್ತಮ ಮತ್ತು ಅಗ್ಗದ ಮಾರ್ಗವಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ನೀರನ್ನು ಕುದಿಸಿ ಮತ್ತು ನೀರಿಗಿಂತ ಹೆಚ್ಚಿನ ಪ್ರಮಾಣದ ಉಪ್ಪನ್ನು ಸೇರಿಸಿ. ನಂತರ ಅಗತ್ಯವಿರುವ ಕಡೆಗಳಲ್ಲಿ ಸಿಂಪಡಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:45 am, Fri, 30 June 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!