AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ

ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ಹಲವು ಕಾಯಿಲೆಗಳನ್ನು ತಡೆಯಬಹದು. ಕಣ್ಣು, ತಲೆ, ಹೃದಯಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ಮೀನಿನ ಎಣ್ಣೆ ತಡೆಯುತ್ತದೆ.

ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ
ಮೀನಿನ ಎಣ್ಣೆ (ಸಾಂಕೇತಿಕ ಚಿತ್ರ)
TV9 Web
| Edited By: |

Updated on: Feb 22, 2022 | 4:32 PM

Share

ದೇಹದ ಆರೋಗ್ಯ ವೃದ್ಧಿಗೆ ಮೀನಿನ ಸೇವನೆ ಉತ್ತಮ. ದೇಹದಲ್ಲಿನ ಮೂಳೆಗಳನ್ನು ಬಲಪಡಿಸಲು, ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಮೀನು ಸಹಕಾರಿ. ಅದೇ ರೀತಿ ಮೀನಿನ ಎಣ್ಣೆ ಕೂಡ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಮೀನಿನ ಮೇಲ್ಪದರದಲ್ಲಿನ  ಅಂಶವನ್ನು ಬಳಸಿ ಈ ಮೀನಿನ ಎಣ್ಣೆಯನ್ನು ತಯಾರಿಸಲಾಗುತ್ತದೆ.  ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಅಂಶಗಳು, ಪ್ಯಾಟಿ ಆಸಿಡ್​ಗಳು ಸಮೃದ್ಧವಾಗಿರುತ್ತವೆ. ಇವು ದೇಹದ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ನೆರವಾಗುತ್ತದೆ.  ಸಲ್ಮೋನ್​, ವೈಟ್​ ಫಿಶ್​ ಸೇರಿದಂತೆ  ವಿವಿಧ ರೀತಿಯ ಮೀನಿಗಳಿಂದ ಈ ಎಣ್ಣೆಯನ್ನು ತಯಾರಿಸಲಾಗುತ್ತದೆ. ಇದರ ಜತೆಗೆ ಮೀನಿನ ಎಣ್ಣೆಯಿಂದ ಇನ್ನೂ ಹಲವು ಉಪಯೋಗಗಳಿವೆ. ಇಲ್ಲಿದೆ ನೋಡಿ ಅದರ ಸಂಪೂರ್ಣ ಮಾಹಿತಿ.

ಹೃದಯಕ್ಕೆ ಒಳ್ಳೆಯದು: ಆರೋಗ್ಯವಂತ ಹೃದಯ, ಉತ್ತಮ ಜೀವನಕ್ಕೆ ನಾಂದಿ. ಹೀಗಾಗಿ ಆರೋಗ್ಯವಂತ ಹೃದಯವನ್ನು ಕಾಪಾಡಿಕೊಳ್ಳಲು ಮೀನಿನ ಎಣ್ಣೆ ಹೆ್ಚ್ಚು ಸಹಕಾರಿಯಾಗಿದೆ. ದೇಹದಲ್ಲಿನ ಕೊಬ್ಬಿನ ಅಂಶವನ್ನು ಮೀನಿನ ಎಣ್ಣೆ ನಿಯಂತ್ರಿಸುತ್ತದೆ. ಜತೆಗೆ ರಕ್ತದೊತ್ತಡವನ್ನು ನಿಯಂತ್ರಿಸಿ ಹೃದಾಯಾಘಾತದ ಅಪಾಯವನ್ನು ತಡೆಯುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ: ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ಹಲವು ಕಾಯಿಲೆಗಳನ್ನು ತಡೆಯಬಹದು. ಕಣ್ಣು, ತಲೆ, ಹೃದಯಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ಮೀನಿನ ಎಣ್ಣೆ ತಡೆಯುತ್ತದೆ. ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಅಂಶಗಳು ಕೂಡ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೂಳೆಗಳ ಆರೋಗ್ಯಕ್ಕೆ ಉತ್ತಮ: ದೇಹದ ಚಲವಲನ ಸರಿಯಾಗಿ ಆಗಬೇಕಾದರೆ ಮೂಳೆಗಳ ಸಹಾಯ ಅತ್ಯಗತ್ಯ. ಆದ್ದರಿಂದ ಮೂಳಗೆಳ  ಆರೋಗ್ಯ ಕಾಪಾಡಿಕೊಳ್ಳಲು ಮೀನಿನ ಎಣ್ಣೆ ಸಹಾಯಕವಾಗಿದೆ.

ಮೆದುಳಿನ ಆರೋಗ್ಯ: ಮೀನಿನ ಎಣ್ಣೆಯ ಸೇವನೆಯಿಂದ ಮೆದುಳು ಚುರುಕಾಗಿ ಕಾರ್ಯನಿರ್ವಹಿಸುತ್ತದೆ.  ಒಮೆಗಾ 3 ಅಂಶಗಳು ಮೆದುಳಿನ ಕಾರ್ಯ ಚಟುವಟಿಕೆಯನ್ನು ಉತ್ತಮಗೊಳಿಸುತ್ತದೆ. ಹೀಗಾಗಿ ಪ್ರತಿದಿನ ಮೀನಿನ ಎಣ್ಣೆಯ ಬಳಕೆ ಮಾಡುವುದು ಉತ್ತಮ

ಚರ್ಮದ ಆರೋಗ್ಯವನ್ನು ಉತ್ತಮಪಡಿಸುತ್ತದೆ: ಮೀನಿನ ಎಣ್ಣೆಯ ಬಳಕೆಯಿಂದ ಚರ್ಮದ ಆರೋಗ್ಯ ಕೂಡ ಉತ್ತಮವಾಗುತ್ತದೆ. ಮೀನಿನ ಎಣ್ಣೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.  ವಯಸ್ಸಾದಂತೆ ಕಾಣುವ ಚರ್ಮವನ್ನು ಹೋಗಲಾಡಿಸಿ, ಹೊಳಪಿನ ಚರ್ಮವನ್ನು ನೀಡುತ್ತದೆ.

ಇದನ್ನೂ ಓದಿ:

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ