AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘಕಾಲದ ತಲೆನೋವು ಪರಿಹಾರಕ್ಕೆ ಇಲ್ಲಿವೆ ಸಿಂಪಲ್​ ಟಿಪ್ಸ್​

ಔಷಧಗಳನ್ನು ತೆಗೆದುಕೊಂಡು ತಲೆನೋವು ಕಡಿಮೆ ಮಾಡುವುದು ಒಂದು ವಿಧಾನವಾದರೆ, ದಿನಚರಿ ಬದಲಿಸಿಕೊಂಡು ಕೂಡ ತಲೆನೋವು ಬರದಂತೆ ತಡೆಯಬಹುದು.

ದೀರ್ಘಕಾಲದ ತಲೆನೋವು ಪರಿಹಾರಕ್ಕೆ ಇಲ್ಲಿವೆ ಸಿಂಪಲ್​ ಟಿಪ್ಸ್​
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 22, 2021 | 9:47 PM

Share

ತಲೆನೋವು ಬರುತ್ತದೆ ಅನ್ನೋದೆ ಇತ್ತೀಚೆಗೆ ದೊಡ್ಡ ತಲೆನೋವು. ತಲೆನೋವು ಬರುವುದಕ್ಕೆ ವಯಸ್ಸಿನ ಮಿತಿ ಇಲ್ಲ. ಮೊಬೈಲ್ ಹೆಚ್ಚು ನೋಡಿದರೆ, ಕಂಪ್ಯೂಟರ್​ ಮುಂದೆ ತುಂಬಾ ಹೊತ್ತು ಕೂತಿದ್ದರೆ, ಕಣ್ಣಿನ ತೊಂದರೆ, ಕಿವಿ ಅಥವಾ ಹಲ್ಲಿನ ಸಮಸ್ಯೆ ಇದ್ದಾಗ, ಹಸಿವಾದಾಗ. ಹೀಗೆ ತಲೆನೋವು ಯಾವ್ಯಾವ ಕಾರಣಕ್ಕೆ ಬರುತ್ತದೆ ಎಂದು ಹೇಳೋಕೆ ಸಾಧ್ಯವೇ ಇರುವುದಿಲ್ಲ. ಇವುಗಳಿಗೆ ಪರಿಹಾರಗಳು ಇಲ್ಲಿವೆ.

ಹಣಕಾಸಿನ ತೊಂದರೆಗಳು, ಉದ್ಯೋಗದ ತೊಂದರೆಗಳು, ಕೌಟುಂಬಿಕ ಸಮಸ್ಯೆಗಳು ಮತ್ತು ಯೋಜಿಸಿದಂತೆ ಕೆಲಸಗಳನ್ನು ಮಾಡಲು ಸಾಧ್ಯವಾಗದೆ ಇದ್ದಾಗ ನಿಮಗೆ ಒತ್ತಡ ಕಾಡಬಹುದು. ಇದರಿಂದಲೂ ತಲೆನೋವು ಬರಬಹುದು. ಇದಕ್ಕೆ ನೀವು ಲೈಫ್​ಸ್ಟೈಲ್​ ಬದಲಿಸಿಕೊಂಡರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗಬಹುದು.

ಔಷಧಗಳನ್ನು ತೆಗೆದುಕೊಂಡು ತಲೆನೋವು ಕಡಿಮೆ ಮಾಡುವುದು ಒಂದು ವಿಧಾನವಾದರೆ, ದಿನಚರಿ ಬದಲಿಸಿಕೊಂಡು ಕೂಡ ತಲೆನೋವು ಬರದಂತೆ ತಡೆಯಬಹುದು. ಅದು ಹೇಗೆ ಎನ್ನುವುದಕ್ಕೆ ಇಲ್ಲಿದೆ ಉತ್ತರ.

ನೀವು ತಿನ್ನುವ ಆಹಾರ ತುಂಬಾನೇ ಪ್ರಮುಖವಾಗುತ್ತದೆ. ನಿಮ್ಮ ಆಹಾರದಲ್ಲಿ ಹುಳಿ, ಉಪ್ಪು ಮತ್ತು ಮೆಣಸು ಕಡಿಮೆ ಇರುವಂತೆ ನೋಡಿಕೊಳ್ಳಿ. ತಾಜಾ ಆಹಾರ, ಸಲಾಡ್ ಮತ್ತು ಮೊಳಕೆಯೊಡೆದ ದ್ವಿದಳ ಧಾನ್ಯಗಳನ್ನು ಸೇವಿಸಿ. ಈ ಆಹಾರ ಕ್ರಮದಿಂದ ತಲೆನೋವು ಬರುವುದನ್ನು ತಪ್ಪಿಸಬಹುದು.

ಪ್ರತಿದಿನ ರಾತ್ರಿ ಮಲಗುವ ಮುನ್ನ ತೆಂಗಿನ ಎಣ್ಣೆಯಿಂದ ತಲೆಗೆ ಹಾಗೂ ದೇಹಕ್ಕೆ ಮಸಾಜ್ ಮಾಡಿ. ಇದರಿಂದ ನಿಮ್ಮ ತಲೆಯಲ್ಲಿ ರಕ್ತ ಸಂಚಾರ ಉತ್ತಮವಾಗುವುದರ ಜತೆಗೆ ರಿಲೀಫ್​ ಫೀಲ್​ ಸಿಗುತ್ತದೆ. ನಿತ್ಯ ವ್ಯಾಯಾಮ ಮಾಡುವುದನ್ನು ಮರೆಯಬೇಡಿ. ನಿತ್ಯ ವ್ಯಾಯಾಮ ಮಾಡುವುದರಿಂದ ದೇಹಕ್ಕೆ ದಣಿಯುತ್ತದೆ. ಇನ್ನು, ದಿನ ನಿತ್ಯ ಧ್ಯಾನ ಮಾಡಿ ಮತ್ತು ಸಂಗೀತ ಕೇಳಬೇಕು. ಧ್ಯಾನದಿಂದ ನಿಮ್ಮ ಮನಸ್ಸು ಶಾಂತವಾಗುತ್ತದೆ. ಇದರಿಂದ ತಲೆನೋವು ಮಾಯವಾಗಬಹುದು.

ಅತಿಯಾಗಿ ಯೋಚನೆ ಮಾಡುವುದು, ಒತ್ತಡದಲ್ಲಿ ಬದುಕುವುದು ಕೂಡ ನಿಮ್ಮ ತಲೆನೋವಿಗೆ ಕಾರಣವಾಗಬಹುದು. ಹೀಗಾಗಿ, ಒತ್ತಡದಿಂದ ದೂರವಿರಲು ಪ್ರಯತ್ನಿಸಿ. ಇವುಗಳನ್ನು ಪಾಲಿಸಿದರೆ ಕ್ರಮೇಣ ತಲೆನೋವನ್ನು ನಿವಾರಣೆ ಆಗುತ್ತದೆ.

ಇದನ್ನೂ ಓದಿ: ಸಿಗರೇಟ್​ ಸೇದಿದ ನಂತರ ಈ ಆಹಾರ ಸೇವಿಸಿದರೆ ನೀವು ಸೇಫ್​!

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?