AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Winter Skin Care: ಚಳಿಗಾಲದಲ್ಲಿ ಕಾಡುವ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸಲಹೆ ಪಾಲಿಸಿ

ಚಳಿಗಾಲದಲ್ಲಿ ತ್ವಚೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಶೀತ ವಾತಾವರಣದ ಕಾರಣದಿಂದಾಗಿ ತ್ವಚೆ ಡ್ರೈ ಆಗಿ ಬಿಡುತ್ತದೆ. ಇದರಿಂದಾಗಿ ಮುಖದ ಸೌಂದರ್ಯವೇ ಕೆಡುತ್ತದೆ. ಹಾಗಾಗಿ ತ್ವಚೆಯನ್ನು ತೇವಭರಿತವಾಗಿ ಇಟ್ಟುಕೊಳ್ಳಲು, ಡ್ರೈ ಸ್ಕಿನ್‌ ಸಮಸ್ಯೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ.

Winter Skin Care: ಚಳಿಗಾಲದಲ್ಲಿ ಕಾಡುವ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸಲಹೆ ಪಾಲಿಸಿ
ಸಾಂದರ್ಭಿಕ ಚಿತ್ರ Image Credit source: Freepik
ಮಾಲಾಶ್ರೀ ಅಂಚನ್​
|

Updated on: Nov 27, 2025 | 8:48 AM

Share

ಚಳಿಗಾಲ (winter) ಆರಂಭವಾಗಿದೆ. ಈ ಸಮಯದಲ್ಲಿ ಆರೋಗ್ಯ ಸಮಸ್ಯೆಗಳ ಜೊತೆಗೆ ತ್ವಚೆ ಸಂಬಂಧಿ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತವೆ. ಹೌದು ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುವ ಕಾರಣ ಚರ್ಮದಲ್ಲಿರುವ ತೇವಾಂಶ ಬೇಗನೆ ಡ್ರೈ ಆಗುತ್ತದೆ. ಇದರಿಂದ ಚರ್ಮ ಕಾಂತಿಯೂ ಮಂದವಾಗುತ್ತದೆ. ಮತ್ತು ಈ ಒಣ ಚರ್ಮ ಸಮಸ್ಯೆಯ ಕಾರಣದಿಂದಾಗಿ ಮುಖದ ಸೌಂದರ್ಯವೇ ಹಾಳಾಗಬಹುದು. ಹೀಗಿರುವಾಗ ಈ ನೈಸರ್ಗಿಕ ವಸ್ತುಗಳನ್ನು ಬಳಸಿ ನಿಮ್ಮ ತ್ವಚೆಯನ್ನು ಮೃದುವಾಗಿ ಮಾಯಿಶ್ಚರೈಸ್ಡ್‌  ಆಗಿ ಇರಿಸಿಕೊಳ್ಳಬಹುದು.

ಚಳಿಗಾಲದಲ್ಲಿ ಶುಷ್ಕ ತ್ವಚೆಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಸಲಹೆ:

ತೆಂಗಿನ ಎಣ್ಣೆ: ತೆಂಗಿನ ಎಣ್ಣೆ ಚಳಿಗಾಲದಲ್ಲಿ ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಲಗುವ ಮುನ್ನ ಇದನ್ನು ಮುಖಕ್ಕೆ ಹಚ್ಚಿ ಮೃದುವಾದ  ಮಸಾಜ್ ಮಾಡುವುದರಿಂದ ತ್ವಚೆ ಮೃದುವಾಗಿರುತ್ತದೆ.

ಜೇನುತುಪ್ಪ: ಜೇನುತುಪ್ಪವು ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು, ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಮುಖ ತೊಳೆಯುವ 10-15 ನಿಮಿಷಗಳ ಮೊದಲು ಇದನ್ನು ನಿಮ್ಮ ಮುಖಕ್ಕೆ ಹಚ್ಚಿ. ಇದು ನಿಮ್ಮ ಚರ್ಮವನ್ನು ಮೃದು ಮತ್ತು ಹೊಳೆಯುವಂತೆ ಮಾಡುತ್ತದೆ.

ಅಲೋವೆರಾ ಜೆಲ್: ಅಲೋವೆರಾ ಜೆಲ್ ಆರ್ಧ್ರಕ ಗುಣಗಳನ್ನು ಹೊಂದಿದೆ. ಇದನ್ನು ನೇರವಾಗಿ ಮುಖಕ್ಕೆ ಹಚ್ಚುವುದರಿಂದ ಚರ್ಮವು ತೇವಾಂಶದಿಂದ ಕೂಡಿರುತ್ತದೆ ಮತ್ತು ಇದು ಶುಷ್ಕತೆಯನ್ನು ತಡೆಯುತ್ತದೆ.

ಇದನ್ನೂ ಓದಿ: ಚಳಿಗಾಲದ ಸೋಮಾರಿತನವನ್ನು ಹೋಗಲಾಡಿಸಲು ಬೆಳಗ್ಗೆ ಎದ್ದ ತಕ್ಷಣ ಕೆಲಸಗಳನ್ನು ಮಾಡಿ

ರೋಸ್ ವಾಟರ್: ಚಳಿಗಾಲದಲ್ಲಿ ರೋಸ್‌ ವಾಟರ್ ಮುಖಕ್ಕೆ ಹಚ್ಚುವುದರಿಂದ ನಿಮ್ಮ ಚರ್ಮವು ತೇವಾಂಶದಿಂದ ಕೂಡಿರುತ್ತದೆ ಮತ್ತು ಮೃದುವಾಗಿರುತ್ತದೆ.

ಮಾಯಿಶ್ಚರೈಸರ್ ಅತ್ಯಂತ ಮುಖ್ಯ: ಚಳಿಗಾಲದಲ್ಲಿ ನಿಮ್ಮ ಚರ್ಮಕ್ಕೆ ಮಾಯಿಶ್ಚರೈಸರ್ ಹೆಚ್ಚು ಬೇಕಾಗುತ್ತದೆ. ದಿನಕ್ಕೆ ಕನಿಷ್ಠ ಎರಡು ಬಾರಿಯಾದರೂ ಮಾಯಿಶ್ಚರೈಸರ್ ಹಚ್ಚಿ. ಶಿಯಾ ಬೆಣ್ಣೆ, ಗ್ಲಿಸರಿನ್ ಅಥವಾ ಹೈಲುರಾನಿಕ್ ಆಮ್ಲದಂತಹ ಪದಾರ್ಥಗಳನ್ನು ಹೊಂದಿರುವ ಮಾಯಿಶ್ಚರೈಸರ್‌ ಒಳ್ಳೆಯದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ