AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ರಿಲೇಷನ್​​​ಶಿಪ್​​ನಲ್ಲಿ ಇಂತಹ ಅಭ್ಯಾಸಗಳು ಕಂಡುಬಂದರೆ ತಕ್ಷಣ ಸಂಬಂಧಕ್ಕೆ ಬ್ರೇಕ್ ಹಾಕಿ

ನೀವು ಡೇಟಿಂಗ್​ ಮಾಡುವ ವ್ಯಕ್ತಿಯಲ್ಲಿ ಈ ಕೆಳಗಿನ ಅಭ್ಯಾಸಗಳು ಕಂಡುಬಂದರೆ ಸಂಬಂಧವನ್ನು ಯಾವುದೇ ಕಾರಣಕ್ಕೂ ಮುಂದುವರಿಸಲು ಹೋಗದಿರಿ. ನಿಮ್ಮ ಸಂಬಂಧವನ್ನು ನೀವು ಜೀವನ ಪೂರ್ತಿ ಮುಂದುವರಿಸಲು ಬಯಸಿದರೆ ಸರಿಯಾದ ಸಂಗಾತಿಯನ್ನು ಆಯ್ಕೆ ಮಾಡಿ.

Relationship Tips: ನಿಮ್ಮ ರಿಲೇಷನ್​​​ಶಿಪ್​​ನಲ್ಲಿ ಇಂತಹ ಅಭ್ಯಾಸಗಳು ಕಂಡುಬಂದರೆ ತಕ್ಷಣ ಸಂಬಂಧಕ್ಕೆ ಬ್ರೇಕ್ ಹಾಕಿ
ಅಕ್ಷತಾ ವರ್ಕಾಡಿ
|

Updated on:Feb 28, 2023 | 7:10 PM

Share

ಇತ್ತೀಚೆಗೆ ಡೇಟಿಂಗ್​​ ಆಪ್​​ಗಳು ಹೆಚ್ಚಾಗುತ್ತಿದ್ದಂತೆ ಸಂಬಂಧಗಳ ನಿಜವಾದ ಅರ್ಥ ಕಳೆದು ಹೋಗುತ್ತಿದೆ. ಇದರಿಂದಾಗಿ ಸಂಬಂಧಗಳು 6 ತಿಂಗಳಲ್ಲಿಯೇ ಬಿರುಕು ಬಿಡುವುದನ್ನು ಕಾಣಬಹುದು. ಆದ್ದರಿಂದ ನೀವು ನಿಜವಾದ ಪ್ರೀತಿಯನ್ನು ಹುಡುಕುತ್ತಿದ್ದರೆ, ಅದರಲ್ಲಿಯೂ ನಿಮಗೆ ಮೋಸವಾಗಬಹುದು. ಆದ್ದರಿಂದ ನೀವು ಡೇಟಿಂಗ್​ ಮಾಡುವ ವ್ಯಕ್ತಿಯಲ್ಲಿ ಈ ಕೆಳಗಿನ ಅಭ್ಯಾಸಗಳು ಕಂಡುಬಂದರೆ ಸಂಬಂಧವನ್ನು ಯಾವುದೇ ಕಾರಣಕ್ಕೂ ಮುಂದುವರಿಸಲು ಹೋಗದಿರಿ. ನಿಮ್ಮ ಸಂಬಂಧವನ್ನು ನೀವು ಜೀವನ ಪೂರ್ತಿ ಮುಂದುವರಿಸಲು ಬಯಸಿದರೆ ಸರಿಯಾದ ಸಂಗಾತಿಯನ್ನು ಆಯ್ಕೆ ಮಾಡಿ.

ಸಾಕಷ್ಟು ಭಿನ್ನಾಭಿಪ್ರಾಯಗಳು:

ನಿಮ್ಮ ಸಂಬಂಧದಲ್ಲಿ ಪ್ರಾರಂಭದಲ್ಲಿಯೇ ಪ್ರತಿದಿನ ಜಗಳ, ಮನಸ್ತಾಪ, ನಿರಂತರ ದೂರು ಆ ಸಂಬಂಧವನ್ನು ಕಷ್ಟ ಪಟ್ಟು ಮುಂದುವರಿಸಿಕೊಂಡು ಹೋಗಬೇಡಿ. ಯಾಕೆಂದರೆ ಒಬ್ಬರಿಂದ ಸಂಬಂಧವನ್ನು ಉಳಿಸಲು ಸಾಧ್ಯವಿಲ್ಲ. ಅದಕ್ಕಿಂತ ನೀವು ಆ ಸಂಬಂಧದಿಂದ ದೂರವಾಗುವುದು ತುಂಬಾ ಅಗತ್ಯವಾಗಿದೆ.

ನಿಮ್ಮೊಂದಿಗೆ ಮಾಜಿ ಪ್ರೇಮಿಯ ಬಗ್ಗೆ ಮಾತು:

ನಿಮ್ಮ ಮೊದಲ ಡೇಟಿಂಗ್​​ನಲ್ಲಿಯೇ ಅತಿಯಾಗಿ ಮಾಜಿ ಪ್ರೇಮಿಯ ಬಗ್ಗೆ ಮಾತನಾಡುತ್ತಾ ಇದ್ದರೆ, ಅವರಿನ್ನು ಮಾಜಿ ಪ್ರೇಮಿಯನ್ನು ಮರೆತಿಲ್ಲ ಎಂಬುದನ್ನು ತಿಳಿಸುತ್ತದೆ. ಸಂಬಂಧದಲ್ಲಿ ಇನ್ನೂ ಕೂಡ ಸಾಕಷ್ಟು ಗೊಂದಲ ಇರುವವರನ್ನು ಎಂದಿಗೂ ನಿಮ್ಮ ಸಂಗಾತಿಯಾಗಲು ಸೂಕ್ತವಲ್ಲ.

ಮೆಸ್ಡ್ ಅಪ್ ಕಮ್ಯುನಿಕೇಶನ್:

ನಿಮ್ಮ ಸಂಬಂಧದಲ್ಲಿ ಕಾಳಜಿ, ಜವಾಬ್ದಾರಿಯ ಹೊರತಾಗಿ ಕೆಟ್ಟ ವಿಷಯಗಳೇ ಹೆಚ್ಚಾಗಿ ಬರುತ್ತಿದೆ ಎಂದು ನಿಮಗನಿಸುತ್ತಿದ್ದರೆ, ತಕ್ಷಣ ಆ ಸಂಬಂಧವನ್ನು ತೊರೆಯಲು ಸಿದ್ಧರಾಗಿ. ಯಾಕೆಂದರೆ ಅವರು ನಿಮ್ಮನ್ನು ನಿಜವಾಗಿ ಜೀವನ ಸಂಗಾತಿಯಾಗಲು ಬಯಸಿದರೆ, ನಿಮ್ಮ ಬಗ್ಗೆ ಅತಿಯಾದ ಕಾಳಜಿ ಹಾಗೂ ಜವಾಬ್ದಾರಿಯನ್ನು ಹೊಂದಿರುತ್ತಾರೆ.

ಇದನ್ನೂ ಓದಿ: ಕೆಟ್ಟ ನೆನಪುಗಳು ಮತ್ತೆ ಮತ್ತೆ ನಿಮ್ಮನ್ನು ಕಾಡುತ್ತಿದೆಯಾ? ಹಾಗಿದ್ದರೆ ಕೆಲವು ದಿನಗಳ ವರೆಗೆ ಈ ಟಿಪ್ಸ್​​ ಫಾಲೋ ಮಾಡಿ ನೋಡಿ

ವೈಯಕ್ತಿಕ ವಿಷಯಗಳಿಗೆ ಅತಿಯಾಗಿ ತಲೆಹಾಕುವುದು:

ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ನಿಮಗೆ ಅವರೊಂದಿಗೆ ಹೇಳಲು ಇಷ್ಟವಿಲ್ಲದಿದ್ದರೂ, ನಿಮ್ಮ ವಿಷಯವನ್ನು ಮತ್ತೆ ಮತ್ತೆ ಕೆಣಕಿ, ನಿಮಗೆ ಸಾಕಷ್ಟು ಕಿರಿ ಕಿರಿಯನ್ನುಂಟು ಮಾಡುತ್ತಿದ್ದರೆ, ಆ ಸಂಬಂಧದಿಂದ ತಕ್ಷಣ ದೂರ ಸರಿಯಿರಿ. ಮೊದಲು ನಿಮ್ಮ ವೈಯಕ್ತಿಕ ಸಂತೋಷ ಮುಖ್ಯವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿಕ್ಲಿಕ್​ ಮಾಡಿ:  

Published On - 7:10 pm, Tue, 28 February 23

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು