AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Cleaning Tips: ಅಡುಗೆ ಮನೆಯಲ್ಲಿನ ಎಣ್ಣೆ ಜಿಡ್ಡು ತೆಗೆದು ಹಾಕಲು ಸಿಂಪಲ್ ಟಿಪ್ಸ್ ಇಲ್ಲಿದೆ

ಆದರೆ ಇನ್ನು ಮುಂದೆ ನಿಮ್ಮ ಅಡುಗೆ ಕೋಣೆಯನ್ನು ಶುಚಿಯಾಗಿರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್. ಇದರಿಂದ ನೀವೂ ಸುಲಭವಾಗಿ ಅಡುಗೆ ಕೋಣೆಯಲ್ಲಿನ ಎಣ್ಣೆ ಜಿಡ್ಡನ್ನು ಸುಲಭವಾಗಿ ತೊಡೆದುಹಾಕಬಹುದು.

Kitchen Cleaning Tips: ಅಡುಗೆ ಮನೆಯಲ್ಲಿನ ಎಣ್ಣೆ ಜಿಡ್ಡು ತೆಗೆದು ಹಾಕಲು ಸಿಂಪಲ್ ಟಿಪ್ಸ್ ಇಲ್ಲಿದೆ
ಸಾಂದರ್ಭಿಕ ಚಿತ್ರImage Credit source: Dan Dan The Carpet Man
TV9 Web
| Edited By: |

Updated on:Dec 11, 2022 | 6:03 PM

Share

ಪ್ರತಿಯೊಂದು ಗೃಹಿಣಿಯರಿಗೂ ಅಡುಗೆ ಮಾಡುವುದಕ್ಕಿಂತ ಅಡುಗೆ ಮನೆ(Kitchen) ಯನ್ನು ಶುಚಿಗೊಳಿಸುವುದೇ ಒಂದು ದೊಡ್ಡ ಕೆಲಸ. ಯಾಕೆಂದರೆ ಆಹಾರ ಪದಾರ್ಥಗಳಲ್ಲಿ ಬಳಸಿದ ಎಣ್ಣೆಯ ಜಿಡ್ಡು ಸಂಪೂರ್ಣವಾಗಿ ಶುಚಿಗೊಳಿಸುವುದು ಅಷ್ಟು ಸುಲಭದ ಕೆಲಸವಲ್ಲ. ಜೊತೆಗೆ ಸಾಂಬಾರು ಹಾಗೂ ಕೆಲವೊಂದು ಮಸಾಲೆ ಪದಾರ್ಥಗಳ ಕಲೆ ಅಡುಗೆ ಕೋಣೆಯಲ್ಲಿ ಹಾಗೆಯೇ ಉಳಿದು ಬಿಡುತ್ತದೆ ಇದರಿಂದ ಮನೆಗೆ ನೆಂಟರು ಬಂದಂತಹ ಸಂದರ್ಭದಲ್ಲಿ ಮುಜುಗರಕ್ಕೀಡು ಮಾಡುತ್ತದೆ.  ಆದರೆ ಇನ್ನು ಮುಂದೆ ನಿಮ್ಮ ಅಡುಗೆ ಕೋಣೆಯನ್ನು ಶುಚಿಯಾಗಿರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್. ಇದರಿಂದ ನೀವೂ ಸುಲಭವಾಗಿ ಅಡುಗೆ ಕೋಣೆಯಲ್ಲಿನ ಎಣ್ಣೆ ಜಿಡ್ಡನ್ನು ಸುಲಭವಾಗಿ ತೊಡೆದುಹಾಕಬಹುದು.

ನಿಮ್ಮ ಮನೆಯಲ್ಲಿ ಪ್ರತಿ ದಿನ ಬಳಸುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ಅಡುಗೆ ಕೋಣೆಯನ್ನು ಕಲೆ ರಹಿತ ಕೋಣೆಯನ್ನಾಗಿ ಮಾಡಬಹುದು. ನೀರು, ಅಡುಗೆ ಸೋಡಾ, ವಿನೇಗರ್ ಅಥವಾ ನಿಂಬೆ ರಸ, ಸೋಪಿನ ಪೌಡರ್ ಅಥವಾ ಡಿಶ್ ವಾಶ್ ಜೆಲ್ ಜೊತೆಗೆ ಸ್ಕ್ರಬ್ಬರ್ ಬಳಸಿ . ಕೇವಲ ಇಷ್ಟು ಪದಾರ್ಥಗಳನ್ನು ನಿಮ್ಮ ಅಡುಗೆ ಕೋಣೆಯನ್ನು ಶುಚಿಗೊಳಿಸಿ.

ಇದನ್ನೂ ಓದಿ: ನೀವು ಮಲಗುವ ಭಂಗಿ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ಇದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ ಮೊದಲಿಗೆ ಒಂದು ಚಿಕ್ಕ ಪಾತ್ರೆ ಅಥವಾ ಬೌಲ್ ಗೆ 3 ಚಮಚ ನೀರು ಹಾಕಿ, 1/2 ಚಮಚ ಅಡುಗೆ ಸೋಡಾ, 1/2 ಚಮಚ ವಿನೇಗರ್. ನೀವು ವಿನೇಗರ್ ಇಲ್ಲದ್ದಿದ್ದರೆ ನಿಂಬೆ ರಸವನ್ನು ಕೂಡ ಬಳಸಬಹುದು. ಇದರ ಜೊತೆಗೆ ಅರ್ಧ ಚಮಚ ಸೋಪಿನ ಪೌಡರ್ ಅಥವಾ ಡಿಶ್ ವಾಶ್ ಜೆಲ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಒಂದು ಸ್ಕ್ರಬ್ಬರ್ ತೆಗೆದು ಕೊಂಡು ಈಗಾಗಲೇ ಮಾಡಿಟ್ಟ ಮಿಶ್ರಣದಲ್ಲಿ ಅದ್ದಿ ತೆಗೆಯಿರಿ. ಈಗ ಎಣ್ಣೆಯ ಜಿಡ್ಡು ಅಥವಾ ಕಲೆ ಇರುವ ಜಾಗದಲ್ಲಿ ತಿಕ್ಕಿ. ಉತ್ತಮ ಫಲಿತಾಂಶವನ್ನು ನೀವು ಕಂಡುಕೊಳ್ಳಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 6:00 pm, Sun, 11 December 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ