AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dry Cough: ಒಣ ಕೆಮ್ಮು ನಿವಾರಣೆಗೆ ಪ್ರತೀ ರಾತ್ರಿ ಈ ಸಿಂಪಲ್​​ ಟಿಪ್ಸ್​ ಫಾಲೋ ಮಾಡಿ

ಚಳಿಗಾಲದಲ್ಲಿ ಸಾಮಾನ್ಯ ಸಮಸ್ಯೆ ಎಂದರೆ ಕೆಮ್ಮು. ಕೆಮ್ಮು ಒಮ್ಮೆ ಪ್ರಾರಂಭವಾದರೆ ನಿಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ನಿದ್ದೆಗೂ ಅಡ್ಡಿಯುಂಟು ಮಾಡುತ್ತದೆ. ಇದರಿಂದಾಗಿ ಆ್ಯಂಟಿಬಯೋಟಿಕ್‌ಗಳನ್ನು ಅವಲಂಬಿಸುವ ಬದಲು ಈ ಸಿಂಪಲ್​​ ಮನೆಮದ್ದುಗಳನ್ನು ಟ್ರೈ ಮಾಡಿ.

Dry Cough: ಒಣ ಕೆಮ್ಮು ನಿವಾರಣೆಗೆ ಪ್ರತೀ ರಾತ್ರಿ ಈ ಸಿಂಪಲ್​​ ಟಿಪ್ಸ್​ ಫಾಲೋ ಮಾಡಿ
cough
ಅಕ್ಷತಾ ವರ್ಕಾಡಿ
|

Updated on: Dec 22, 2023 | 5:08 PM

Share

ಚಳಿಗಾಲದಲ್ಲಿ ಅನೇಕ ರೋಗಗಳ ಹರಡುವುದರಿಂದ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಕಫ, ಶೀತ ಮತ್ತು ಕೆಮ್ಮು ಸೇರಿದಂತೆ ಉಸಿರಾಟದ ತೊಂದರೆ, ಅಸ್ತಮಾ ಸಮಸ್ಯೆಗಳು ಹೆಚ್ಚಾಗುತ್ತವೆ. ಜೊತೆಗೆ ಕೊರೊನಾ ಸಮಸ್ಯೆ ಮತ್ತೆ ಹುಟ್ಟುಕೊಂಡಿದ್ದು, ವಿಶೇಷವಾಗಿ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ ಸ್ವಲ್ಪ ಎಚ್ಚರದಿಂದಿರುವುದು ಅವಶ್ಯಕ. ಸ್ರವಿಸುವ ಮೂಗು, ಕೆಮ್ಮು, ಜ್ವರ, ಅಜೀರ್ಣ, ಎದೆಯುರಿ ಸಹ ಚಳಿಗಾಲದಲ್ಲಿ ಸಂಭವಿಸುತ್ತದೆ. ಆದರೆ ಚಳಿಗಾಲದಲ್ಲಿ ಸಾಮಾನ್ಯ ಸಮಸ್ಯೆ ಎಂದರೆ ಕೆಮ್ಮು. ಕೆಮ್ಮು ಒಮ್ಮೆ ಪ್ರಾರಂಭವಾದರೆ ನಿಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ನಿದ್ದೆಗೂ ಅಡ್ಡಿಯುಂಟು ಮಾಡುತ್ತದೆ. ಇದರಿಂದಾಗಿ ಆ್ಯಂಟಿಬಯೋಟಿಕ್‌ಗಳನ್ನು ಅವಲಂಬಿಸುವ ಬದಲು ಈ ಸಿಂಪಲ್​​ ಮನೆಮದ್ದುಗಳನ್ನು ಟ್ರೈ ಮಾಡಿ.

ಕೆಮ್ಮು ಮತ್ತು ನೋಯುತ್ತಿರುವ ಗಂಟಲಿಗೆ ಜೇನುತುಪ್ಪವು ಉತ್ತಮ ಮನೆಮದ್ದು. ಚಳಿಗಾಲದಲ್ಲಿ ದೇಹವನ್ನು ಆರೋಗ್ಯವಾಗಿಡಲು ಜೇನುತುಪ್ಪವನ್ನು ವರ್ಷಗಳಿಂದ ಬಳಸಲಾಗುತ್ತಿದೆ. ಆದ್ದರಿಂದ ನೀವೂ ಕೂಡ ಒಣ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಜೇನುತುಪ್ಪದೊಂದಿಗೆ ತುಳಸಿ ಎಲೆಯನ್ನು ಸೇವಿಸಿ. ಇದರಿಂದ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ದೇಹವೂ ಆರೋಗ್ಯವಾಗಿರುತ್ತದೆ. ಇದಲ್ಲದೇ ಜೇನುತುಪ್ಪದೊಂದಿಗೆ ಈರುಳ್ಳಿ ರಸವನ್ನು ಬೆರೆಸಿ ಸೇವಿಸುವುದು ಉತ್ತಮ. ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಸಮೃದ್ಧವಾಗಿದ್ದು, ಇದರೊಂದಿಗೆ ಜೇನುತುಪ್ಪವನ್ನು ಬೆರೆಸಿದಾಗ ಅದು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: ಮಲಬದ್ಧತೆ ಸಮಸ್ಯೆಯಿಂದ ಬೇಗನೆ ಮುಕ್ತಿ ಪಡೆಯಲು ಪಾಪ್ ಕಾರ್ನ್!

ಮನೆಯಲ್ಲಿ ಸಿರಪ್ ತಯಾರಿಸುವುದು ಹೇಗೆ?

ಒಂದು ಜಾರ್​​ನಲ್ಲಿ ಜೇನುತುಪ್ಪವನ್ನು ಹಾಕಿ. ಈಗ ಅದಕ್ಕೆ 2 ಚಮಚ ಈರುಳ್ಳಿಯ ರಸ ಸೇರಿಸಿ. ಚೆನ್ನಾಗಿ ಅಲ್ಲಾಡಿಸಿ ಮತ್ತು 5-6 ಗಂಟೆಗಳ ಕಾಲ ಮುಚ್ಚಿಡಿ ಅಥವಾ ರಾತ್ರಿಯಿಡೀ ಹೀಗೆ ಇಡಬಹುದು. ಈಗ ಈ ಮಿಶ್ರಣವನ್ನು ದಿನಕ್ಕೆ 2 ಚಮಚ ತೆಗೆದುಕೊಳ್ಳಿ. ಕೆಮ್ಮಿನ ಸಿರಪ್ ಬದಲಿಗೆ ಈ ಮನೆಮದ್ದನ್ನು ಅನುಸರಿಸಿ, ಕೆಮ್ಮು ಎರಡು ದಿನಗಳಲ್ಲಿ ಮಾಯವಾಗುತ್ತದೆ. ಚಿಕ್ಕವರಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಈ ಸಿರಪ್ ಸೇವಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ  ಇಲ್ಲಿ ಕ್ಲಿಕ್​ ಮಾಡಿ: 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ