AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ರಿಲೇಷನ್​​​ಶಿಪ್​​ನಲ್ಲಿ ಇಂತಹ ಅಭ್ಯಾಸಗಳು ಕಂಡುಬಂದರೆ ತಕ್ಷಣ ಸಂಬಂಧಕ್ಕೆ ಬ್ರೇಕ್ ಹಾಕಿ

ನೀವು ಡೇಟಿಂಗ್​ ಮಾಡುವ ವ್ಯಕ್ತಿಯಲ್ಲಿ ಈ ಕೆಳಗಿನ ಅಭ್ಯಾಸಗಳು ಕಂಡುಬಂದರೆ ಸಂಬಂಧವನ್ನು ಯಾವುದೇ ಕಾರಣಕ್ಕೂ ಮುಂದುವರಿಸಲು ಹೋಗದಿರಿ. ನಿಮ್ಮ ಸಂಬಂಧವನ್ನು ನೀವು ಜೀವನ ಪೂರ್ತಿ ಮುಂದುವರಿಸಲು ಬಯಸಿದರೆ ಸರಿಯಾದ ಸಂಗಾತಿಯನ್ನು ಆಯ್ಕೆ ಮಾಡಿ.

Relationship Tips: ನಿಮ್ಮ ರಿಲೇಷನ್​​​ಶಿಪ್​​ನಲ್ಲಿ ಇಂತಹ ಅಭ್ಯಾಸಗಳು ಕಂಡುಬಂದರೆ ತಕ್ಷಣ ಸಂಬಂಧಕ್ಕೆ ಬ್ರೇಕ್ ಹಾಕಿ
ಅಕ್ಷತಾ ವರ್ಕಾಡಿ
|

Updated on:Feb 28, 2023 | 7:10 PM

Share

ಇತ್ತೀಚೆಗೆ ಡೇಟಿಂಗ್​​ ಆಪ್​​ಗಳು ಹೆಚ್ಚಾಗುತ್ತಿದ್ದಂತೆ ಸಂಬಂಧಗಳ ನಿಜವಾದ ಅರ್ಥ ಕಳೆದು ಹೋಗುತ್ತಿದೆ. ಇದರಿಂದಾಗಿ ಸಂಬಂಧಗಳು 6 ತಿಂಗಳಲ್ಲಿಯೇ ಬಿರುಕು ಬಿಡುವುದನ್ನು ಕಾಣಬಹುದು. ಆದ್ದರಿಂದ ನೀವು ನಿಜವಾದ ಪ್ರೀತಿಯನ್ನು ಹುಡುಕುತ್ತಿದ್ದರೆ, ಅದರಲ್ಲಿಯೂ ನಿಮಗೆ ಮೋಸವಾಗಬಹುದು. ಆದ್ದರಿಂದ ನೀವು ಡೇಟಿಂಗ್​ ಮಾಡುವ ವ್ಯಕ್ತಿಯಲ್ಲಿ ಈ ಕೆಳಗಿನ ಅಭ್ಯಾಸಗಳು ಕಂಡುಬಂದರೆ ಸಂಬಂಧವನ್ನು ಯಾವುದೇ ಕಾರಣಕ್ಕೂ ಮುಂದುವರಿಸಲು ಹೋಗದಿರಿ. ನಿಮ್ಮ ಸಂಬಂಧವನ್ನು ನೀವು ಜೀವನ ಪೂರ್ತಿ ಮುಂದುವರಿಸಲು ಬಯಸಿದರೆ ಸರಿಯಾದ ಸಂಗಾತಿಯನ್ನು ಆಯ್ಕೆ ಮಾಡಿ.

ಸಾಕಷ್ಟು ಭಿನ್ನಾಭಿಪ್ರಾಯಗಳು:

ನಿಮ್ಮ ಸಂಬಂಧದಲ್ಲಿ ಪ್ರಾರಂಭದಲ್ಲಿಯೇ ಪ್ರತಿದಿನ ಜಗಳ, ಮನಸ್ತಾಪ, ನಿರಂತರ ದೂರು ಆ ಸಂಬಂಧವನ್ನು ಕಷ್ಟ ಪಟ್ಟು ಮುಂದುವರಿಸಿಕೊಂಡು ಹೋಗಬೇಡಿ. ಯಾಕೆಂದರೆ ಒಬ್ಬರಿಂದ ಸಂಬಂಧವನ್ನು ಉಳಿಸಲು ಸಾಧ್ಯವಿಲ್ಲ. ಅದಕ್ಕಿಂತ ನೀವು ಆ ಸಂಬಂಧದಿಂದ ದೂರವಾಗುವುದು ತುಂಬಾ ಅಗತ್ಯವಾಗಿದೆ.

ನಿಮ್ಮೊಂದಿಗೆ ಮಾಜಿ ಪ್ರೇಮಿಯ ಬಗ್ಗೆ ಮಾತು:

ನಿಮ್ಮ ಮೊದಲ ಡೇಟಿಂಗ್​​ನಲ್ಲಿಯೇ ಅತಿಯಾಗಿ ಮಾಜಿ ಪ್ರೇಮಿಯ ಬಗ್ಗೆ ಮಾತನಾಡುತ್ತಾ ಇದ್ದರೆ, ಅವರಿನ್ನು ಮಾಜಿ ಪ್ರೇಮಿಯನ್ನು ಮರೆತಿಲ್ಲ ಎಂಬುದನ್ನು ತಿಳಿಸುತ್ತದೆ. ಸಂಬಂಧದಲ್ಲಿ ಇನ್ನೂ ಕೂಡ ಸಾಕಷ್ಟು ಗೊಂದಲ ಇರುವವರನ್ನು ಎಂದಿಗೂ ನಿಮ್ಮ ಸಂಗಾತಿಯಾಗಲು ಸೂಕ್ತವಲ್ಲ.

ಮೆಸ್ಡ್ ಅಪ್ ಕಮ್ಯುನಿಕೇಶನ್:

ನಿಮ್ಮ ಸಂಬಂಧದಲ್ಲಿ ಕಾಳಜಿ, ಜವಾಬ್ದಾರಿಯ ಹೊರತಾಗಿ ಕೆಟ್ಟ ವಿಷಯಗಳೇ ಹೆಚ್ಚಾಗಿ ಬರುತ್ತಿದೆ ಎಂದು ನಿಮಗನಿಸುತ್ತಿದ್ದರೆ, ತಕ್ಷಣ ಆ ಸಂಬಂಧವನ್ನು ತೊರೆಯಲು ಸಿದ್ಧರಾಗಿ. ಯಾಕೆಂದರೆ ಅವರು ನಿಮ್ಮನ್ನು ನಿಜವಾಗಿ ಜೀವನ ಸಂಗಾತಿಯಾಗಲು ಬಯಸಿದರೆ, ನಿಮ್ಮ ಬಗ್ಗೆ ಅತಿಯಾದ ಕಾಳಜಿ ಹಾಗೂ ಜವಾಬ್ದಾರಿಯನ್ನು ಹೊಂದಿರುತ್ತಾರೆ.

ಇದನ್ನೂ ಓದಿ: ಕೆಟ್ಟ ನೆನಪುಗಳು ಮತ್ತೆ ಮತ್ತೆ ನಿಮ್ಮನ್ನು ಕಾಡುತ್ತಿದೆಯಾ? ಹಾಗಿದ್ದರೆ ಕೆಲವು ದಿನಗಳ ವರೆಗೆ ಈ ಟಿಪ್ಸ್​​ ಫಾಲೋ ಮಾಡಿ ನೋಡಿ

ವೈಯಕ್ತಿಕ ವಿಷಯಗಳಿಗೆ ಅತಿಯಾಗಿ ತಲೆಹಾಕುವುದು:

ನಿಮ್ಮ ವೈಯಕ್ತಿಕ ವಿಷಯಗಳ ಬಗ್ಗೆ ನಿಮಗೆ ಅವರೊಂದಿಗೆ ಹೇಳಲು ಇಷ್ಟವಿಲ್ಲದಿದ್ದರೂ, ನಿಮ್ಮ ವಿಷಯವನ್ನು ಮತ್ತೆ ಮತ್ತೆ ಕೆಣಕಿ, ನಿಮಗೆ ಸಾಕಷ್ಟು ಕಿರಿ ಕಿರಿಯನ್ನುಂಟು ಮಾಡುತ್ತಿದ್ದರೆ, ಆ ಸಂಬಂಧದಿಂದ ತಕ್ಷಣ ದೂರ ಸರಿಯಿರಿ. ಮೊದಲು ನಿಮ್ಮ ವೈಯಕ್ತಿಕ ಸಂತೋಷ ಮುಖ್ಯವಾಗಿರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿಕ್ಲಿಕ್​ ಮಾಡಿ:  

Published On - 7:10 pm, Tue, 28 February 23

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ