Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ

ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ಹಲವು ಕಾಯಿಲೆಗಳನ್ನು ತಡೆಯಬಹದು. ಕಣ್ಣು, ತಲೆ, ಹೃದಯಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ಮೀನಿನ ಎಣ್ಣೆ ತಡೆಯುತ್ತದೆ.

ಮೀನಿನ ಎಣ್ಣೆಯ ಬಳಕೆಯಿಂದಾಗುವ ಲಾಭಗಳೇನು? ಇಲ್ಲಿದೆ ಮಾಹಿತಿ
ಮೀನಿನ ಎಣ್ಣೆ (ಸಾಂಕೇತಿಕ ಚಿತ್ರ)
Follow us
TV9 Web
| Updated By: Pavitra Bhat Jigalemane

Updated on: Feb 22, 2022 | 4:32 PM

ದೇಹದ ಆರೋಗ್ಯ ವೃದ್ಧಿಗೆ ಮೀನಿನ ಸೇವನೆ ಉತ್ತಮ. ದೇಹದಲ್ಲಿನ ಮೂಳೆಗಳನ್ನು ಬಲಪಡಿಸಲು, ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಮೀನು ಸಹಕಾರಿ. ಅದೇ ರೀತಿ ಮೀನಿನ ಎಣ್ಣೆ ಕೂಡ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕವಾಗಿದೆ. ಮೀನಿನ ಮೇಲ್ಪದರದಲ್ಲಿನ  ಅಂಶವನ್ನು ಬಳಸಿ ಈ ಮೀನಿನ ಎಣ್ಣೆಯನ್ನು ತಯಾರಿಸಲಾಗುತ್ತದೆ.  ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಅಂಶಗಳು, ಪ್ಯಾಟಿ ಆಸಿಡ್​ಗಳು ಸಮೃದ್ಧವಾಗಿರುತ್ತವೆ. ಇವು ದೇಹದ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ನೆರವಾಗುತ್ತದೆ.  ಸಲ್ಮೋನ್​, ವೈಟ್​ ಫಿಶ್​ ಸೇರಿದಂತೆ  ವಿವಿಧ ರೀತಿಯ ಮೀನಿಗಳಿಂದ ಈ ಎಣ್ಣೆಯನ್ನು ತಯಾರಿಸಲಾಗುತ್ತದೆ. ಇದರ ಜತೆಗೆ ಮೀನಿನ ಎಣ್ಣೆಯಿಂದ ಇನ್ನೂ ಹಲವು ಉಪಯೋಗಗಳಿವೆ. ಇಲ್ಲಿದೆ ನೋಡಿ ಅದರ ಸಂಪೂರ್ಣ ಮಾಹಿತಿ.

ಹೃದಯಕ್ಕೆ ಒಳ್ಳೆಯದು: ಆರೋಗ್ಯವಂತ ಹೃದಯ, ಉತ್ತಮ ಜೀವನಕ್ಕೆ ನಾಂದಿ. ಹೀಗಾಗಿ ಆರೋಗ್ಯವಂತ ಹೃದಯವನ್ನು ಕಾಪಾಡಿಕೊಳ್ಳಲು ಮೀನಿನ ಎಣ್ಣೆ ಹೆ್ಚ್ಚು ಸಹಕಾರಿಯಾಗಿದೆ. ದೇಹದಲ್ಲಿನ ಕೊಬ್ಬಿನ ಅಂಶವನ್ನು ಮೀನಿನ ಎಣ್ಣೆ ನಿಯಂತ್ರಿಸುತ್ತದೆ. ಜತೆಗೆ ರಕ್ತದೊತ್ತಡವನ್ನು ನಿಯಂತ್ರಿಸಿ ಹೃದಾಯಾಘಾತದ ಅಪಾಯವನ್ನು ತಡೆಯುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ: ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ಹಲವು ಕಾಯಿಲೆಗಳನ್ನು ತಡೆಯಬಹದು. ಕಣ್ಣು, ತಲೆ, ಹೃದಯಕ್ಕೆ ಸಂಬಂಧಿಸಿದ ಅನಾರೋಗ್ಯವನ್ನು ಮೀನಿನ ಎಣ್ಣೆ ತಡೆಯುತ್ತದೆ. ಮೀನಿನ ಎಣ್ಣೆಯಲ್ಲಿರುವ ಒಮೆಗಾ 3 ಅಂಶಗಳು ಕೂಡ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಮೂಳೆಗಳ ಆರೋಗ್ಯಕ್ಕೆ ಉತ್ತಮ: ದೇಹದ ಚಲವಲನ ಸರಿಯಾಗಿ ಆಗಬೇಕಾದರೆ ಮೂಳೆಗಳ ಸಹಾಯ ಅತ್ಯಗತ್ಯ. ಆದ್ದರಿಂದ ಮೂಳಗೆಳ  ಆರೋಗ್ಯ ಕಾಪಾಡಿಕೊಳ್ಳಲು ಮೀನಿನ ಎಣ್ಣೆ ಸಹಾಯಕವಾಗಿದೆ.

ಮೆದುಳಿನ ಆರೋಗ್ಯ: ಮೀನಿನ ಎಣ್ಣೆಯ ಸೇವನೆಯಿಂದ ಮೆದುಳು ಚುರುಕಾಗಿ ಕಾರ್ಯನಿರ್ವಹಿಸುತ್ತದೆ.  ಒಮೆಗಾ 3 ಅಂಶಗಳು ಮೆದುಳಿನ ಕಾರ್ಯ ಚಟುವಟಿಕೆಯನ್ನು ಉತ್ತಮಗೊಳಿಸುತ್ತದೆ. ಹೀಗಾಗಿ ಪ್ರತಿದಿನ ಮೀನಿನ ಎಣ್ಣೆಯ ಬಳಕೆ ಮಾಡುವುದು ಉತ್ತಮ

ಚರ್ಮದ ಆರೋಗ್ಯವನ್ನು ಉತ್ತಮಪಡಿಸುತ್ತದೆ: ಮೀನಿನ ಎಣ್ಣೆಯ ಬಳಕೆಯಿಂದ ಚರ್ಮದ ಆರೋಗ್ಯ ಕೂಡ ಉತ್ತಮವಾಗುತ್ತದೆ. ಮೀನಿನ ಎಣ್ಣೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.  ವಯಸ್ಸಾದಂತೆ ಕಾಣುವ ಚರ್ಮವನ್ನು ಹೋಗಲಾಡಿಸಿ, ಹೊಳಪಿನ ಚರ್ಮವನ್ನು ನೀಡುತ್ತದೆ.

ಇದನ್ನೂ ಓದಿ:

Cancer Diet Food: ಈ ಆಹಾರಗಳು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್